38.6 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿರಾಷ್ಟ್ರೀಯ ಸುದ್ದಿವರದಿ

ಮೃತದೇಹ ಹೂತು ಹಾಕಿದ ಪ್ರಕರಣ ಮೊದಲು ಗುರುತಿಸಿದ ಸ್ಥಳದಲ್ಲಿ ಮೊದಲ ದಿನದ ಕಾರ್ಯಾಚರಣೆ ಮುಕ್ತಾಯ

ಬೆಳ್ತಂಗಡಿ: ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟ ಬಳಿ ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಮಿನಿ ಹಿಟಾಚಿ ಸತತ ಕಾರ್ಯಾಚರಣೆ ನಡೆಸಿದರೂ ಕಳೇಬರ ಸಿಕ್ಕಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

13 ಮಂದಿ ಪೌರಕಾರ್ಮಿಕರ ಸಹಾಯದಿಂದ ಆರಂಭದಲ್ಲಿ ಪಿಕ್ಕಾಸು, ಹಾರೆಯಲ್ಲಿ ಬೆಳಗ್ಗೆ 12.30 ಕ್ಕೆ ಆರಂಭವಾದ ಅಗೆಯುವ ಕೆಲಸ ಮಧ್ಯಾಹ್ನ 2.30 ರವರೆಗೆ ನಡೆಯಿತು. ಕಳೇಬರ ಅಲ್ಲೆಲ್ಲೂ ಸಿಗದ ಸಮಯದಲ್ಲಿ ದೂರುದಾರ ಮತ್ತಷ್ಟು ಅಗೆಯುವಂತೆ ಒತ್ತಾಯಿಸಿದರು. ಕಡೆಗೆ ತನಿಖಾಧಿಕಾರಿ ಅನುಚೇತ್ ಸೂಚನೆಯಂತೆ ಮಿನಿ ಹಿಟಾಚಿ ಕರೆಸಲಾಯಿತು. ಮಧ್ಯಾಹ್ನ 3.30 ರಿಂದ ಆರಂಭವಾದ ಹಿಟಾಚಿ ಕಾರ್ಯಾಚರಣೆ ಈವರೆಗೆ ನಿಂತಿಲ್ಲ. ನಿರಂತರ ಕಾರ್ಯಾಚರಣೆಯಿಂದ ಹೊಂಡದ ರೂಪವಾಗಿದೆ.

ಅನಾಮಿಕ ಗುರುತಿಸಿದ ಮೊದಲ ಸ್ಥಳದಲ್ಲೇ ಕಳೇಬರ ಸಿಗದಿರುವುದು, ಜತೆಗೆ ಮಳೆಯಿಂದಾಗಿ ಹೊಂಡದಲ್ಲಿ ಒರತೆ ನೀರು ತುಂಬುತ್ತಿರುವುದರಿಂದ ಕಾರ್ಯಾಚರಣೆಗೆ ತೊಡಕಾಗಿದೆ. ಕಾರ್ಯಾಚರಣೆಗೆ ಇದೀಗ ಶ್ವಾನ ದಳದ ಎಂಟ್ರಿಯಾಗಿದೆ. ಕಾರ್ಮಿಕರು ಹಾಗೂ ಹಿಟಾಚಿ ಕಾರ್ಯಾಚರಣೆ ನಡೆಸಿದರೂ ಸಿಗದ ಕಳೇಬರಹ ಬಹಳಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಇಂದು ಒಟ್ಟು 4 -5 ಗಂಟೆಗಳ ಕಾರ್ಯಾಚರಣೆ ನಡೆಸಿದರು ಕಳೇಬರಹ ಸಿಗದೆ ಇದ್ದು ಕಾರ್ಯಾಚರಣೆಗೆ ಮೊದಲ ಹಿನ್ನಡೆಯಾಗಿದ್ದು ಇಂದಿನ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ.

Related posts

ಬಳಂಜ ಬದಿನಡೆ ಕ್ಷೇತ್ರದಲ್ಲಿಪ್ರಶ್ನಾ ಚಿಂತನೆ

Suddi Udaya

ಮೂಡುಕೋಡಿ ಉಂಬೆಟ್ಟು ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ, ಸಾಂತ್ವನ ನಿಧಿ, ಸನ್ಮಾನ ಕಾರ್ಯಕ್ರಮ

Suddi Udaya

4ನೇ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್: ಉಜಿರೆ ತಂಡಕ್ಕೆ ಹಲವು ಪ್ರಶಸ್ತಿ

Suddi Udaya

ದ. ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ: ಡಾ.ಹೆಗ್ಗಡೆಯವರಿಂದ ಸಮ್ಮೇಳನದ ಲಾಂಛನ ಬಿಡುಗಡೆ

Suddi Udaya

ಬೈಕ್ ಡಿಕ್ಕಿ ಗಾಯಾಳು ಕಡಿರುದ್ಯಾವರಅಂತರ ಲೋಕಯ್ಯ ಗೌಡ ಮೃತ್ಯು

Suddi Udaya

ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶು ಮಂದಿರದಲ್ಲಿ ಶಾರದಾ ಪೂಜೆ, ಅಕ್ಷರ ಅಭ್ಯಾಸ ಮತ್ತು ವಾಹನ ಪೂಜೆ

Suddi Udaya
error: Content is protected !!