23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿರಾಷ್ಟ್ರೀಯ ಸುದ್ದಿವರದಿ

ಮೃತದೇಹ ಹೂತು ಹಾಕಿದ ಪ್ರಕರಣ ಮೊದಲು ಗುರುತಿಸಿದ ಸ್ಥಳದಲ್ಲಿ ಮೊದಲ ದಿನದ ಕಾರ್ಯಾಚರಣೆ ಮುಕ್ತಾಯ

ಬೆಳ್ತಂಗಡಿ: ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟ ಬಳಿ ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಮಿನಿ ಹಿಟಾಚಿ ಸತತ ಕಾರ್ಯಾಚರಣೆ ನಡೆಸಿದರೂ ಕಳೇಬರ ಸಿಕ್ಕಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

13 ಮಂದಿ ಪೌರಕಾರ್ಮಿಕರ ಸಹಾಯದಿಂದ ಆರಂಭದಲ್ಲಿ ಪಿಕ್ಕಾಸು, ಹಾರೆಯಲ್ಲಿ ಬೆಳಗ್ಗೆ 12.30 ಕ್ಕೆ ಆರಂಭವಾದ ಅಗೆಯುವ ಕೆಲಸ ಮಧ್ಯಾಹ್ನ 2.30 ರವರೆಗೆ ನಡೆಯಿತು. ಕಳೇಬರ ಅಲ್ಲೆಲ್ಲೂ ಸಿಗದ ಸಮಯದಲ್ಲಿ ದೂರುದಾರ ಮತ್ತಷ್ಟು ಅಗೆಯುವಂತೆ ಒತ್ತಾಯಿಸಿದರು. ಕಡೆಗೆ ತನಿಖಾಧಿಕಾರಿ ಅನುಚೇತ್ ಸೂಚನೆಯಂತೆ ಮಿನಿ ಹಿಟಾಚಿ ಕರೆಸಲಾಯಿತು. ಮಧ್ಯಾಹ್ನ 3.30 ರಿಂದ ಆರಂಭವಾದ ಹಿಟಾಚಿ ಕಾರ್ಯಾಚರಣೆ ಈವರೆಗೆ ನಿಂತಿಲ್ಲ. ನಿರಂತರ ಕಾರ್ಯಾಚರಣೆಯಿಂದ ಹೊಂಡದ ರೂಪವಾಗಿದೆ.

ಅನಾಮಿಕ ಗುರುತಿಸಿದ ಮೊದಲ ಸ್ಥಳದಲ್ಲೇ ಕಳೇಬರ ಸಿಗದಿರುವುದು, ಜತೆಗೆ ಮಳೆಯಿಂದಾಗಿ ಹೊಂಡದಲ್ಲಿ ಒರತೆ ನೀರು ತುಂಬುತ್ತಿರುವುದರಿಂದ ಕಾರ್ಯಾಚರಣೆಗೆ ತೊಡಕಾಗಿದೆ. ಕಾರ್ಯಾಚರಣೆಗೆ ಇದೀಗ ಶ್ವಾನ ದಳದ ಎಂಟ್ರಿಯಾಗಿದೆ. ಕಾರ್ಮಿಕರು ಹಾಗೂ ಹಿಟಾಚಿ ಕಾರ್ಯಾಚರಣೆ ನಡೆಸಿದರೂ ಸಿಗದ ಕಳೇಬರಹ ಬಹಳಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಇಂದು ಒಟ್ಟು 4 -5 ಗಂಟೆಗಳ ಕಾರ್ಯಾಚರಣೆ ನಡೆಸಿದರು ಕಳೇಬರಹ ಸಿಗದೆ ಇದ್ದು ಕಾರ್ಯಾಚರಣೆಗೆ ಮೊದಲ ಹಿನ್ನಡೆಯಾಗಿದ್ದು ಇಂದಿನ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ.

Related posts

ಮದ್ದಡ್ಕ ತೋಟಗಾರಿಕೆ ಇಲಾಖೆಯ ಆವರಣ ಗೋಡೆ ಕುಸಿತ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಓಡಿಲ್ನಾಳ ಮತ್ತು ಕುವೆಟ್ಟು ಗ್ರಾಮ ಸಮಿತಿಯ ತ್ರೈಮಾಸಿಕ ಸಭೆ ಹಾಗೂ ವನಮಹೋತ್ಸವ

Suddi Udaya

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ‘ಭಾಷಾ ವಿಷಯದ ಶಿಕ್ಷಕರುಗಳ ಕಾರ್ಯಾಗಾರ

Suddi Udaya

ಕಾಶಿಪಟ್ಣ ಗ್ರಾ.ಪಂ. ಅಧ್ಯಕ್ಷರಾಗಿ ಸತೀಶ್ ಕಾಶಿಪಟ್ಣಅವಿರೋಧ ಆಯ್ಕೆ

Suddi Udaya

ಗುರುವಾಯನಕೆರೆ: ನಿಲ್ಲಿಸಿದ್ದ ಮೋಟಾರ್‌ ಸೈಕಲ್‌ ಕಳವು

Suddi Udaya

ಅಂಡಿಂಜೆ: ನೆಲ್ಲಿಂಗೇರಿ ನಿವಾಸಿ ವಿಶ್ವನಾಥ ಭಂಡಾರಿ ನಿಧನ

Suddi Udaya
error: Content is protected !!