25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಮೃತದೇಹ ಹೂತು ಹಾಕಿದ ಪ್ರಕರಣ ಮೊದಲು ಗುರುತಿಸಿದ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದರು ಇನ್ನೂ ಪತ್ತೆಯಾಗದ ಕಳೇಬರ ಕಾರ್ಯಾಚರಣೆಗೆ ಶ್ವಾನ ದಳ ಎಂಟ್ರಿ

ಬೆಳ್ತಂಗಡಿ: ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟ ಬಳಿ ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಮಿನಿ ಹಿಟಾಚಿ ಸತತ ಕಾರ್ಯಾಚರಣೆ ನಡೆಸಿದರೂ ಕಳೇಬರ ಸಿಕ್ಕಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

12 ಮಂದಿ ಪೌರಕಾರ್ಮಿಕರ ಸಹಾಯದಿಂದ ಆರಂಭದಲ್ಲಿ ಪಿಕ್ಕಾಸು, ಹಾರೆಯಲ್ಲಿ ಬೆಳಗ್ಗೆ 12.30 ಕ್ಕೆ ಆರಂಭವಾದ ಅಗೆಯುವ ಕೆಲಸ ಮಧ್ಯಾಹ್ನ 2.30 ರವರೆಗೆ ನಡೆಯಿತು. ಕಳೆಬರ ಅಲ್ಲೆಲ್ಲೂ ಸಿಗದ ಸಮಯದಲ್ಲಿ ದೂರುದಾರ ಮತ್ತಷ್ಟು ಅಗೆಯುವಂತೆ ಒತ್ತಾಯಿಸಿದರು. ಕಡೆಗೆ ತನಿಖಾಧಿಕಾರಿ ಅನುಚೇತ್ ಸೂಚನೆಯಂತೆ ಮಿನಿ ಹಿಟಾಚಿ ಕರೆಸಲಾಯಿತು. ಮಧ್ಯಾಹ್ನ 3.30 ರಿಂದ ಆರಂಭವಾದ ಹಿಟಾಚಿ ಕಾರ್ಯಾಚರಣೆ ಈವರೆಗೆ ನಿಂತಿಲ್ಲ. ನಿರಂತರ ಕಾರ್ಯಾಚರಣೆಯಿಂದ ಹೊಂಡದ ರೂಪವಾಗಿದೆ.

ಅನಾಮಿಕ ಗುರುತಿಸಿದ ಮೊದಲ ಸ್ಥಳದಲ್ಲೇ ಕಳೇಬರ ಸಿಗದಿರುವುದು, ಜತೆಗೆ ಮಳೆಯಿಂದಾಗಿ ಹೊಂಡದಲ್ಲಿ ಒರತೆ ನೀರು ತುಂಬುತ್ತಿರುವುದರಿಂದ ಕಾರ್ಯಾಚರಣೆಗೆ ತೊಡಕಾಗಿದೆ. ಕಾರ್ಯಾಚರಣೆಗೆ ಇದೀಗ ಶ್ವಾನ ದಳದ ಎಂಟ್ರಿಯಾಗಿದೆ. ಕಾರ್ಮಿಕರು ಹಾಗೂ ಹಿಟಾಚಿ ಕಾರ್ಯಾಚರಣೆ ನಡೆಸಿದರೂ ಸಿಗದ ಕಳೇಬರಹ ಬಹಳಷ್ಟು ಕುತೂಹಲಕ್ಕೆ ಕಾರಣವಾಗಿದೆ.

Related posts

ಕುಂಟಿನಿ ಸ.ಕಿ.ಪ್ರಾ. ಶಾಲೆಯ ನೂತನ ಅಧ್ಯಕ್ಷರಾಗಿ ಮೊಹಮ್ಮದ್ ಇರ್ಫಾನ್ ಕುಂಟಿನಿ ಪುನರಾಯ್ಕೆ

Suddi Udaya

ವಿವಿಧೆಡೆ ಶಾಸಕ ಹರೀಶ್ ಪೂಂಜ ಮತ ಯಾಚನೆ

Suddi Udaya

ದ.ಕ.ಜಿ.ಪಂ.ಹಿ. ಪ್ರಾ. ಕೊಡಿಯಾಲಬೈಲು ಶಾಲೆಯಲ್ಲಿ ಸಾಮಾಜಿಕ ಪರಿಶೋಧನಾ ಶಾಲಾ ಪೋಷಕರ ಸಭೆ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು : ರಾ. ಸೇ ಯೋಜನಾ ದಿನಾಚರಣೆ ಹಾಗೂ ಪ್ರಾಚಾರ್ಯರಿಗೆ ಅಭಿನಂದನೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ: ವಿವಿಧ ಸಮಿತಿಗಳ ರಚನೆ -ಸಂಚಾಲಕ ಹಾಗೂ ಉಪಸಂಚಾಲಕರ ಆಯ್ಕೆ

Suddi Udaya

ಕಲಾಪೋಷಕ ಟಿ.ಶಾಮ್ ಭಟ್ ಇವರಿಗೆ ಯಕ್ಷಭಾರತಿ ದಶಮಾನೋತ್ಸವ ಗೌರವ

Suddi Udaya
error: Content is protected !!