September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಮೃತದೇಹ ಹೂತು ಹಾಕಿದ ಪ್ರಕರಣ ಮೊದಲು ಗುರುತಿಸಿದ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದರು ಇನ್ನೂ ಪತ್ತೆಯಾಗದ ಕಳೇಬರ ಕಾರ್ಯಾಚರಣೆಗೆ ಶ್ವಾನ ದಳ ಎಂಟ್ರಿ

ಬೆಳ್ತಂಗಡಿ: ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟ ಬಳಿ ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಮಿನಿ ಹಿಟಾಚಿ ಸತತ ಕಾರ್ಯಾಚರಣೆ ನಡೆಸಿದರೂ ಕಳೇಬರ ಸಿಕ್ಕಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

12 ಮಂದಿ ಪೌರಕಾರ್ಮಿಕರ ಸಹಾಯದಿಂದ ಆರಂಭದಲ್ಲಿ ಪಿಕ್ಕಾಸು, ಹಾರೆಯಲ್ಲಿ ಬೆಳಗ್ಗೆ 12.30 ಕ್ಕೆ ಆರಂಭವಾದ ಅಗೆಯುವ ಕೆಲಸ ಮಧ್ಯಾಹ್ನ 2.30 ರವರೆಗೆ ನಡೆಯಿತು. ಕಳೆಬರ ಅಲ್ಲೆಲ್ಲೂ ಸಿಗದ ಸಮಯದಲ್ಲಿ ದೂರುದಾರ ಮತ್ತಷ್ಟು ಅಗೆಯುವಂತೆ ಒತ್ತಾಯಿಸಿದರು. ಕಡೆಗೆ ತನಿಖಾಧಿಕಾರಿ ಅನುಚೇತ್ ಸೂಚನೆಯಂತೆ ಮಿನಿ ಹಿಟಾಚಿ ಕರೆಸಲಾಯಿತು. ಮಧ್ಯಾಹ್ನ 3.30 ರಿಂದ ಆರಂಭವಾದ ಹಿಟಾಚಿ ಕಾರ್ಯಾಚರಣೆ ಈವರೆಗೆ ನಿಂತಿಲ್ಲ. ನಿರಂತರ ಕಾರ್ಯಾಚರಣೆಯಿಂದ ಹೊಂಡದ ರೂಪವಾಗಿದೆ.

ಅನಾಮಿಕ ಗುರುತಿಸಿದ ಮೊದಲ ಸ್ಥಳದಲ್ಲೇ ಕಳೇಬರ ಸಿಗದಿರುವುದು, ಜತೆಗೆ ಮಳೆಯಿಂದಾಗಿ ಹೊಂಡದಲ್ಲಿ ಒರತೆ ನೀರು ತುಂಬುತ್ತಿರುವುದರಿಂದ ಕಾರ್ಯಾಚರಣೆಗೆ ತೊಡಕಾಗಿದೆ. ಕಾರ್ಯಾಚರಣೆಗೆ ಇದೀಗ ಶ್ವಾನ ದಳದ ಎಂಟ್ರಿಯಾಗಿದೆ. ಕಾರ್ಮಿಕರು ಹಾಗೂ ಹಿಟಾಚಿ ಕಾರ್ಯಾಚರಣೆ ನಡೆಸಿದರೂ ಸಿಗದ ಕಳೇಬರಹ ಬಹಳಷ್ಟು ಕುತೂಹಲಕ್ಕೆ ಕಾರಣವಾಗಿದೆ.

Related posts

ಕಬಡ್ಡಿ ಪಂದ್ಯಾಟದಲ್ಲಿ ಸುಲ್ಕೇರಿಯ ಶಶಿಕಾಂತ್ ರವರ ವಿಶೇಷ ಸಾಧನೆ: ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಧಾರ್ಮಿಕ ಹಾಗೂ ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ರವರಿಗೆ ಮನವಿ ಸಲ್ಲಿಸಿದ ಶಾಸಕ ಹರೀಶ್ ಪೂಂಜ

Suddi Udaya

ನಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘದ ವಾರ್ಷಿಕ ಪೂಜಾ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya

ಉಜಿರೆಯಲ್ಲಿ ವಿಶ್ವ ಕೈ ತೊಳೆಯುವ ದಿನಾಚರಣೆ

Suddi Udaya

ಸೌತಡ್ಕ : ಗೇರು ಪ್ಲಾಂಟೇಶನ್ ನಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷ

Suddi Udaya
error: Content is protected !!