22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಮೃತದೇಹ ಹೂತು ಹಾಕಿದ ಪ್ರಕರಣ ಮೊದಲು ಗುರುತಿಸಿದ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದರು ಇನ್ನೂ ಪತ್ತೆಯಾಗದ ಕಳೇಬರ ಕಾರ್ಯಾಚರಣೆಗೆ ಶ್ವಾನ ದಳ ಎಂಟ್ರಿ

ಬೆಳ್ತಂಗಡಿ: ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟ ಬಳಿ ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಮಿನಿ ಹಿಟಾಚಿ ಸತತ ಕಾರ್ಯಾಚರಣೆ ನಡೆಸಿದರೂ ಕಳೇಬರ ಸಿಕ್ಕಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

12 ಮಂದಿ ಪೌರಕಾರ್ಮಿಕರ ಸಹಾಯದಿಂದ ಆರಂಭದಲ್ಲಿ ಪಿಕ್ಕಾಸು, ಹಾರೆಯಲ್ಲಿ ಬೆಳಗ್ಗೆ 12.30 ಕ್ಕೆ ಆರಂಭವಾದ ಅಗೆಯುವ ಕೆಲಸ ಮಧ್ಯಾಹ್ನ 2.30 ರವರೆಗೆ ನಡೆಯಿತು. ಕಳೆಬರ ಅಲ್ಲೆಲ್ಲೂ ಸಿಗದ ಸಮಯದಲ್ಲಿ ದೂರುದಾರ ಮತ್ತಷ್ಟು ಅಗೆಯುವಂತೆ ಒತ್ತಾಯಿಸಿದರು. ಕಡೆಗೆ ತನಿಖಾಧಿಕಾರಿ ಅನುಚೇತ್ ಸೂಚನೆಯಂತೆ ಮಿನಿ ಹಿಟಾಚಿ ಕರೆಸಲಾಯಿತು. ಮಧ್ಯಾಹ್ನ 3.30 ರಿಂದ ಆರಂಭವಾದ ಹಿಟಾಚಿ ಕಾರ್ಯಾಚರಣೆ ಈವರೆಗೆ ನಿಂತಿಲ್ಲ. ನಿರಂತರ ಕಾರ್ಯಾಚರಣೆಯಿಂದ ಹೊಂಡದ ರೂಪವಾಗಿದೆ.

ಅನಾಮಿಕ ಗುರುತಿಸಿದ ಮೊದಲ ಸ್ಥಳದಲ್ಲೇ ಕಳೇಬರ ಸಿಗದಿರುವುದು, ಜತೆಗೆ ಮಳೆಯಿಂದಾಗಿ ಹೊಂಡದಲ್ಲಿ ಒರತೆ ನೀರು ತುಂಬುತ್ತಿರುವುದರಿಂದ ಕಾರ್ಯಾಚರಣೆಗೆ ತೊಡಕಾಗಿದೆ. ಕಾರ್ಯಾಚರಣೆಗೆ ಇದೀಗ ಶ್ವಾನ ದಳದ ಎಂಟ್ರಿಯಾಗಿದೆ. ಕಾರ್ಮಿಕರು ಹಾಗೂ ಹಿಟಾಚಿ ಕಾರ್ಯಾಚರಣೆ ನಡೆಸಿದರೂ ಸಿಗದ ಕಳೇಬರಹ ಬಹಳಷ್ಟು ಕುತೂಹಲಕ್ಕೆ ಕಾರಣವಾಗಿದೆ.

Related posts

ಮಡಂತ್ಯಾರು: ಸಾಲುಮರ ಬಳಿ ನೀರಿನ ಟ್ಯಾಂಕರ್ ಹಾಗೂ ಬೈಕ್ ನಡುವೆ ಅಪಘಾತ

Suddi Udaya

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆಗೆ ಪೊಲೀಸರ ನಿರ್ಬಂಧ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ನಿಡ್ಲೆ: ನಿವೃತ್ತ ಶಿಕ್ಷಕ ರಾಮಣ್ಣ ಪೂಜಾರಿ ನಿಧನ

Suddi Udaya

ಕೊಕ್ಕಡ ಕಪಿಲಾ ಜೇಸಿ ಸಂಸ್ಥೆಯ ಜೇಸಿ ಸಪ್ತಾಹ

Suddi Udaya

ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ : ಮುಂಡಾಜೆಯ ತೇಜಲ್ ಕೆ .ಆರ್ ರವರಿಗೆ ಬೆಳ್ಳಿಯ ಪದಕ

Suddi Udaya
error: Content is protected !!