25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಮನಃಶಾಸ್ತ್ರ ವಿಭಾಗದಿಂದ ಕಾರ್ಯಾಗಾರ


ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಧರ್ಮಸ್ಥಳದಲ್ಲಿ ಮನೋವಿಜ್ಞಾನ ವಿಭಾಗ
ಎಸ್‌ಡಿಎಂ ಕಾಲೇಜು ಉಜಿರೆ (ಸ್ವಾಯತ್ತ) ಇದರ ಸಂಯುಕ್ತ ಆಶಯದೊಂದಿಗೆ ಸ್ವಾಸ್ಥ್ಯ ಮನಸ್ ಶಿಕ್ಷಾ ಎಂಬ ಶೀರ್ಷಿಕೆ ಅಡಿಯಲ್ಲಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಾಗಾರದ ಸಂಘಟಕರಾದ ಶ್ರೀಮತಿ ಪದ್ಮಶ್ರೀ. ಕೆ ಸಹಾಯಕ ಪ್ರಾಧ್ಯಾಪಕರು ಮನೋವಿಜ್ಞಾನ ವಿಭಾಗ
ಎಸ್‌ಡಿಎಂ ಕಾಲೇಜು ಉಜಿರೆ (ಸ್ವಾಯತ್ತ) ಇವರು ಆಗಮಿಸಿದ್ದರು. ಇವರು ಜ್ಯೋತಿ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮನೋವಿಜ್ಞಾನ ವಿಭಾಗ ಎಸ್‌ಡಿಎಂ ಕಾಲೇಜು ಉಜಿರೆ ಇಲ್ಲಿನ ವಿದ್ಯಾರ್ಥಿಗಳು ಈ ಕಾರ್ಯಾಗಾರವನ್ನು ನಡೆಸಿಕೊಟ್ಟರು.

ಕಾರ್ಯಗಾರದಲ್ಲಿ ವಿದ್ಯಾರ್ಥಿಗಳ ಮನಸ್ಸಿನ ಹಿಡಿತ, ಓದಿನ ಕಡೆಗಿನ ಗಮನ ,ಸಮಯದ ಸದುಪಯೋಗ ಹಾಗೂ ಅದನ್ನ ಉಪಯೋಗಿಸುವ ಕಲೆ, ಜೊತೆಗೆ ವಿದ್ಯಾರ್ಥಿಗಳ ಸಾಧನೆಗೆ ಇರುವ ವಿವಿಧ ದಾರಿಗಳು ಇತ್ಯಾದಿಗಳ ಕುರಿತಾಗಿ ಹಲವಾರು ಉದಾಹರಣೆ, ಚಟುವಟಿಕೆ ಇತ್ಯಾದಿಗಳ ಮೂಲಕ ವಿದ್ಯಾರ್ಥಿಗಳಿಗೆ ತಿಳಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಈ ಕಾರ್ಯಕ್ರಮದ ಕುರಿತಾಗಿ ಹಾಗೂ ಇದರ ಅಗತ್ಯತೆಗಳ ಕುರಿತಾಗಿ ವಿದ್ಯಾರ್ಥಿಗಳಿಗೆ ತಿಳಿಯಪಡಿಸಿದರು. . ಶಾಲಾ ವಿದ್ಯಾರ್ಥಿನಿ ಕುಮಾರಿ ನಿವೇದ್ಯಯ ನಿರ್ವಹಿಸಿದ ಕಾರ್ಯಕ್ರಮದಲ್ಲಿ ಕುಮಾರಿ ತನ್ವಿ ಸ್ವಾಗತಿಸಿ, ವಿಜಯ್ ಸಂಘಟಕರ ಕಿರುಪರಿಚಯವನ್ನು ನೀಡಿ ಕುಮಾರಿ ಸಿಂಧೂರ ಧನ್ಯವಾದವಿತ್ತರು.

Related posts

ಫೆ.17 ಬಳಂಜದಲ್ಲಿ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ಕಬಡ್ಡಿ ಪಂದ್ಯಾಟ: ಪ್ರಗತಿಪರ ಕೃಷಿಕ ತಿಮ್ಮಪ್ಪ ಪೂಜಾರಿಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಿವೃತ್ತಿಗೊಂಡ ಮುರಳಿ ಕೃಷ್ಣ ಆಚಾರ್ಯರಿಗೆ ಬಲ್ಮಠ ಸ.ಪ್ರ.ದ. ಮಹಿಳಾ ಕಾಲೇಜಿನಲ್ಲಿ ಸನ್ಮಾನ

Suddi Udaya

ಸೌತಡ್ಕ : ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ರವರ ಪುತ್ರಿಗೆ ಐಟಿ ಕಂಪೆನಿಯಲ್ಲಿ ಉದ್ಯೋಗ ದೊರಕಿಸಿಕೊಟ್ಟ ರಕ್ಷಿತ್ ಶಿವರಾo

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಅನ್ನಪೂರ್ಣ ಛತ್ರದಲ್ಲಿ ಸೆಲ್ಕೋ ಪೌಂಢೇಶನ್ ಪ್ರಾಯೋಜಕತ್ವದಲ್ಲಿ ಅಳವಡಿಸಲಾದ ಸೌರ ವಿದ್ಯುತ್ ಘಟಕಕ್ಕೆ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರ ಭಾರತಿ ಅಭ್ಯರ್ಥಿಗಳ ಆಯ್ಕೆ

Suddi Udaya

ಮದ್ರಸ ವಾರ್ಷಿಕ ಪಬ್ಲಿಕ್ ಪರೀಕ್ಷೆ: ಪೆರಾಲ್ದರಕಟ್ಟೆ ಹಿದಾಯತುಲ್ ಇಸ್ಲಾಂ ಮದರಸ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!