September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಮನಃಶಾಸ್ತ್ರ ವಿಭಾಗದಿಂದ ಕಾರ್ಯಾಗಾರ


ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಧರ್ಮಸ್ಥಳದಲ್ಲಿ ಮನೋವಿಜ್ಞಾನ ವಿಭಾಗ
ಎಸ್‌ಡಿಎಂ ಕಾಲೇಜು ಉಜಿರೆ (ಸ್ವಾಯತ್ತ) ಇದರ ಸಂಯುಕ್ತ ಆಶಯದೊಂದಿಗೆ ಸ್ವಾಸ್ಥ್ಯ ಮನಸ್ ಶಿಕ್ಷಾ ಎಂಬ ಶೀರ್ಷಿಕೆ ಅಡಿಯಲ್ಲಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಾಗಾರದ ಸಂಘಟಕರಾದ ಶ್ರೀಮತಿ ಪದ್ಮಶ್ರೀ. ಕೆ ಸಹಾಯಕ ಪ್ರಾಧ್ಯಾಪಕರು ಮನೋವಿಜ್ಞಾನ ವಿಭಾಗ
ಎಸ್‌ಡಿಎಂ ಕಾಲೇಜು ಉಜಿರೆ (ಸ್ವಾಯತ್ತ) ಇವರು ಆಗಮಿಸಿದ್ದರು. ಇವರು ಜ್ಯೋತಿ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮನೋವಿಜ್ಞಾನ ವಿಭಾಗ ಎಸ್‌ಡಿಎಂ ಕಾಲೇಜು ಉಜಿರೆ ಇಲ್ಲಿನ ವಿದ್ಯಾರ್ಥಿಗಳು ಈ ಕಾರ್ಯಾಗಾರವನ್ನು ನಡೆಸಿಕೊಟ್ಟರು.

ಕಾರ್ಯಗಾರದಲ್ಲಿ ವಿದ್ಯಾರ್ಥಿಗಳ ಮನಸ್ಸಿನ ಹಿಡಿತ, ಓದಿನ ಕಡೆಗಿನ ಗಮನ ,ಸಮಯದ ಸದುಪಯೋಗ ಹಾಗೂ ಅದನ್ನ ಉಪಯೋಗಿಸುವ ಕಲೆ, ಜೊತೆಗೆ ವಿದ್ಯಾರ್ಥಿಗಳ ಸಾಧನೆಗೆ ಇರುವ ವಿವಿಧ ದಾರಿಗಳು ಇತ್ಯಾದಿಗಳ ಕುರಿತಾಗಿ ಹಲವಾರು ಉದಾಹರಣೆ, ಚಟುವಟಿಕೆ ಇತ್ಯಾದಿಗಳ ಮೂಲಕ ವಿದ್ಯಾರ್ಥಿಗಳಿಗೆ ತಿಳಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಈ ಕಾರ್ಯಕ್ರಮದ ಕುರಿತಾಗಿ ಹಾಗೂ ಇದರ ಅಗತ್ಯತೆಗಳ ಕುರಿತಾಗಿ ವಿದ್ಯಾರ್ಥಿಗಳಿಗೆ ತಿಳಿಯಪಡಿಸಿದರು. . ಶಾಲಾ ವಿದ್ಯಾರ್ಥಿನಿ ಕುಮಾರಿ ನಿವೇದ್ಯಯ ನಿರ್ವಹಿಸಿದ ಕಾರ್ಯಕ್ರಮದಲ್ಲಿ ಕುಮಾರಿ ತನ್ವಿ ಸ್ವಾಗತಿಸಿ, ವಿಜಯ್ ಸಂಘಟಕರ ಕಿರುಪರಿಚಯವನ್ನು ನೀಡಿ ಕುಮಾರಿ ಸಿಂಧೂರ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕ- ಶಿಕ್ಷಕರ ಸಭೆ

Suddi Udaya

ಶ್ರೀ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಲಾ ಹಾಗೂ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸರ್ ಭೇಟಿ

Suddi Udaya

ಆಕ್ಸಿಸ್ ಮ್ಯಾಕ್ಸ್ ಲೈಫ್ ಇನ್ಶುರೆನ್ಸ್ ಕಂಪನಿಯ ವತಿಯಿಂದ ಸಿನಿಮಾ , ಧಾರವಾಹಿ , ರಂಗಭೂಮಿಯಲ್ಲಿ ವಿಶೇಷ ಸಾಧನೆಗೈದ ಪ್ರಕಾಶ್ ಸವಣಾಲು ರವರಿಗೆ ಕಲಾರತ್ನ ಪ್ರಶಸ್ತಿ

Suddi Udaya

ಬಂದಾರು ಗ್ರಾ.ಪಂ. ಅಧ್ಯಕ್ಷರಾಗಿ ದಿನೇಶ್ ಗೌಡ , ಉಪಾಧ್ಯಕ್ಷರಾಗಿ ಪುಷ್ಪಾವತಿ ಆಯ್ಕೆ

Suddi Udaya

ಬಂದಾರು: ಕುಂಟಾಲಪಳಿಕೆ ಪ್ರದೇಶದ ನೆಲ್ಲಿಗೇರುನಲ್ಲಿ ಒಂಟಿ ಸಲಗ ದಾಳಿ: ಭತ್ತದ ಕೃಷಿಗೆ ಹಾನಿ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ: ಪಿಡಿಒ ಗಾಯತ್ರಿಯವರಿಗೆ ಬೀಳ್ಕೊಡುಗೆ- ಕಾರ್ಯವೈಖರಿಗೆ ಗ್ರಾಮಸ್ಥರಿಂದ ಶ್ಲಾಘನೆ

Suddi Udaya
error: Content is protected !!