March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ವಿದ್ವತ್ ಪಿ.ಯು ಕಾಲೇಜಿನಲ್ಲಿ “ ಕಾರ್ಗಿಲ್ ವಿಜಯ್ ದಿವಸ್ ”ಆಚರಣೆ


ಗುರುವಾಯನಕೆರೆ: ಶೈಕ್ಷಣಿಕ ಕ್ಷೇತ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಮುಂಚೂಣಿಯಲ್ಲಿರುವ ವಿದ್ವತ್ ಪಿ.ಯು
ಕಾಲೇಜಿನಲ್ಲಿ “ ಕಾರ್ಗಿಲ್ ವಿಜಯ್ ದಿವಸ್ ” ವನ್ನು ಕಾಲೇಜಿನ ಸಭಾಂಗಣದಲ್ಲಿ ಆಚರಿಸಲಾಯಿತು.


ಕಾಲೇಜಿನ ಶೈಕ್ಷಣಿಕ ನಿರ್ದೇಶಕ ಗಂಗಾಧರ.ಇ. ಮಂಡಗಳಲೆ ಮಾತನಾಡಿ, 1999 ರ ಕಾರ್ಗಿಲ್ ಯುದ್ಧದಲ್ಲಿ ಪ್ರಾಣ ತ್ಯಾಗ ಮಾಡಿದ ಭಾರತೀಯ ಸೈನಿಕರ ಶೌರ್ಯವನ್ನು ಗೌರವಿಸಲು ಜು.26 ರಂದು ದೇಶದಾದ್ಯಂತ “ ಕಾರ್ಗಿಲ್ ವಿಜಯ್ ದಿವಸ್ ” ವನ್ನು ಆಚರಿಸಲಾಗುತ್ತದೆ. ಈ ದಿನವು ಸಂಘರ್ಷದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಸಾಧಿಸಿದ ವಿಜಯ ಮತ್ತು ಅಪರೇಷನ್ ವಿಜಯ್ ನ ಯಶಸ್ವಿ ಸಮಾಪ್ತಿಗೆ 26 ನೇ ವಾರ್ಷಿಕೋತ್ಸವವನ್ನು ಆಚರಿಸಲಾಗುತ್ತಿದೆ. ಸುಮಾರು 60 ದಿನಗಳ ಕಾಲ ನಡೆದ ಕಾರ್ಗಿಲ್ ಯುದ್ಧ ಈ ದಿನದಂದು ಕೊನೆಗೊಂಡಿತು. ಭಾರತೀಯ ರಕ್ಷಣಾ ಪಡೆಗಳು ಪಾಕಿಸ್ತಾನ ಸೈನ್ಯಕ್ಕೆ ಸೂಕ್ತ ಉತ್ತರ ನೀಡಿ ತ್ರಿವರ್ಣ ಧ್ವಜವನ್ನು ಹಾರಿಸಿ ಸಂಭ್ರಮಿಸಿದ ದಿನವಾಗಿದೆ ಎಂದು ತಿಳಿಸಿದರು.

ನಂತರ ವಿದ್ಯಾರ್ಥಿಗಳಿಗೆ ಕಾರ್ಗಿಲ್ ನಲ್ಲಿ ಯೋಧರು ಹೋರಾಡಿದ ವೀಡಿಯೋ ದೃಶ್ಯಗಳನ್ನು, ಯೋಧರು ಸಂಭ್ರಮಿಸಿದ
ಕ್ಷಣಗಳ ವೀಡಿಯೋಗಳನ್ನು, ಮತ್ತು ದೇಶಭಕ್ತಿಗೀತೆಗಳ ವೀಡಿಯೋಗಳನ್ನು ಪ್ರದರ್ಶಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ, ಕಾಲೇಜಿನ ಆಡಳಿತಾಧಿಕಾರಿ ಅಶೋಕ್ ಕುಮಾರ್ ಶೆಟ್ಟಿ,
ಪ್ರಾಂಶುಪಾಲರಾದ ಹರೀಶ್ ಕೆ.ಆರ್, ಉಪಸ್ಥಿತರಿದ್ದರು.

ಕಾಲೇಜಿನ ಕನ್ನಡ ಉಪನ್ಯಾಸಕ ನೀಲಕಂಠ ಸ್ವಾಗತಿಸಿದರು.

Related posts

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಡಿಸಿಎ-ಬ್ಯೂಟಿಷಿಯನ್ ಕೋರ್ಸ್‌ಗಳ ದಾಖಲಾತಿ ಪ್ರಾರಂಭ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ತಾ| ಮಟ್ಟದ ಪುಟ್ ಬಾಲ್ ಪಂದ್ಯಾಟ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಸ್ಪಂದನ; ಹೃದಯ ಸ್ತಂಭನ ಹೃದಯಾಘಾತ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಗಾಳಿ ಮಳೆಗೆ ಹಾನಿಗೊಂಡ ಕಣಿಯೂರು ಮಾದ ಸಪಲ್ಯ ರವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ ವೈಯಕ್ತಿಕ ಧನ ಸಹಾಯ ಹಸ್ತಾಂತರ

Suddi Udaya

ಬಾಂಗ್ಲಾ ಹಿಂದು ಗಳಿಗಾಗಿರುವ ದೌರ್ಜನ್ಯದ ವಿರುದ್ಧ ಹಿಂದೂ ಹಿತ ರಕ್ಷಣಾ ಸಮಿತಿಯಿಂದ ಮಾನವ ಸರಪಳಿ ಮೂಲಕ ಪ್ರತಿಭಟನೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟು ನಿಂತ ಎರಡು ಕೆ ಎಸ್ ಆರ್ ಟಿ ಸಿ ಬಸ್ಸುಗಳು: ಗಂಟೆಗಟ್ಟಲೇ ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ

Suddi Udaya
error: Content is protected !!