July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಹೂತ ಮೃತದೇಹಗಳ ಅವಶೇಷ ಹೊರತೆಗೆಯುವ ಕಾರ್ಯ ಪ್ರಾರಂಭ :ಬಿಗಿ ಪೊಲೀಸ್ ಬಂದೋಬಸ್ತ್

ಬೆಳ್ತಂಗಡಿ, ಜು.29: ಧರ್ಮಸ್ಥಳ ಅರಣ್ಯದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಜುಲೈ 29 ರಂದು ದೂರುದಾರನ ಸಮ್ಮುಖದಲ್ಲಿ ಎಸ್.ಐ.ಟಿ ಅಧಿಕಾರಿಗಳು ಹಾಗೂ ಇತರ ಅಧಿಕಾರಿಗಳಿಂದ ಹೆಣಗಳ ಕಳೆಬರ ಹೊರತೆಗೆಯುವ ಕಾರ್ಯಾಚರಣೆಗೆ ಎಸ್.ಐ.ಟಿ. ತಂಡದದಿಗೆ ವೈದ್ಯರ ತಂಡ ಜತೆಯಾಗಿದೆ.

ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಅಧಿಕಾರಿಗಳು ಮುಂಜಾನೆಯೇ ಹಾಜರಾಗಿದ್ದರು. ಈ ವೇಳೆ ಮಂಗಳೂರು ಕೆಎಂಸಿ ಆಸ್ಪತ್ರೆಯ ಇಬ್ಬರು ನುರಿತ ವೈದ್ಯರಾದ ಡಾ.‌ಜಗದೀಶ್ ರಾವ್ ಮತ್ತು ಡಾ.ರಶ್ಮಿ ತಂಡ ಎಸ್.ಐ.ಟಿ ಆದೇಶದ ಮೇರೆಗೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಆಗಮಿಸಿ ಸಭೆ ನಡೆದು ಬಳಿಕ ಸೋಮವಾರ ಸಾಕ್ಷಿ ಗುರುತಿಸಿ ನೇತ್ರಾವತಿ ಸ್ನಾನ ಘಟ್ಟದಲ್ಲಿರುವ ಮೊದಲ ಸ್ಥಳದಲ್ಲಿ ಇರುವ ಮೃತದೇಹದ ಅವಶೇಷ ಹೊರತೆಗೆಯುವ ಕಾರ್ಯಾಚರಣೆಗೆ ತಯಾರಿ ನಡೆಸಲಾಗುತ್ತಿದೆ.ಎಸ್.ಐ.ಟಿ. ತನಿಖಾಧಿಕಾರಿ ಜಿತೇಂದ್ರ ದಯಾಮ, ಎಸ್ಪಿ ಸೈಮನ್, ಪುತ್ತೂರು ವಿಭಾಗ ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್, ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಮ್ ಸಹಿತ ಕಂದಾಯ, ಅರಣ್ಯ, ಎಫ್.ಎಸ್.ಎಲ್.ನ ಸೋಕೋ ವಿಭಾಗ, ಎ.ಎನ್.ಎಫ್., ಆಂತರಿಕ ಭದ್ರತಾ ದಳ, ಪೊಲೀಸ್ ತಂಡದ ನೇತೃತ್ವದಲ್ಲಿ ಕಾರ್ಯಾಚರಣೆಗೆ ಅಣಿಯಾಗಿದ್ದಾರೆ.

Related posts

ಆರಂಬೋಡಿ ಗ್ರಾ.ಪಂ. ಗ್ರಾಮ ಸಭೆ

Suddi Udaya

ಸೋಮಂತಡ್ಕದಲ್ಲಿ ರಾಮನಾಮ ಸಂಕೀರ್ತನೆ ಕಾರ್ಯಕ್ರಮ: ಕರಸೇವಕ ಸುರೇಶ್ ಭಟ್ ಕೊಲ್ಯ ರವರಿಗೆ ಗೌರವಾರ್ಪಣೆ

Suddi Udaya

ಸಚಿವ ದಿನೇಶ್ ಗುಂಡೂರಾವ್‌ರಿಂದ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯ ಲೋಕಾರ್ಪಣೆ

Suddi Udaya

ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ದಯಾ ವಿಶೇಷ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya

ಡ್ರಾಯಿಂಗ್ ಗ್ರೇಡ್ ಪರೀಕ್ಷೆ: ಎಕ್ಸೆಲ್ ಟೆಕ್ನೊ ಸ್ಕೂಲ್ ವೇಣೂರಿಗೆ ಶೇ.100 ಫಲಿತಾಂಶ:ತೇರ್ಗಡೆಯಾದ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಬಿ

Suddi Udaya

ಉಜಿರೆ: ವೈದ್ಯರ ದಿನಾಚರಣೆಯ ಅಂಗವಾಗಿ ಹಿರಿಯ ವೈದ್ಯ ಡಾ.ಕೆ.ಎನ್.ಶೆಣೈರವರಿಗೆ ಸನ್ಮಾನ

Suddi Udaya
error: Content is protected !!