ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಲು , ಹಣ್ಣು ಹಂಪಲು ವಿತರಣೆ

ಬೆಳ್ತಂಗಡಿ : ನಾಗರ ಪಂಚಮಿಯ ಪ್ರಯುಕ್ತ ಬೆಳ್ತಂಗಡಿ ತಾಲೂಕು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ಬೆಳ್ತಂಗಡಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿರುವ ರೋಗಿಗಳಿಗೆ ಉಚಿತವಾಗಿ ಹಾಲು , ಹಣ್ಣು ಹಂಪಲುಗಳನ್ನು ವಿತರಣೆ ಮಾಡಲಾಯಿತು.

ಕಾರ್ಯಕ್ರಮದ ಬಗ್ಗೆ ಮಾತನಾಡಿದ ರೆಡ್ ಕ್ರಾಸ್ ಸೊಸೈಟಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಹರಿದಾಸ್ ಎಸ್. ಎಂ ರವರು ದೇಶದಲ್ಲಿ 28 ಕೋಟಿ ಜನರು ಒಂದು ತೊಟ್ಟು ಹಾಲು ಖರೀದಿಸಲು ಸಾಧ್ಯವಿಲ್ಲದೆ ಜೀವಿಸುತ್ತಿದ್ದಾರೆ. ದೇಶದಲ್ಲಿ ದಿನದಿಂದ ದಿನಕ್ಕೆ ಅಪೌಷ್ಟಿಕತೆಯ ಕೊರತೆಯಿಂದ ಮಕ್ಕಳು , ಮಹಿಳೆಯರ ಸಾವಿನ ಸಂಖ್ಯೆ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ನಾವು ನಾಗರ ಪಂಚಮಿ ಹೆಸರಿನಲ್ಲಿ ಕಲ್ಲಿಗೆ , ಹುತ್ತಗಳಿಗೆ ಹಾಲು ಚೆಲ್ಲುವ ಮೂಲಕ ದುರುಪಯೋಗ ಮಾಡುತ್ತೇವೆ. ಅದರ ಬದಲಾಗಿ ಅಪೌಷ್ಟಿಕತೆಯಿಂದ ಬಳಲುತ್ತಿರುವವರಿಗೆ , ರೋಗಿಗಳಿಗೆ ನೀಡಿದರೆ ಉತ್ತಮ. ರೆಡ್ ಕ್ರಾಸ್ ಸೊಸೈಟಿ ಇಡೀ ಜಗತ್ತಿನಾದ್ಯಂತ ಅಪೌಷ್ಟಿಕತೆಯ ವಿರುದ್ಧ ಸಮರ ಸಾರಿದ್ದು , ಈ ನಿಟ್ಟಿನಲ್ಲಿ ಜನಜಾಗೃತಿ ಮೂಡಿಸುವ ಸಲುವಾಗಿ ರೋಗಿಗಳಿಗೆ ಹಾಲು , ಹಣ್ಣುಹಂಪಲು ವಿತರಣೆ ಮಾಡಲಾಯಿತು ಎಂದರು.

ಈ ಸಂದರ್ಭದಲ್ಲಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ರಮೇಶ್ ಕೆ , ಹಿರಿಯ ಸುಶ್ರುಕ್ರಿ ಪೊನ್ನಮ್ಮ , ರೆಡ್ ಕ್ರಾಸ್ ಸೊಸೈಟಿ ಕಾರ್ಯದರ್ಶಿ ಯಶವಂತ ಪಟವರ್ಧನ್ , ಜೋನ್ ಅರ್ವಿನ್ ಡಿಸೋಜ , ನಿರ್ದೇಶಕಿ ನ್ಯಾಯವಾದಿ ಸುಕನ್ಯಾ ಹೆಚ್ , ಸದಸ್ಯ ಶೇಖರ್ ಲಾಯಿಲ , ಎಕೆಜಿ ಸೊಸೈಟಿ ಸಿಬ್ಬಂದಿಗಳಾದ ಸಂಜೀವ ಆರ್ , ಕು. ಕೀರ್ತನಾ ಉಪಸ್ಥಿತರಿದ್ದರು .

Related posts

ಕಳೆಂಜ: ಗ್ರಾಮಾಭ್ಯುದಯ ಅನುಷ್ಠಾನ ಸಮಿತಿ ಮತ್ತು ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಸಹಕಾರದೊಂದಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಆಚರಣೆ

Suddi Udaya

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾಷಣ ಸ್ಪರ್ಧೆ

Suddi Udaya

ಉಜಿರೆ ಎಸ್ ಡಿ ಎಮ್ ಪ. ಪೂ. ಕಾಲೇಜು : ಎನ್ ಎಸ್ ಎಸ್ ಸ್ವಯಂ ಸೇವಕರಿಗೆ ಜಲ ಸಂರಕ್ಷಣೆ ಕುರಿತು ಪ್ರಾತ್ಯಕ್ಷಿಕೆ

Suddi Udaya

ಡಿ 13-14: ಬಳಂಜ ಶಾಲೆಗೆ ಅಮೃತ ಮಹೋತ್ಸವ ಸಂಭ್ರಮ, ಗುರುವಂದನೆ, 5 ಸಾವಿರಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆ : ಪತ್ರಿಕಾಗೋಷ್ಠಿಯಲ್ಲಿ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಪಿ.ಕೆ ಮಾಹಿತಿ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಂದಿ ಬಳಿ ಇರುವ ಕಾಣಿಕೆ ಡಬ್ಬಿ ಒಡೆದು ಹಣ ಕಳವು

Suddi Udaya

ಮುಂಡಾಜೆ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮಸಭೆ

Suddi Udaya
error: Content is protected !!