25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಕೂಟ ಮಹಾ ಜಗತ್ತು ಮಹಿಳಾ ವೇದಿಕೆಯ ನೇತೃತ್ವದಲ್ಲಿ ಆಟಿ ಕೂಟ

ಬೆಳ್ತಂಗಡಿ : ಕೂಟ ಮಹಾಜಗತ್ತು ಬೆಳ್ತಂಗಡಿ ಮಹಿಳಾ ವೇದಿಕೆಯ ನೇತೃತ್ವದಲ್ಲಿ ಆಟಿ ಕೂಟದ ಕಾರ್ಯಕ್ರಮ ಜು.27 ರಂದು ಉಜಿರೆಯ ಅರಿಪ್ಪಾಡಿ ಮಠದಲ್ಲಿ ಜರುಗಿತು.

ಕಾರ್ಯಕ್ರಮವನ್ನು ಕೂಟ ಮಹಾಜಗತ್ತು ಬೆಳ್ತಂಗಡಿಯ ಅಂಗಸಂಸ್ಥೆಯ ಅಧ್ಯಕ್ಷ ವಾಸುದೇವ ಸೋಮಯಾಜಿ ಹಾಗೂ ನೂತನ ಮಹಿಳಾ ವೇದಿಕೆಯ ಅಧ್ಯಕ್ಷೆ ಶ್ರೀಮತಿ ಗೀತಾ ವಿಶ್ವಾಸ ರಾವ್ ಉದ್ಘಾಟಿಸಿದರು. ವೇದಿಕೆಯಲ್ಲಿ ನಳಿನಿ ಹೊಳ್ಳ, ಪ್ರಕಾಶ್ ನಾರಾಯಣ ಚಾರ್ಮಾಡಿ, ಶರತ್ ಕುಮಾರ್ ಹಾಗೂ ಅಕ್ಷತಾ ಅಡೂರ್ ಉಪಸ್ಥಿತರಿದ್ದರು. ಆಟಿ ಮಾಸದ ವಿಶೇಷತೆ ಹಾಗೂ ಆಚರಣೆಯ ಕುರಿತು ವಾಸುದೇವ ಸೋಮಯಾಜಿ ಮಾಹಿತಿ ನೀಡಿದರು.

ವಿದ್ಯಾಶ್ರೀ ಅಡೂರ್ ಸ್ವಾಗತಿಸಿದರು. ಅಂಗಸಂಸ್ಥೆಯ ಮಹಿಳೆಯರಿಗೆ, ಪುರುಷರಿಗೆ, ಹಾಗೂ ಮಕ್ಕಳಿಗೆ ವಿವಿಧ ವಿನೋದಾವಳಿ ಆಟಗಳನ್ನು ಶ್ರೀಮತಿ ಆಶಾ ಅಡೂರ್ ನಿರ್ವಹಿಸಿದರು. ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಮಹಿಳಾ ವೇದಿಕೆಯ ನೂತನ ಕಾರ್ಯದರ್ಶಿ ಸಂತೋಷಿಣಿ ಕಾರಂತ್ ಕಾರ್ಯಕ್ರಮವನ್ನು ನಿರೂಪಿಸಿ, ಮೇಘನಾ ಪ್ರಶಾಂತ್ ಹೊಳ್ಳ ವಂದಿಸಿದರು. ಲಾವಣ್ಯ ಹೊಳ್ಳ ಹಾಗೂ ಮಾಲತಿ ರಾವ್ ಸಹಕರಿಸಿದರು. ಕಾರ್ಯಕ್ರಮದಲ್ಲಿ ವಿಶೇಷವಾಗಿ ಮಹಿಳೆಯರು ಮನೆಯಲ್ಲಿ ತಯಾರಿಸಿದ ವಿವಿಧ ಬಗೆಯ ಆಟಿಯ ವಿಶೇಷ ಖಾದ್ಯಗಳನ್ನು ತಂದು ಎಲ್ಲರಿಗೂ ಉಣಬಡಿಸಿದರು. ಖಾದ್ಯಗಳನ್ನು ತಯಾರಿಸಿದ ಮಹಿಳೆಯರಿಗೆ ಸಭೆಯಲ್ಲಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಕೂಟ ಮಹಾಜಗತ್ತು ಅಂಗಸಂಸ್ಥೆಯ ಸದಸ್ಯರು, ಮಕ್ಕಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ವೇಣೂರು: ಶಿಕ್ಷಣ ಮಾರ್ಗದರ್ಶನ – ಡಾ. ಆಳ್ವರಿಗೆ ನಾಗರೀಕ‌ ಸನ್ಮಾನ

Suddi Udaya

ಶಿರ್ಲಾಲು ಶ್ರೀ ದೈವ ಕೊಡಮಣಿತ್ತಾಯ ಮತ್ತು ಬೆರ್ಮೆರ್ ಬೈದೆರ್ಲೆ ಗರಡಿಯ ವಾರ್ಷಿಕ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರುವಾಯನಕೆರೆ: ಶ್ರೀ ಲಕ್ಷ್ಮಿ ಫ್ಯಾನ್ಸಿಯಲ್ಲಿ ಚಪ್ಪಲ್ ಮೇಲೆ 10-50% ಡಿಸ್ಕೌಂಟ್ ಸೇಲ್

Suddi Udaya

ಬೆಳ್ತಂಗಡಿ ಕೇದೆ ದಿ| ವಸಂತ ಬಂಗೇರ ಜಯಂತಿ ಉತ್ಸವ ಸಮಿತಿ ಆಯೋಜಿಸಿದ್ದ ಅಶಕ್ತರಿಗೆ ಸಹಾಯಹಸ್ತ ಹಾಗೂ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮುಂದೂಡಿಕೆ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಆರಂಬೋಡಿ 136ನೇ ಬೂತ್ ಸಮಿತಿಯಲ್ಲಿ ಡಾ. ಶ್ಯಾಮಪ್ರಸಾದ್ ಮುಖರ್ಜಿಯವರ ಬಲಿದಾನ್ ದಿವಸ್ ಆಚರಣೆ

Suddi Udaya
error: Content is protected !!