July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಕೂಟ ಮಹಾ ಜಗತ್ತು ಮಹಿಳಾ ವೇದಿಕೆಯ ನೇತೃತ್ವದಲ್ಲಿ ಆಟಿ ಕೂಟ

ಬೆಳ್ತಂಗಡಿ : ಕೂಟ ಮಹಾಜಗತ್ತು ಬೆಳ್ತಂಗಡಿ ಮಹಿಳಾ ವೇದಿಕೆಯ ನೇತೃತ್ವದಲ್ಲಿ ಆಟಿ ಕೂಟದ ಕಾರ್ಯಕ್ರಮ ಜು.27 ರಂದು ಉಜಿರೆಯ ಅರಿಪ್ಪಾಡಿ ಮಠದಲ್ಲಿ ಜರುಗಿತು.

ಕಾರ್ಯಕ್ರಮವನ್ನು ಕೂಟ ಮಹಾಜಗತ್ತು ಬೆಳ್ತಂಗಡಿಯ ಅಂಗಸಂಸ್ಥೆಯ ಅಧ್ಯಕ್ಷ ವಾಸುದೇವ ಸೋಮಯಾಜಿ ಹಾಗೂ ನೂತನ ಮಹಿಳಾ ವೇದಿಕೆಯ ಅಧ್ಯಕ್ಷೆ ಶ್ರೀಮತಿ ಗೀತಾ ವಿಶ್ವಾಸ ರಾವ್ ಉದ್ಘಾಟಿಸಿದರು. ವೇದಿಕೆಯಲ್ಲಿ ನಳಿನಿ ಹೊಳ್ಳ, ಪ್ರಕಾಶ್ ನಾರಾಯಣ ಚಾರ್ಮಾಡಿ, ಶರತ್ ಕುಮಾರ್ ಹಾಗೂ ಅಕ್ಷತಾ ಅಡೂರ್ ಉಪಸ್ಥಿತರಿದ್ದರು. ಆಟಿ ಮಾಸದ ವಿಶೇಷತೆ ಹಾಗೂ ಆಚರಣೆಯ ಕುರಿತು ವಾಸುದೇವ ಸೋಮಯಾಜಿ ಮಾಹಿತಿ ನೀಡಿದರು.

ವಿದ್ಯಾಶ್ರೀ ಅಡೂರ್ ಸ್ವಾಗತಿಸಿದರು. ಅಂಗಸಂಸ್ಥೆಯ ಮಹಿಳೆಯರಿಗೆ, ಪುರುಷರಿಗೆ, ಹಾಗೂ ಮಕ್ಕಳಿಗೆ ವಿವಿಧ ವಿನೋದಾವಳಿ ಆಟಗಳನ್ನು ಶ್ರೀಮತಿ ಆಶಾ ಅಡೂರ್ ನಿರ್ವಹಿಸಿದರು. ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಮಹಿಳಾ ವೇದಿಕೆಯ ನೂತನ ಕಾರ್ಯದರ್ಶಿ ಸಂತೋಷಿಣಿ ಕಾರಂತ್ ಕಾರ್ಯಕ್ರಮವನ್ನು ನಿರೂಪಿಸಿ, ಮೇಘನಾ ಪ್ರಶಾಂತ್ ಹೊಳ್ಳ ವಂದಿಸಿದರು. ಲಾವಣ್ಯ ಹೊಳ್ಳ ಹಾಗೂ ಮಾಲತಿ ರಾವ್ ಸಹಕರಿಸಿದರು. ಕಾರ್ಯಕ್ರಮದಲ್ಲಿ ವಿಶೇಷವಾಗಿ ಮಹಿಳೆಯರು ಮನೆಯಲ್ಲಿ ತಯಾರಿಸಿದ ವಿವಿಧ ಬಗೆಯ ಆಟಿಯ ವಿಶೇಷ ಖಾದ್ಯಗಳನ್ನು ತಂದು ಎಲ್ಲರಿಗೂ ಉಣಬಡಿಸಿದರು. ಖಾದ್ಯಗಳನ್ನು ತಯಾರಿಸಿದ ಮಹಿಳೆಯರಿಗೆ ಸಭೆಯಲ್ಲಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಕೂಟ ಮಹಾಜಗತ್ತು ಅಂಗಸಂಸ್ಥೆಯ ಸದಸ್ಯರು, ಮಕ್ಕಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ಡಿ.14: ಅನಾರು ಹಾ.ಉ.ಸ. ಸಂಘದ ನೂತನ ಕಟ್ಟಡ “ಕ್ಷೀರ ವಾರಿಧಿಯ” ಉದ್ಘಾಟನೆ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ಹಿಂದೂ ಸಂರಕ್ಷಣಾ ಯಾತ್ರೆ ಬಗ್ಗೆ ಹಾಕಿದ ಎರಡು ಬ್ಯಾನರ್ ಹರಿದ ಕಿಡಿಗೇಡಿಗಳು

Suddi Udaya

ಡಿ.30: ರೂ.1.62 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಪಡಂಗಡಿ ಪ್ರಾ.ಕೃ.ಪ.ಸ. ಸಂಘದ “ಸಮೃದ್ಧಿ” ಸಭಾಭವನ ಹಾಗೂ ಗೋದಾಮು ಕಟ್ಟಡ ಲೋಕಾರ್ಪಣೆ

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಸೈಕಲ್ ಯಾತ್ರೆ ಕೈಗೊಂಡ ರಾಜಾಜಿನಗರದ ಶಾಸಕ ಸುರೇಶ ಕುಮಾರ್

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಂಥಾಲಯ ಸಲಹಾ ಸಮಿತಿಯ ಸಭೆ

Suddi Udaya
error: Content is protected !!