September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಕೂಟ ಮಹಾ ಜಗತ್ತು ಮಹಿಳಾ ವೇದಿಕೆಯ ನೇತೃತ್ವದಲ್ಲಿ ಆಟಿ ಕೂಟ

ಬೆಳ್ತಂಗಡಿ : ಕೂಟ ಮಹಾಜಗತ್ತು ಬೆಳ್ತಂಗಡಿ ಮಹಿಳಾ ವೇದಿಕೆಯ ನೇತೃತ್ವದಲ್ಲಿ ಆಟಿ ಕೂಟದ ಕಾರ್ಯಕ್ರಮ ಜು.27 ರಂದು ಉಜಿರೆಯ ಅರಿಪ್ಪಾಡಿ ಮಠದಲ್ಲಿ ಜರುಗಿತು.

ಕಾರ್ಯಕ್ರಮವನ್ನು ಕೂಟ ಮಹಾಜಗತ್ತು ಬೆಳ್ತಂಗಡಿಯ ಅಂಗಸಂಸ್ಥೆಯ ಅಧ್ಯಕ್ಷ ವಾಸುದೇವ ಸೋಮಯಾಜಿ ಹಾಗೂ ನೂತನ ಮಹಿಳಾ ವೇದಿಕೆಯ ಅಧ್ಯಕ್ಷೆ ಶ್ರೀಮತಿ ಗೀತಾ ವಿಶ್ವಾಸ ರಾವ್ ಉದ್ಘಾಟಿಸಿದರು. ವೇದಿಕೆಯಲ್ಲಿ ನಳಿನಿ ಹೊಳ್ಳ, ಪ್ರಕಾಶ್ ನಾರಾಯಣ ಚಾರ್ಮಾಡಿ, ಶರತ್ ಕುಮಾರ್ ಹಾಗೂ ಅಕ್ಷತಾ ಅಡೂರ್ ಉಪಸ್ಥಿತರಿದ್ದರು. ಆಟಿ ಮಾಸದ ವಿಶೇಷತೆ ಹಾಗೂ ಆಚರಣೆಯ ಕುರಿತು ವಾಸುದೇವ ಸೋಮಯಾಜಿ ಮಾಹಿತಿ ನೀಡಿದರು.

ವಿದ್ಯಾಶ್ರೀ ಅಡೂರ್ ಸ್ವಾಗತಿಸಿದರು. ಅಂಗಸಂಸ್ಥೆಯ ಮಹಿಳೆಯರಿಗೆ, ಪುರುಷರಿಗೆ, ಹಾಗೂ ಮಕ್ಕಳಿಗೆ ವಿವಿಧ ವಿನೋದಾವಳಿ ಆಟಗಳನ್ನು ಶ್ರೀಮತಿ ಆಶಾ ಅಡೂರ್ ನಿರ್ವಹಿಸಿದರು. ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಮಹಿಳಾ ವೇದಿಕೆಯ ನೂತನ ಕಾರ್ಯದರ್ಶಿ ಸಂತೋಷಿಣಿ ಕಾರಂತ್ ಕಾರ್ಯಕ್ರಮವನ್ನು ನಿರೂಪಿಸಿ, ಮೇಘನಾ ಪ್ರಶಾಂತ್ ಹೊಳ್ಳ ವಂದಿಸಿದರು. ಲಾವಣ್ಯ ಹೊಳ್ಳ ಹಾಗೂ ಮಾಲತಿ ರಾವ್ ಸಹಕರಿಸಿದರು. ಕಾರ್ಯಕ್ರಮದಲ್ಲಿ ವಿಶೇಷವಾಗಿ ಮಹಿಳೆಯರು ಮನೆಯಲ್ಲಿ ತಯಾರಿಸಿದ ವಿವಿಧ ಬಗೆಯ ಆಟಿಯ ವಿಶೇಷ ಖಾದ್ಯಗಳನ್ನು ತಂದು ಎಲ್ಲರಿಗೂ ಉಣಬಡಿಸಿದರು. ಖಾದ್ಯಗಳನ್ನು ತಯಾರಿಸಿದ ಮಹಿಳೆಯರಿಗೆ ಸಭೆಯಲ್ಲಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಕೂಟ ಮಹಾಜಗತ್ತು ಅಂಗಸಂಸ್ಥೆಯ ಸದಸ್ಯರು, ಮಕ್ಕಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ಎಸ್.ಎಮ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಕರ್ನಾಟಕ ಜಂಇಯ್ಯತುಲ್ ಉಲಮಾ ಮುಶಾವರ ಸದಸ್ಯ ಪಿ.ಕೆ ಮುಹಮ್ಮದ್ ಮದನಿ ಅಳಕ್ಕೆ ಉಸ್ತಾದರಿಗೆ ಸನ್ಮಾನ

Suddi Udaya

ಅ.28-29 ರಂದು ನಡೆಯಲಿರುವ “ವಿಶ್ವ ಬಂಟರ ಸಮ್ಮೇಳನದ” ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿಯಲ್ಲಿ ಸಂಭ್ರಮದ ‘ಆಟಿಡೊಂಜಿ ದಿನ’ ಆಚರಣೆ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಬಾಯಿ ಮತ್ತು ಹಲ್ಲಿನ ಆರೋಗ್ಯದ ಮುಂಜಾಗ್ರತಾ ಕ್ರಮದ ಕುರಿತು ಕಾರ್ಯಾಗಾರ

Suddi Udaya

ಬಿಜೆಪಿ ಬಜಿರೆ ಗ್ರಾಮದ ಬೂತ್ ಸಂಖ್ಯೆ 140 ರ ಅಧ್ಯಕ್ಷರಾಗಿ ವಸಂತ ಶೆಟ್ಟಿ, ಕಾರ್ಯದರ್ಶಿಯಾಗಿ ಮೋನಪ್ಪ ಗೌಡ ಆಯ್ಕೆ

Suddi Udaya

ಕಕ್ಕಿಂಜೆ ಪ್ರಾಥಮಿಕ ಶಾಲೆಗೆ ನುಗಿದ್ದ ಕಳ್ಳರು

Suddi Udaya
error: Content is protected !!