23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಕೂಟ ಮಹಾ ಜಗತ್ತು ಮಹಿಳಾ ವೇದಿಕೆಯ ನೇತೃತ್ವದಲ್ಲಿ ಆಟಿ ಕೂಟ

ಬೆಳ್ತಂಗಡಿ : ಕೂಟ ಮಹಾಜಗತ್ತು ಬೆಳ್ತಂಗಡಿ ಮಹಿಳಾ ವೇದಿಕೆಯ ನೇತೃತ್ವದಲ್ಲಿ ಆಟಿ ಕೂಟದ ಕಾರ್ಯಕ್ರಮ ಜು.27 ರಂದು ಉಜಿರೆಯ ಅರಿಪ್ಪಾಡಿ ಮಠದಲ್ಲಿ ಜರುಗಿತು.

ಕಾರ್ಯಕ್ರಮವನ್ನು ಕೂಟ ಮಹಾಜಗತ್ತು ಬೆಳ್ತಂಗಡಿಯ ಅಂಗಸಂಸ್ಥೆಯ ಅಧ್ಯಕ್ಷ ವಾಸುದೇವ ಸೋಮಯಾಜಿ ಹಾಗೂ ನೂತನ ಮಹಿಳಾ ವೇದಿಕೆಯ ಅಧ್ಯಕ್ಷೆ ಶ್ರೀಮತಿ ಗೀತಾ ವಿಶ್ವಾಸ ರಾವ್ ಉದ್ಘಾಟಿಸಿದರು. ವೇದಿಕೆಯಲ್ಲಿ ನಳಿನಿ ಹೊಳ್ಳ, ಪ್ರಕಾಶ್ ನಾರಾಯಣ ಚಾರ್ಮಾಡಿ, ಶರತ್ ಕುಮಾರ್ ಹಾಗೂ ಅಕ್ಷತಾ ಅಡೂರ್ ಉಪಸ್ಥಿತರಿದ್ದರು. ಆಟಿ ಮಾಸದ ವಿಶೇಷತೆ ಹಾಗೂ ಆಚರಣೆಯ ಕುರಿತು ವಾಸುದೇವ ಸೋಮಯಾಜಿ ಮಾಹಿತಿ ನೀಡಿದರು.

ವಿದ್ಯಾಶ್ರೀ ಅಡೂರ್ ಸ್ವಾಗತಿಸಿದರು. ಅಂಗಸಂಸ್ಥೆಯ ಮಹಿಳೆಯರಿಗೆ, ಪುರುಷರಿಗೆ, ಹಾಗೂ ಮಕ್ಕಳಿಗೆ ವಿವಿಧ ವಿನೋದಾವಳಿ ಆಟಗಳನ್ನು ಶ್ರೀಮತಿ ಆಶಾ ಅಡೂರ್ ನಿರ್ವಹಿಸಿದರು. ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಮಹಿಳಾ ವೇದಿಕೆಯ ನೂತನ ಕಾರ್ಯದರ್ಶಿ ಸಂತೋಷಿಣಿ ಕಾರಂತ್ ಕಾರ್ಯಕ್ರಮವನ್ನು ನಿರೂಪಿಸಿ, ಮೇಘನಾ ಪ್ರಶಾಂತ್ ಹೊಳ್ಳ ವಂದಿಸಿದರು. ಲಾವಣ್ಯ ಹೊಳ್ಳ ಹಾಗೂ ಮಾಲತಿ ರಾವ್ ಸಹಕರಿಸಿದರು. ಕಾರ್ಯಕ್ರಮದಲ್ಲಿ ವಿಶೇಷವಾಗಿ ಮಹಿಳೆಯರು ಮನೆಯಲ್ಲಿ ತಯಾರಿಸಿದ ವಿವಿಧ ಬಗೆಯ ಆಟಿಯ ವಿಶೇಷ ಖಾದ್ಯಗಳನ್ನು ತಂದು ಎಲ್ಲರಿಗೂ ಉಣಬಡಿಸಿದರು. ಖಾದ್ಯಗಳನ್ನು ತಯಾರಿಸಿದ ಮಹಿಳೆಯರಿಗೆ ಸಭೆಯಲ್ಲಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಕೂಟ ಮಹಾಜಗತ್ತು ಅಂಗಸಂಸ್ಥೆಯ ಸದಸ್ಯರು, ಮಕ್ಕಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ಬೆಳ್ತಂಗಡಿ ನಗರದಲ್ಲಿ ರೂ.40 ಲಕ್ಷ ವೆಚ್ಚದ ಹಿಂದೂ ರುದ್ರಭೂಮಿ ಲೋಕಾರ್ಪಣೆ

Suddi Udaya

ಬಡಗಕಾರಂದೂರು ಕಟ್ಟೂರು ಸರಕಾರಿ ಜಾಗದಲ್ಲಿ ಕಾಣಿಸಿಕೊಂಡ ಬೆಂಕಿ : ಬೆಂಕಿ ನಂದಿಸಿದ ಅಗ್ನಿ ಶಾಮಕ ದಳ

Suddi Udaya

ಕಾರಿನಲ್ಲಿ ಮಲಗಿದ್ದವರ ಮೇಲೆ ಕಿಡಿಗೇಡಿಗಳಿಂದ ಹಲ್ಲೆ : ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದ ಘಟನೆ: ಗಾಯಗೊಂಡ ಮಿತ್ತಬಾಗಿಲು ಸಂಶುದ್ದೀನ್ ಮಂಗಳೂರು ಆಸ್ಪತ್ರೆಯಲ್ಲಿ ದಾಖಲು

Suddi Udaya

ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಸೇವಾ ನಿವೃತ್ತಿ; ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ದೆಯಿಂದ ಶುಭಹಾರೈಕೆ

Suddi Udaya

ಚಾರ್ಮಾಡಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಸ್ಥಾಪನ ದಿನ ಆಚರಣೆ

Suddi Udaya

ಕಳಿಯ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya
error: Content is protected !!