September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮದ್ದಡ್ಕ ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ – ಟಿಆರ್‌ಎಮ್ ಮದ್ದಡ್ಕ ಇದರ ಮಹಾಸಭೆಯು ಮುರ್ಶಿದುಲ್ ಅನಾಮ್ ಅರೆಬಿಕ್ ಮದರಸ ಆಲಂದಿಲದಲ್ಲಿ ಜರುಗಿತು.


ನೂರುಲ್ ಹುದಾ ಜುಮಾ ಮಸ್ಜಿದ್ ಅಧ್ಯಕ್ಷ ಅಶ್ರಫ್ ಚಿಲಿಂಬಿ ಅದ್ಯಕ್ಷತೆ ವಹಿಸಿದ್ದರು. ಉಸ್ಮಾನ್ ಸಖಾಫಿ ಆರಂಭಿಕ ದುಆ ನೆರವೇರಿಸಿದರು. ಈ ವೇಳೆ 2025-26 ನೇ ಸಾಲಿಗೆ ಪದಾಧಿಕಾರಿಗಳನ್ನು ಆರಿಸಲಾಯಿತು.


ಅಧ್ಯಕ್ಷರಾಗಿ ರಾಝಿಯುದ್ದಿನ್ ಸಬರಬೈಲ್, ಉಪಾಧ್ಯಕ್ಷರಾಗಿ ರಿಯಾಝ್ ಆಲಂದಿಲ ಮತ್ತು ಇಸ್ಮಾಯಿಲ್ ಹಾಜಿ, ಪ್ರಧಾನ ಕಾರ್ಯದರ್ಶಿಯಾಗಿ ರವೂಫ್, ಕಾರ್ಯದರ್ಶಿಯಾಗಿ ಮುಸ್ತಫ ಮತ್ತು ಜಮಾಲುದ್ದೀನ್ ಲತ್ವೀಫಿ, ಕೋಶಾಧಿಕಾರಿಯಾಗಿ ಉಸ್ಮಾನ್ ಹಾಜಿ ಆಲಂದಿಲ, ಲೆಕ್ಕ ಪರಿಶೋಧಕರಾಗಿ ಹಾಜಿ ಉಮರ್ ಮಾಸ್ಟರ್ ಆಯ್ಕೆಯಾದರು.


ಸಭೆಯಲ್ಲಿ ನೂರುಲ್ ಹುದಾ ಜುಮಾ ಮಸ್ಜಿದ್ ಖತೀಬ್ ಹಾಫಿಳ್ ಮುಈನುದ್ದೀನ್ ಅಮ್ಜದಿ ಇವರ ನೇತೃತ್ವದಲ್ಲಿ ಸಯ್ಯಿದ್ ಕೂರತ್ ತಂಙಳ್ ಅನುಸ್ಮರಣೆ ನಡೆಸಲಾಯಿತು. ಸಲಹಾ ಸಮೀತಿಯ ಸದಸ್ಯರಾದ ರಾಝಿಯುದ್ದೀನ್ ಸಬರಬೖಲ್, ಅಬ್ಬೋನು ಮದ್ದಡ್ಕ, ಉಸ್ಮಾನ್ ಹಾಜಿ ಆಲಂದಿಲ, ಅಶ್ರಫ್ ಚಿಲಿಂಬಿ, ಹಾಜಿ ಉಮರ್ ಮಾಸ್ಟರ್ ಮದ್ದಡ್ಕ, ಮುಹಮ್ಮದ್ ರಫೀಕ್ ಚಿಲಿಂಬಿ, ಎಂ. ಹೆಚ್. ಅಬೂಬಕ್ಕರ್ ಕಿನ್ನಿಗೋಳಿ, ಹೆಚ್. ಎಂ. ಹಸನಬ್ಬ ಚಿಲಿಂಬಿ, ಎಂ ಉಮರಬ್ಬ (ಯು. ಆರ್.) ಎಂ ಹೈದೆರ್ ಹಾಜಿ ಮದ್ದಡ್ಕ ಉಪಸ್ಥಿತರಿದ್ದರು. ನೂರುಲ್ ಹುದಾ ಜುಮಾ ಮಸೀದಿ ಮಾಜಿ ಅಧ್ಯಕ್ಷ ಎಂ. ಬದ್ರುದ್ದೀನ್ ಮದ್ದಡ್ಕ ಇವರು ಸಂಸ್ಥೆಗೆ ಶುಭ ಹಾರೈಸಿದರು.

Related posts

ಬೆಳಾಲು: ಮೈತ್ರಿ ಯುವಕ ಮಂಡಲ ವಾರ್ಷಿಕ ಮಹಾಸಭೆ ಮತ್ತು ಲೆಕ್ಕ ಪತ್ರ ಮಂಡನೆ

Suddi Udaya

ರಾ. ಹೆ. ಕಾಮಗಾರಿ ಮಡಂತ್ಯಾರು ಪೇಟೆಯಲ್ಲಿ ಅಲ್ಲಲ್ಲಿ ತೆರೆದ ಚರಂಡಿ: ಸಾವಜನಿಕರ ಓಡಾಟಕ್ಕೆ ಅಡಚಣೆ

Suddi Udaya

ರೆಂಕೆದ ಗುತ್ತಿನಲ್ಲಿ ಗೆಜ್ಜೆಗಿರಿಯ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಕೂಕ್ರಬೆಟ್ಟು ಸರ್ಕಾರಿ ಶಾಲೆ: ಸ್ಮಾರ್ಟ್‌ ಕ್ಲಾಸ್‌ ಲೋಕಾರ್ಪಣೆ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗ ಕ್ಷೇತ್ರದಲ್ಲಿ ವಿಜೃಂಭಣೆಯ ನವರಾತ್ರಿ ಉತ್ಸವ ಸಂಪನ್ನ

Suddi Udaya

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ಸಭೆ

Suddi Udaya
error: Content is protected !!