32.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಮೃತದೇಹ ಹೂತು ಹಾಕಿದ ಪ್ರಕರಣ ಮೊದಲು ಗುರುತಿಸಿದ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದರು ಇನ್ನೂ ಪತ್ತೆಯಾಗದ ಕಳೇಬರ ಕಾರ್ಯಾಚರಣೆಗೆ ಶ್ವಾನ ದಳ ಎಂಟ್ರಿ

ಬೆಳ್ತಂಗಡಿ: ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟ ಬಳಿ ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಮಿನಿ ಹಿಟಾಚಿ ಸತತ ಕಾರ್ಯಾಚರಣೆ ನಡೆಸಿದರೂ ಕಳೇಬರ ಸಿಕ್ಕಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

12 ಮಂದಿ ಪೌರಕಾರ್ಮಿಕರ ಸಹಾಯದಿಂದ ಆರಂಭದಲ್ಲಿ ಪಿಕ್ಕಾಸು, ಹಾರೆಯಲ್ಲಿ ಬೆಳಗ್ಗೆ 12.30 ಕ್ಕೆ ಆರಂಭವಾದ ಅಗೆಯುವ ಕೆಲಸ ಮಧ್ಯಾಹ್ನ 2.30 ರವರೆಗೆ ನಡೆಯಿತು. ಕಳೆಬರ ಅಲ್ಲೆಲ್ಲೂ ಸಿಗದ ಸಮಯದಲ್ಲಿ ದೂರುದಾರ ಮತ್ತಷ್ಟು ಅಗೆಯುವಂತೆ ಒತ್ತಾಯಿಸಿದರು. ಕಡೆಗೆ ತನಿಖಾಧಿಕಾರಿ ಅನುಚೇತ್ ಸೂಚನೆಯಂತೆ ಮಿನಿ ಹಿಟಾಚಿ ಕರೆಸಲಾಯಿತು. ಮಧ್ಯಾಹ್ನ 3.30 ರಿಂದ ಆರಂಭವಾದ ಹಿಟಾಚಿ ಕಾರ್ಯಾಚರಣೆ ಈವರೆಗೆ ನಿಂತಿಲ್ಲ. ನಿರಂತರ ಕಾರ್ಯಾಚರಣೆಯಿಂದ ಹೊಂಡದ ರೂಪವಾಗಿದೆ.

ಅನಾಮಿಕ ಗುರುತಿಸಿದ ಮೊದಲ ಸ್ಥಳದಲ್ಲೇ ಕಳೇಬರ ಸಿಗದಿರುವುದು, ಜತೆಗೆ ಮಳೆಯಿಂದಾಗಿ ಹೊಂಡದಲ್ಲಿ ಒರತೆ ನೀರು ತುಂಬುತ್ತಿರುವುದರಿಂದ ಕಾರ್ಯಾಚರಣೆಗೆ ತೊಡಕಾಗಿದೆ. ಕಾರ್ಯಾಚರಣೆಗೆ ಇದೀಗ ಶ್ವಾನ ದಳದ ಎಂಟ್ರಿಯಾಗಿದೆ. ಕಾರ್ಮಿಕರು ಹಾಗೂ ಹಿಟಾಚಿ ಕಾರ್ಯಾಚರಣೆ ನಡೆಸಿದರೂ ಸಿಗದ ಕಳೇಬರಹ ಬಹಳಷ್ಟು ಕುತೂಹಲಕ್ಕೆ ಕಾರಣವಾಗಿದೆ.

Related posts

ನಿಸರ್ಗ ಯುವಜನೇತರ ಮಂಡಲದ ವತಿಯಿಂದ ಆರ್ಥಿಕ ನೆರವು

Suddi Udaya

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ : ಭಯ ಭೀತರಾದ ವಾಹನ ಸವಾರರು

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿಗೆ ಬೆಸ್ಟ್ ಆ್ಯಂಡ್ ಮೋಸ್ಟ್ ಟ್ರಸ್ಟೆಡ್ ಡಿಗ್ರಿ ಕಾಲೇಜ್ ಆಫ್ ಕರ್ನಾಟಕ ಪ್ರಶಸ್ತಿ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕ – ರಕ್ಷಕ ಸಂಘದ ಸಭೆ

Suddi Udaya

ಕೌಕ್ರಾಡಿ ಗ್ರಾಮ ಆಡಳಿತ ಅಧಿಕಾರಿಯವರ ಮೇಲೆ ಹಲ್ಲೆ ಮಾಡಿದ ಆರೋಪಿಗಳ ಶೀಘ್ರ ಬಂಧನಕ್ಕೆ ಒತ್ತಾಯಿಸಿ : ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ತಾಲೂಕು ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ತಾ.ಪಂ ದಿಲ್ಲಿ ಯುವನಿಧಿ ಯೋಜನೆಯ ಫಲಾನುಭವಿಗಳ ನೈಜತೆಯ ಭೌತಿಕ ಪರಿಶೀಲನೆ

Suddi Udaya
error: Content is protected !!