September 6, 2026
ಅಪರಾಧ ಸುದ್ದಿರಾಷ್ಟ್ರೀಯ ಸುದ್ದಿವರದಿ

ಮೃತದೇಹ ಹೂತು ಹಾಕಿದ ಪ್ರಕರಣ ಮೊದಲು ಗುರುತಿಸಿದ ಸ್ಥಳದಲ್ಲಿ ಮೊದಲ ದಿನದ ಕಾರ್ಯಾಚರಣೆ ಮುಕ್ತಾಯ

ಬೆಳ್ತಂಗಡಿ: ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟ ಬಳಿ ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಮಿನಿ ಹಿಟಾಚಿ ಸತತ ಕಾರ್ಯಾಚರಣೆ ನಡೆಸಿದರೂ ಕಳೇಬರ ಸಿಕ್ಕಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

13 ಮಂದಿ ಪೌರಕಾರ್ಮಿಕರ ಸಹಾಯದಿಂದ ಆರಂಭದಲ್ಲಿ ಪಿಕ್ಕಾಸು, ಹಾರೆಯಲ್ಲಿ ಬೆಳಗ್ಗೆ 12.30 ಕ್ಕೆ ಆರಂಭವಾದ ಅಗೆಯುವ ಕೆಲಸ ಮಧ್ಯಾಹ್ನ 2.30 ರವರೆಗೆ ನಡೆಯಿತು. ಕಳೇಬರ ಅಲ್ಲೆಲ್ಲೂ ಸಿಗದ ಸಮಯದಲ್ಲಿ ದೂರುದಾರ ಮತ್ತಷ್ಟು ಅಗೆಯುವಂತೆ ಒತ್ತಾಯಿಸಿದರು. ಕಡೆಗೆ ತನಿಖಾಧಿಕಾರಿ ಅನುಚೇತ್ ಸೂಚನೆಯಂತೆ ಮಿನಿ ಹಿಟಾಚಿ ಕರೆಸಲಾಯಿತು. ಮಧ್ಯಾಹ್ನ 3.30 ರಿಂದ ಆರಂಭವಾದ ಹಿಟಾಚಿ ಕಾರ್ಯಾಚರಣೆ ಈವರೆಗೆ ನಿಂತಿಲ್ಲ. ನಿರಂತರ ಕಾರ್ಯಾಚರಣೆಯಿಂದ ಹೊಂಡದ ರೂಪವಾಗಿದೆ.

ಅನಾಮಿಕ ಗುರುತಿಸಿದ ಮೊದಲ ಸ್ಥಳದಲ್ಲೇ ಕಳೇಬರ ಸಿಗದಿರುವುದು, ಜತೆಗೆ ಮಳೆಯಿಂದಾಗಿ ಹೊಂಡದಲ್ಲಿ ಒರತೆ ನೀರು ತುಂಬುತ್ತಿರುವುದರಿಂದ ಕಾರ್ಯಾಚರಣೆಗೆ ತೊಡಕಾಗಿದೆ. ಕಾರ್ಯಾಚರಣೆಗೆ ಇದೀಗ ಶ್ವಾನ ದಳದ ಎಂಟ್ರಿಯಾಗಿದೆ. ಕಾರ್ಮಿಕರು ಹಾಗೂ ಹಿಟಾಚಿ ಕಾರ್ಯಾಚರಣೆ ನಡೆಸಿದರೂ ಸಿಗದ ಕಳೇಬರಹ ಬಹಳಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಇಂದು ಒಟ್ಟು 4 -5 ಗಂಟೆಗಳ ಕಾರ್ಯಾಚರಣೆ ನಡೆಸಿದರು ಕಳೇಬರಹ ಸಿಗದೆ ಇದ್ದು ಕಾರ್ಯಾಚರಣೆಗೆ ಮೊದಲ ಹಿನ್ನಡೆಯಾಗಿದ್ದು ಇಂದಿನ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ.

Related posts

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ : ವರದಿ ಸಾಲಿನಲ್ಲಿ ರೂ. 394.12 ಕೋಟಿ ವಾರ್ಷಿಕ ವ್ಯವಹಾರ ನಡೆಸಿ, ರೂ.1.54 ಕೋಟಿ ಲಾಭ: ರಾಕೇಶ್ ಹೆಗ್ಡೆ

Suddi Udaya

ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿನ ಕಛೇರಿ ಸಿಬ್ಬಂದಿ ವಿಜಯ ಕುಮಾರಿ ರವರಿಗೆ ಬೀಳ್ಕೊಡುಗೆ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಧರ್ಮ ಜಾಗೃತಿ ಸಮಾವೇಶ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ಯಂತ್ರೋಪಕರಣ ಖರೀದಿ ಪ್ರಶಸ್ತಿ

Suddi Udaya

ಬಳಂಜ ಶಾಲಾ 75 ರ ಸಂಭ್ರಮಾಚರಣೆ ಪ್ರಯುಕ್ತ ಚಿಂತನಾ ಕಾರ್ಯಗಾರ

Suddi Udaya

ಶ್ರೀ ಧರ್ಮಸ್ಥಳ ಲಕ್ಷದೀಪೋತ್ಸವ ಪಾದಯಾತ್ರೆ ಬಗ್ಗೆ ಬೆಳ್ತಂಗಡಿ ವಲಯದ ಪೂರ್ವಭಾವಿ ಸಭೆ

Suddi Udaya
error: Content is protected !!