September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಮೃತದೇಹ ಹೂತು ಹಾಕಿದ ಪ್ರಕರಣ ಮೊದಲು ಗುರುತಿಸಿದ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದರು ಇನ್ನೂ ಪತ್ತೆಯಾಗದ ಕಳೇಬರ ಕಾರ್ಯಾಚರಣೆಗೆ ಶ್ವಾನ ದಳ ಎಂಟ್ರಿ

ಬೆಳ್ತಂಗಡಿ: ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟ ಬಳಿ ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಮಿನಿ ಹಿಟಾಚಿ ಸತತ ಕಾರ್ಯಾಚರಣೆ ನಡೆಸಿದರೂ ಕಳೇಬರ ಸಿಕ್ಕಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

12 ಮಂದಿ ಪೌರಕಾರ್ಮಿಕರ ಸಹಾಯದಿಂದ ಆರಂಭದಲ್ಲಿ ಪಿಕ್ಕಾಸು, ಹಾರೆಯಲ್ಲಿ ಬೆಳಗ್ಗೆ 12.30 ಕ್ಕೆ ಆರಂಭವಾದ ಅಗೆಯುವ ಕೆಲಸ ಮಧ್ಯಾಹ್ನ 2.30 ರವರೆಗೆ ನಡೆಯಿತು. ಕಳೆಬರ ಅಲ್ಲೆಲ್ಲೂ ಸಿಗದ ಸಮಯದಲ್ಲಿ ದೂರುದಾರ ಮತ್ತಷ್ಟು ಅಗೆಯುವಂತೆ ಒತ್ತಾಯಿಸಿದರು. ಕಡೆಗೆ ತನಿಖಾಧಿಕಾರಿ ಅನುಚೇತ್ ಸೂಚನೆಯಂತೆ ಮಿನಿ ಹಿಟಾಚಿ ಕರೆಸಲಾಯಿತು. ಮಧ್ಯಾಹ್ನ 3.30 ರಿಂದ ಆರಂಭವಾದ ಹಿಟಾಚಿ ಕಾರ್ಯಾಚರಣೆ ಈವರೆಗೆ ನಿಂತಿಲ್ಲ. ನಿರಂತರ ಕಾರ್ಯಾಚರಣೆಯಿಂದ ಹೊಂಡದ ರೂಪವಾಗಿದೆ.

ಅನಾಮಿಕ ಗುರುತಿಸಿದ ಮೊದಲ ಸ್ಥಳದಲ್ಲೇ ಕಳೇಬರ ಸಿಗದಿರುವುದು, ಜತೆಗೆ ಮಳೆಯಿಂದಾಗಿ ಹೊಂಡದಲ್ಲಿ ಒರತೆ ನೀರು ತುಂಬುತ್ತಿರುವುದರಿಂದ ಕಾರ್ಯಾಚರಣೆಗೆ ತೊಡಕಾಗಿದೆ. ಕಾರ್ಯಾಚರಣೆಗೆ ಇದೀಗ ಶ್ವಾನ ದಳದ ಎಂಟ್ರಿಯಾಗಿದೆ. ಕಾರ್ಮಿಕರು ಹಾಗೂ ಹಿಟಾಚಿ ಕಾರ್ಯಾಚರಣೆ ನಡೆಸಿದರೂ ಸಿಗದ ಕಳೇಬರಹ ಬಹಳಷ್ಟು ಕುತೂಹಲಕ್ಕೆ ಕಾರಣವಾಗಿದೆ.

Related posts

ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ಹಿರಿಯ ನಾಗರಿಕರಿಗೆ ಸನ್ಮಾನ

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಮನ್ ಶರ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕೆ ಆಯ್ಕೆ

Suddi Udaya

ಶಿಬಾಜೆ ಶ್ರೀ ಮೊಂಟೆತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಸದಸ್ಯರ ನೇಮಕ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಹಕಾರದೊಂದಿಗೆ ಮುಂಗಾರು ಮತ್ತು ಹಿಂಗಾರಿನಲ್ಲಿ ತಾಲೂಕಿನಲ್ಲಿ 500 ಎಕ್ರೆಯಲ್ಲಿ ಯಾಂತ್ರಿಕೃತ ಭತ್ತದ ನಾಟಿ

Suddi Udaya

ಉಜಿರೆ: ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಮಗನ ಮದುವೆ ಸಂಭ್ರಮದಲ್ಲಿ ಇದ್ದ ತಂದೆ ಹೃದಯಾಘಾತದಿಂದ ಸಾವು

Suddi Udaya
error: Content is protected !!