22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಮನಃಶಾಸ್ತ್ರ ವಿಭಾಗದಿಂದ ಕಾರ್ಯಾಗಾರ


ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಧರ್ಮಸ್ಥಳದಲ್ಲಿ ಮನೋವಿಜ್ಞಾನ ವಿಭಾಗ
ಎಸ್‌ಡಿಎಂ ಕಾಲೇಜು ಉಜಿರೆ (ಸ್ವಾಯತ್ತ) ಇದರ ಸಂಯುಕ್ತ ಆಶಯದೊಂದಿಗೆ ಸ್ವಾಸ್ಥ್ಯ ಮನಸ್ ಶಿಕ್ಷಾ ಎಂಬ ಶೀರ್ಷಿಕೆ ಅಡಿಯಲ್ಲಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಾಗಾರದ ಸಂಘಟಕರಾದ ಶ್ರೀಮತಿ ಪದ್ಮಶ್ರೀ. ಕೆ ಸಹಾಯಕ ಪ್ರಾಧ್ಯಾಪಕರು ಮನೋವಿಜ್ಞಾನ ವಿಭಾಗ
ಎಸ್‌ಡಿಎಂ ಕಾಲೇಜು ಉಜಿರೆ (ಸ್ವಾಯತ್ತ) ಇವರು ಆಗಮಿಸಿದ್ದರು. ಇವರು ಜ್ಯೋತಿ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮನೋವಿಜ್ಞಾನ ವಿಭಾಗ ಎಸ್‌ಡಿಎಂ ಕಾಲೇಜು ಉಜಿರೆ ಇಲ್ಲಿನ ವಿದ್ಯಾರ್ಥಿಗಳು ಈ ಕಾರ್ಯಾಗಾರವನ್ನು ನಡೆಸಿಕೊಟ್ಟರು.

ಕಾರ್ಯಗಾರದಲ್ಲಿ ವಿದ್ಯಾರ್ಥಿಗಳ ಮನಸ್ಸಿನ ಹಿಡಿತ, ಓದಿನ ಕಡೆಗಿನ ಗಮನ ,ಸಮಯದ ಸದುಪಯೋಗ ಹಾಗೂ ಅದನ್ನ ಉಪಯೋಗಿಸುವ ಕಲೆ, ಜೊತೆಗೆ ವಿದ್ಯಾರ್ಥಿಗಳ ಸಾಧನೆಗೆ ಇರುವ ವಿವಿಧ ದಾರಿಗಳು ಇತ್ಯಾದಿಗಳ ಕುರಿತಾಗಿ ಹಲವಾರು ಉದಾಹರಣೆ, ಚಟುವಟಿಕೆ ಇತ್ಯಾದಿಗಳ ಮೂಲಕ ವಿದ್ಯಾರ್ಥಿಗಳಿಗೆ ತಿಳಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಈ ಕಾರ್ಯಕ್ರಮದ ಕುರಿತಾಗಿ ಹಾಗೂ ಇದರ ಅಗತ್ಯತೆಗಳ ಕುರಿತಾಗಿ ವಿದ್ಯಾರ್ಥಿಗಳಿಗೆ ತಿಳಿಯಪಡಿಸಿದರು. . ಶಾಲಾ ವಿದ್ಯಾರ್ಥಿನಿ ಕುಮಾರಿ ನಿವೇದ್ಯಯ ನಿರ್ವಹಿಸಿದ ಕಾರ್ಯಕ್ರಮದಲ್ಲಿ ಕುಮಾರಿ ತನ್ವಿ ಸ್ವಾಗತಿಸಿ, ವಿಜಯ್ ಸಂಘಟಕರ ಕಿರುಪರಿಚಯವನ್ನು ನೀಡಿ ಕುಮಾರಿ ಸಿಂಧೂರ ಧನ್ಯವಾದವಿತ್ತರು.

Related posts

ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿಗೆ ಶೇ.98 ಫಲಿತಾಂಶ

Suddi Udaya

ಪಿಕಫ್ ಚಾಲಕ ಸತೀಶ್ ಕುಲಾಲ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಉಜಿರೆ ಎಸ್‌ಡಿಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಸಂಭ್ರಮ ಶನಿವಾರ’ ಆಚರಣೆ

Suddi Udaya

ಮುಂಡಾಜೆ: ಅಡುಗೆ ಕೋಣೆ ಸೇರಿಕೊಂಡಿದ್ದ ನಾಗರ ಹಾವು ರಕ್ಷಣೆ

Suddi Udaya

ಬೆಳ್ತಂಗಡಿ ವಕೀಲರ ಭವನದಲ್ಲಿ ಸಂವಿಧಾನ ದಿನ ಆಚರಣೆ

Suddi Udaya

ಅ.4: ಕೊಕ್ಕಡ ಜೇಸಿಐಗೆ ಜೇಸಿ ವಲಯಾಧ್ಯಕ್ಷರ ಭೇಟಿ

Suddi Udaya
error: Content is protected !!