23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಮನಃಶಾಸ್ತ್ರ ವಿಭಾಗದಿಂದ ಕಾರ್ಯಾಗಾರ


ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಧರ್ಮಸ್ಥಳದಲ್ಲಿ ಮನೋವಿಜ್ಞಾನ ವಿಭಾಗ
ಎಸ್‌ಡಿಎಂ ಕಾಲೇಜು ಉಜಿರೆ (ಸ್ವಾಯತ್ತ) ಇದರ ಸಂಯುಕ್ತ ಆಶಯದೊಂದಿಗೆ ಸ್ವಾಸ್ಥ್ಯ ಮನಸ್ ಶಿಕ್ಷಾ ಎಂಬ ಶೀರ್ಷಿಕೆ ಅಡಿಯಲ್ಲಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಾಗಾರದ ಸಂಘಟಕರಾದ ಶ್ರೀಮತಿ ಪದ್ಮಶ್ರೀ. ಕೆ ಸಹಾಯಕ ಪ್ರಾಧ್ಯಾಪಕರು ಮನೋವಿಜ್ಞಾನ ವಿಭಾಗ
ಎಸ್‌ಡಿಎಂ ಕಾಲೇಜು ಉಜಿರೆ (ಸ್ವಾಯತ್ತ) ಇವರು ಆಗಮಿಸಿದ್ದರು. ಇವರು ಜ್ಯೋತಿ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮನೋವಿಜ್ಞಾನ ವಿಭಾಗ ಎಸ್‌ಡಿಎಂ ಕಾಲೇಜು ಉಜಿರೆ ಇಲ್ಲಿನ ವಿದ್ಯಾರ್ಥಿಗಳು ಈ ಕಾರ್ಯಾಗಾರವನ್ನು ನಡೆಸಿಕೊಟ್ಟರು.

ಕಾರ್ಯಗಾರದಲ್ಲಿ ವಿದ್ಯಾರ್ಥಿಗಳ ಮನಸ್ಸಿನ ಹಿಡಿತ, ಓದಿನ ಕಡೆಗಿನ ಗಮನ ,ಸಮಯದ ಸದುಪಯೋಗ ಹಾಗೂ ಅದನ್ನ ಉಪಯೋಗಿಸುವ ಕಲೆ, ಜೊತೆಗೆ ವಿದ್ಯಾರ್ಥಿಗಳ ಸಾಧನೆಗೆ ಇರುವ ವಿವಿಧ ದಾರಿಗಳು ಇತ್ಯಾದಿಗಳ ಕುರಿತಾಗಿ ಹಲವಾರು ಉದಾಹರಣೆ, ಚಟುವಟಿಕೆ ಇತ್ಯಾದಿಗಳ ಮೂಲಕ ವಿದ್ಯಾರ್ಥಿಗಳಿಗೆ ತಿಳಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಈ ಕಾರ್ಯಕ್ರಮದ ಕುರಿತಾಗಿ ಹಾಗೂ ಇದರ ಅಗತ್ಯತೆಗಳ ಕುರಿತಾಗಿ ವಿದ್ಯಾರ್ಥಿಗಳಿಗೆ ತಿಳಿಯಪಡಿಸಿದರು. . ಶಾಲಾ ವಿದ್ಯಾರ್ಥಿನಿ ಕುಮಾರಿ ನಿವೇದ್ಯಯ ನಿರ್ವಹಿಸಿದ ಕಾರ್ಯಕ್ರಮದಲ್ಲಿ ಕುಮಾರಿ ತನ್ವಿ ಸ್ವಾಗತಿಸಿ, ವಿಜಯ್ ಸಂಘಟಕರ ಕಿರುಪರಿಚಯವನ್ನು ನೀಡಿ ಕುಮಾರಿ ಸಿಂಧೂರ ಧನ್ಯವಾದವಿತ್ತರು.

Related posts

ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 6 ನೇ ಸ್ಥಳದಲ್ಲಿ ಅವಶೇಷಗಳು ಪತ್ತೆ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ನಡ: ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಸಿಲುಕಿಕೊಂಡಂತಹ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕೆ.ಡಿ.ಪಿ ಸದಸ್ಯರ ನೇಮಕ

Suddi Udaya

ಕನ್ಯಾಡಿ ಸ್ವಾಮೀಜಿಯವರಿಂದ ರಾಮಕೃಷ್ಣ ಭಟ್ ಚೊಕ್ಕಾಡಿಯವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ವತಿಯಿಂದ ವಿದ್ಯಾನಿಧಿ ಯೋಜನೆಗೆ ಕೊಡುಗೆ

Suddi Udaya
error: Content is protected !!