July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಅಡಿಕೆ ವರ್ತಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಅಡಿಕೆ ವರ್ತಕರ ಜಿಲ್ಲಾ ಸಂಘಟನೆಗೆ ಪೂರ್ವಭಾವಿ ಸಭೆ

ಬೆಳ್ತಂಗಡಿ ತಾಲೂಕು ಅಡಿಕೆ ವರ್ತಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಅಡಿಕೆ ವರ್ತಕರ ಜಿಲ್ಲಾ ಸಂಘಟನೆಗೆ ಪೂರ್ವಭಾವಿ ಸಭೆ ಬೆಳ್ತಂಗಡಿ ಎಪಿಎಂಸಿ ಪ್ರಾಂಗಣದಲ್ಲಿ ನಡೆಯಿತು.

ವರ್ತಕರ ಜಿಲ್ಲಾ ಸಂಘದ ಮುಖಂಡ ಪ್ರಶಾಂತ್ ಶೆಟ್ಟಿ ಮಡಂತ್ಯಾರು ಮಾತನಾಡಿ, ಇಲಾಖೆಗಳ ಕಾನೂನು ಚೌಕಟ್ಟು ಮೀರಿದ ಕ್ರಮಗಳಿಗೆ ಭಯ ಪಡುವ ಅಗತ್ಯವಿಲ್ಲ ಮತ್ತು ವ್ಯವಸ್ಥೆಯಲ್ಲಿರುವ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ಸಂಘಟಿತವಾಗಿ ಪ್ರಶ್ನೆ ಮಾಡೋಣ ಎಂದರು.


ಜಿಲ್ಲಾ ಮುಂದಾಳು ರೂಪೇಶ್ ರೈ, ಬೆಳ್ತಂಗಡಿ ತಾಲೂಕು ಅಡಿಕೆ ವರ್ತಕರ ಸಂಘದ ಮಾಜಿ ಅಧ್ಯಕ್ಷ ಬಾಲಕೃಷ್ಣ ಸವಣಾಲು ಭಾಗವಹಿಸಿದ್ದರು.
ಬೆಳ್ತಂಗಡಿ ತಾಲೂಕು ಅಡಿಕೆ ವರ್ತಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.
ನೂತನ ಅಧ್ಯಕ್ಷರಾಗಿ ಹೇಮಾಶಂಕರ ಶೆಟ್ಟಿ , ಕಾರ್ಯದರ್ಶಿಯಾಗಿ ಸಂಶುದ್ದೀನ್ ಜಾರಿಗೆಬೈಲ್ , ಕೋಶಾಧಿಕಾರಿಯಾಗಿ ಶರತ್ ಮಡಂತ್ಯಾರು, ಉಪಾಧ್ಯಕ್ಷರಾಗಿ ನೀಲೇಶ್ ಕುಮಾರ್ ಪಟೇಲ್ ಮತ್ತು ಅಶ್ರಫ್ ಎಂ.ಹೆಚ್. ಹಾಗೂ ಜತೆ ಕಾರ್ಯದರ್ಶಿಯಾಗಿ ಯಾಕುಬ್ ಎಂ.ಪಿ. ಉರುವಾಲು ಪದವು ಮತ್ತು ಹಕೀಂ ಆಯ್ಕೆಗೊಂಡರು.
ಸುದೀಪ್ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಸಿರು.

Related posts

ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ: ‘ಕೇರಿಂಜ ಯಾತ್ರೆ’

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ಬೆಂಚು-ಡೆಸ್ಕ್ ವಿತರಣೆ

Suddi Udaya

ಶುದ್ಧ ನೀರು ಬಳಕೆಯಿಂದ ಆರೋಗ್ಯ ರಕ್ಷಣೆ: ಮಾತೃಶ್ರೀ ಹೇಮಾವತಿ ವಿ.ಹೆಗ್ಗಡೆ

Suddi Udaya

ಪೆರಿಯಡ್ಕ ಶಾಲೆಗೆ ಮಂಗಳೂರು ಶಿಕ್ಷಾ ಸಾಥಿ ತಂಡದಿಂದ ಫ್ಯಾನ್ ಕೊಡುಗೆ

Suddi Udaya

ಕುಕ್ಕೇಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ಯೋಜನೆಯ ‘ಪಂಚ ಅಭಿಯಾನದಡಿ’ ಕೋಟಿ ವೃಕ್ಷ ಅಭಿಯಾನ

Suddi Udaya

ಕೊಕ್ಕಡ: ತೆಂಕುಬೈಲು ಪತ್ತನಾಜೆಯ ವಾರ್ಷಿಕ ನೇಮೋತ್ಸವದ ಪೂರ್ವಭಾವಿ ಸಭೆ ಹಾಗೂ ಸೇವಾ ಸಮಿತಿ ರಚನೆ

Suddi Udaya
error: Content is protected !!