22.9 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಬೆಳ್ತಂಗಡಿ ಪಟ್ಟಣ ಪಂಚಾಯತ್ ಬಿಲ್‌ಕಲೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ಲಕ್ಷ್ಮೀನಾರಾಯಣರಿಗೆ ಬೀಳ್ಕೊಡುಗೆ

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತ್‌ನಲ್ಲಿ ಸುಮಾರು ೩೨ ವರ್ಷಗಳ ಕಾಲ ಬಿಲ್‌ಕಲೆಕ್ಟರ್ ಆಗಿ ಸೇವೆ ಸಲ್ಲಿಸಿದ್ದ ಲಕ್ಷ್ಮೀನಾರಾಯಣ ಅವರು ಜು.೩೧ಕ್ಕೆ ಸೇವೆಯಿಂದ ನಿವೃತ್ತಿಹೊಂದಿದ್ದು ಅವರಿಗೆ ಪಟ್ಟಣ ಪಂಚಾಯತು ವತಿಯಿಂದ ಗೌರವಾರ್ಪಣೆ ಹಾಗೂ ಬೀಳ್ಕೋಡುಗೆ ಕಾರ್ಯಕ್ರಮ ಜು.೩೧ರಂದು ನಡೆಯಿತು.

ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ಅವರು ನಿವೃತ್ತರಾದ ಲಕ್ಷ್ಮೀನಾರಾಯಣ ಅವರನ್ನು ಪಂಚಾಯತು ವತಿಯಿಂದ ಪೇಟಾ ತೋಡಿಸಿ, ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು. ನಂತರ ಮಾತನಾಡಿ ಲಕ್ಷ್ಮೀನಾರಾಯಣ ಅವರ ಸಾಧನೆ ಹಾಗೂ ಕೆಲಸದಲ್ಲಿ ಪ್ರಾಮಾಣಿಕತೆ, ಸೇವಾ ನಿಷ್ಠತೆಗೆ ಮೆಚ್ಚುಗೆ ವ್ಯಕ್ತಪಡಿಸಿ, ನಿವೃತ್ತ ಜೀವನಕ್ಕೆ ಶುಭ ಕೋರಿದರು. ಹಿರಿಯ ಸದಸ್ಯ ಜಗದೀಶ್ ಡಿ, ಇಂಜಿನಿಯರ್ ಮಹಾವೀರ್ ಮಾನತಾಡಿ ನಿವೃತರ ಸೇವಾ ಕಾರ್ಯಗಳ ಬಗ್ಗೆ ತಿಳಿಸಿ ಶುಭ ಹಾರೈಸಿದರು.

ಮುಖ್ಯಾಧಿಕಾರಿ ರಾಜೇಶ್ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಶರತ್‌ಕುಮಾರ್ ಶೆಟ್ಟಿ, ಉಪಾಧ್ಯಕ್ಷೆ ಗೌರಿ, ಸದಸ್ಯರಾದ ಅಂಬರೀಶ್, ತುಳಸಿ, ಜನಾರ್ದನ್ ಕುಲಾಲ್, ಲೋಕೇಶ್ ನಾಯ್ಕ, ನಾಮನಿರ್ದೇಶನ ಸದಸ್ಯರಾದ ಹೆನ್ರಿಲೋಬೋ, ಸತೀಶ್ ಶೆಟ್ಟಿ, ಅಬ್ದುಲ್ ಬಶೀರ್ ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಸುದ್ದಿ ಉದಯ ವರದಿಯ ಫಲಶ್ರುತಿ: ಬಾರ್ಯ ಸರಳಿಕಟ್ಟೆ ಮೇಗಿನ ಪುಯಿಲದಲ್ಲಿ ತುಂಡಾಗಿ ಬೀಳುತ್ತಿರುವ ವಿದ್ಯುತ್ ತಂತಿಗಳು ವರದಿ ಬೆನ್ನಲ್ಲೇ ಮೆಸ್ಕಾಂ ಇಲಾಖೆಯಿಂದ ದುರಸ್ತಿ ಕಾರ್ಯ

Suddi Udaya

ಬೆಳ್ತಂಗಡಿ ವಿಷ್ಣು ಸೇಲ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ

Suddi Udaya

ಆ.22: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕಾಂಗ್ರೆಸ್‌’ಗೆ ಗೆಲುವಿನ ಗ್ಯಾರಂಟಿ ನೀಡಿದ ಜನತೆ ರಕ್ಷಿತ್ ಶಿವರಾಂ

Suddi Udaya

ಶ್ರೀ ಧರ್ಮಸ್ಥಳದಲ್ಲಿ 27ನೇ ವಷ೯ದ ಭಜನಾ ಕಮ್ಮಟ ಆರಂಭ182 ಮಂದಿ ಶಿಬಿರಾರ್ಥಿಗಳು ಭಾಗಿ

Suddi Udaya

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ವಸಂತ ಮಜಲು, ಉಪಾಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ

Suddi Udaya
error: Content is protected !!