September 6, 2026
Uncategorized

ಬೆಳ್ತಂಗಡಿ ಪಟ್ಟಣ ಪಂಚಾಯತ್ ಬಿಲ್‌ಕಲೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ಲಕ್ಷ್ಮೀನಾರಾಯಣರಿಗೆ ಬೀಳ್ಕೊಡುಗೆ

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತ್‌ನಲ್ಲಿ ಸುಮಾರು ೩೨ ವರ್ಷಗಳ ಕಾಲ ಬಿಲ್‌ಕಲೆಕ್ಟರ್ ಆಗಿ ಸೇವೆ ಸಲ್ಲಿಸಿದ್ದ ಲಕ್ಷ್ಮೀನಾರಾಯಣ ಅವರು ಜು.೩೧ಕ್ಕೆ ಸೇವೆಯಿಂದ ನಿವೃತ್ತಿಹೊಂದಿದ್ದು ಅವರಿಗೆ ಪಟ್ಟಣ ಪಂಚಾಯತು ವತಿಯಿಂದ ಗೌರವಾರ್ಪಣೆ ಹಾಗೂ ಬೀಳ್ಕೋಡುಗೆ ಕಾರ್ಯಕ್ರಮ ಜು.೩೧ರಂದು ನಡೆಯಿತು.

ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ಅವರು ನಿವೃತ್ತರಾದ ಲಕ್ಷ್ಮೀನಾರಾಯಣ ಅವರನ್ನು ಪಂಚಾಯತು ವತಿಯಿಂದ ಪೇಟಾ ತೋಡಿಸಿ, ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು. ನಂತರ ಮಾತನಾಡಿ ಲಕ್ಷ್ಮೀನಾರಾಯಣ ಅವರ ಸಾಧನೆ ಹಾಗೂ ಕೆಲಸದಲ್ಲಿ ಪ್ರಾಮಾಣಿಕತೆ, ಸೇವಾ ನಿಷ್ಠತೆಗೆ ಮೆಚ್ಚುಗೆ ವ್ಯಕ್ತಪಡಿಸಿ, ನಿವೃತ್ತ ಜೀವನಕ್ಕೆ ಶುಭ ಕೋರಿದರು. ಹಿರಿಯ ಸದಸ್ಯ ಜಗದೀಶ್ ಡಿ, ಇಂಜಿನಿಯರ್ ಮಹಾವೀರ್ ಮಾನತಾಡಿ ನಿವೃತರ ಸೇವಾ ಕಾರ್ಯಗಳ ಬಗ್ಗೆ ತಿಳಿಸಿ ಶುಭ ಹಾರೈಸಿದರು.

ಮುಖ್ಯಾಧಿಕಾರಿ ರಾಜೇಶ್ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಶರತ್‌ಕುಮಾರ್ ಶೆಟ್ಟಿ, ಉಪಾಧ್ಯಕ್ಷೆ ಗೌರಿ, ಸದಸ್ಯರಾದ ಅಂಬರೀಶ್, ತುಳಸಿ, ಜನಾರ್ದನ್ ಕುಲಾಲ್, ಲೋಕೇಶ್ ನಾಯ್ಕ, ನಾಮನಿರ್ದೇಶನ ಸದಸ್ಯರಾದ ಹೆನ್ರಿಲೋಬೋ, ಸತೀಶ್ ಶೆಟ್ಟಿ, ಅಬ್ದುಲ್ ಬಶೀರ್ ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಪೆರಾಡಿ ಸಹಕಾರಿ ಸಂಘಕ್ಕೆ ಉತ್ತಮ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಭಕ್ತರು

Suddi Udaya

ಜೂ.30 : ಕೊಕ್ಕಡ ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಗೆಲುವು: ಬೈಕ್ ಜಾಥದ ಮುಖೇನಾ ಗೆಲುವನ್ನು ಸಂಭ್ರಮಿಸಿದ ನಾಲ್ಕೂರಿನ ಕಾರ್ಯಕರ್ತರು

Suddi Udaya

ನಿಡ್ಲೆಯ ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಕಂಪೆನಿ ಇನ್ವೆಸ್ಟ್ ಕರ್ನಾಟಕ -2025 ನಲ್ಲಿ ಭಾಗಿ

Suddi Udaya
error: Content is protected !!