23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ

ಬೆಳ್ತಂಗಡಿ : ಅಗಸ್ಟ್ 10 ರಿಂದ 12ನೇ ತಾರೀಖಿನವರೆಗೆ ಬೆಳ್ತಂಗಡಿ ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ ನಡೆಯುವ ಶ್ರೀ ಗುರುರಾಯರ 354ನೇ ಆರಾಧನ ಮಹೋತ್ಸವದ ಅಂಗವಾಗಿ ನಡೆಯುವ ಕಾರ್ಯಕ್ರಮದ ಬಗ್ಗೆ ಪೂರ್ವಭಾವಿ ಸಭೆಯು ಶ್ರೀಮಠದಲ್ಲಿ ನಡೆಯಿತು.

ಪೀತಾಂಬರ ಹೇರಾಜೆ ಅಧ್ಯಕ್ಷತೆ ವಹಿಸಿ ಸರ್ವರ ಸಹಕಾರವನ್ನು ಕೋರಿ ಆ.11ರಂದು ಬೆಳಗ್ಗೆ 11 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಬೇಕೆಂದು ಮನವಿ ಮಾಡಿದರು.

ಡಾ ಬಿ ಎ ಕುಮಾರ ಹೆಗ್ಡೆ ಅವರು ಕಾರ್ಯಕ್ರಮದ ವಿವರಣೆಯನ್ನು ನೀಡಿ ಯಶಸ್ವಿಯಾಗಿ ನಡೆಯುವಂತೆ ಸಲಹೆಗಳನ್ನು ನೀಡಿದರು. ಉಪಾಧ್ಯಕ್ಷ ವಿ ಆರ್ ನಾಯಕ್, ಸೋಮೇಗೌಡ, ಮಂಜುನಾಥ ರೈ, ಶ್ರೀಮತಿ ಸುಜಿತಾ ವಿ ಬಂಗೇರ, ಶ್ರೀಮತಿ ಸುಶೀಲಾ ಎಸ್ ಹೆಗ್ಡೆ, ಕೃಷ್ಣ ಶೆಟ್ಟಿ, ಬಂಗಾರು, ರಾಜೇಶ್ ಶೆಟ್ಟಿ ಲಾಯಿಲ, ಶ್ರೀಮತಿ ಸೌಮ್ಯ ಲಾಯಿಲ, ವಿಜಯಕುಮಾರ್ ಶ್ರೀಮತಿ ಕುಸುಮಾವತಿ ಉಪಸ್ಥಿತರಿದ್ದರು. ವಸಂತ ಸುವರ್ಣ ಸ್ವಾಗತಿಸಿ, ಪ್ರೊ. ಎ ಕೃಷ್ಣಪ್ಪ ಪೂಜಾರಿ ವಂದಿಸಿದರು.

Related posts

ಉಜಿರೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರಿಗೆ ಪ್ರತಿಷ್ಠಿತ ಜೈ ಜವಾನ್ ಜೈ ಕಿಸಾನ್ “ರೈತ ರತ್ನ” ಗೌರವ ಪ್ರಶಸ್ತಿ ಪ್ರದಾನ

Suddi Udaya

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ : ಹೊರ ಕಾಣಿಕೆಯ ಆಕಷ೯ಕ ಹಾಗೂ ಭವ್ಯ ವಾದ ಶೋಭಾಯಾತ್ರೆ – ಯಕ್ಷಗಾನ ವೇಷ, ಹತ್ತು ಭಜನಾ ತಂಡಗಳಿಂದ ಕುಣಿತ ಭಜನೆ, ಕೊಂಬು,ಚೆಂಡೆ, ವಾದ್ಯ ವಿಶೇಷ ಆಕಷ೯ಣೆ

Suddi Udaya

ಕಲ್ಮಂಜ : “ಸತ್ಯಶ್ರೀ ಬಾಲಗೋಕುಲ” ಉದ್ಘಾಟನೆ

Suddi Udaya

ತೆಕ್ಕಾರು: ಗಾಳಿ ಮಳೆಗೆ ಅಡಿಕೆ ಗಿಡ ಹಾಗೂ ಮನೆಗೆ ಮರ ಬಿದ್ದು ಹಾನಿ

Suddi Udaya

ಚಾರ್ಮಾಡಿಯಲ್ಲಿ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಶುಭಾರಂಭ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya
error: Content is protected !!