26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಕಾರ್ಗಿಲ್ ದಿನಾಚರಣೆ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಬುಲ್ ಬುಲ್ ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳು ಕಾರ್ಗಿಲ್ ದಿನಾಚರಣೆಯನ್ನು ಆಚರಿಸಿದರು. ಮುಖ್ಯ ಅತಿಥಿಯಾಗಿ ಕಾರ್ಗಿಲ್ ಯೋಧ ಶ್ರೀ ವಿಕ್ಟರ್ ಕ್ರಾಸ್ತ ಆಗಮಿಸಿ ಸ್ಕೌಟ್ಸ್ ಗೈಡ್ಸ್ ಕ್ಲಬ್ ಬುಲ್ ಬುಲ್ ವಿದ್ಯಾರ್ಥಿಗಳು ಡ್ರಾಯಿಂಗ್, ಕವನ ರಚನೆ ,ಪದ್ಯ ,ಕಥೆ ಪತ್ರ ಲೇಖನ, ಗ್ರೀಟಿಂಗ್ ಕಾರ್ಡ್ ಗಳನ್ನು ಉದ್ಘಟಿಸಿ , ಮಾತಾನಾಡಿ ಮಕ್ಕಳಿಗೆ ಕಾರ್ಗಿಲ್ ಯುದ್ಧದ ಬಗ್ಗೆ ಹಾಗೂ ಅಲ್ಲಿಯ ಪರಿಸ್ಥಿತಿಯ ಬಗ್ಗೆ ವಿವರಿಸಿದರು., ಹಾಗೂ ಮಕ್ಕಳನ್ನು ಸೈನ್ಯಕ್ಕೆ ಸೇರುವಂತೆ ಪ್ರೇರೇಪಿಸಿದರು. ಮುಖ್ಯ ಅಭ್ಯಂಗತರಾಗಿ ಭಾರತ್ಮ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾಸಹಾಯಕ ಆಯುಕ್ತರಾದ ಬಿ ಸೋಮಶೇಖರ ಶೆಟ್ಟಿ ಆಗಮಿಸಿದ್ದರು. ಮಕ್ಕಳಿಗೆ ದೇಶದ ಬಗ್ಗೆ ಅಭಿಮಾನ ಮೂಡಿಸಬೇಕೆನ್ನುವ ಹುರುಪಿನೊಂದಿಗೆ, . ನಮ್ಮ ಯೋಧರು ನಮ್ಮ ಹೆಮ್ಮೆ ಎಂಬುದನ್ನು ತಿಳಿಸಿದರು.

ಮಕ್ಕಳು ತಾವೇ ತಾವ ರಚಿಸಿದ ಕವನ ರಚನೆ , ಡ್ರಾಯಿಂಗ್, ಕಥೆ, ಪತ್ರ ಗಳನ್ನು ಬರೆದು ದೇಶ ಕಾಯುವ ವೀರ ಯೋಧರಿಗೆ ಕಳಿಸುವ ವ್ಯವಸ್ಥೆಯನ್ನು ಮಾಡಲಾಯಿತು.
ವೇದಿಕೆಯಲ್ಲಿ ಮುಖ್ಯ ಶಿಕ್ಷಕರಾದ ಶ್ರೀಮತಿ ಹೇಮಲತಾ ಎಂ ಆರ್ ಉಪಸ್ಥಿತರಿದ್ದರು. ಹಾಗೂ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಪ್ರಮೀಳಾ ಪೂಜಾರಿ ಉಪಸ್ಥಿತರಿದ್ದರು.

ಗೈಡ್ ವಿದ್ಯಾರ್ಥಿ ಶ್ರುತಾ ಶೆಟ್ಟಿ ನಿರೂಪಿಸಿ, ಗೈಡ್ ವಿದ್ಯಾರ್ಥಿ ಪ್ರಾಪ್ತಿ ವಿ ಶೆಟ್ಟಿ ಸ್ವಾಗತ ಹಾಗೂ ಪ್ರಾಸ್ತಾವಿಕ ಮಾತುಗಳನ್ನಾಡಿ, ಗೈಡ್ ವಿದ್ಯಾರ್ಥಿ ಪರಿಣಿತ ಧನ್ಯವಾದ ವಿತ್ತರು. ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ಪ್ರಮೀಳಾ ಪೂಜಾರಿ ಸಂಘಟಿಸಿದ ಕಾರ್ಯಕ್ರಮದಲ್ಲಿ ಸ್ಕೌಟ್ ಗೈಡ್ ಶಿಕ್ಷಕರುಗಳಾದ ನೀತಾ ಕೆಎಸ್, ಕಾರುಣ್ಯ, ಗೀತಾ ಪಿ, ಜಯಲಕ್ಷ್ಮಿ, ಮಂಜುನಾಥ್, ಜಯರಾಮ್, ರಮ್ಯ ಪ್ರಮೀಳಾ ಎನ್ ಸಹಕರಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ತ್ರೋಬಾಲ್ ಪಂದ್ಯಾಟ: ಪೆರಿಂಜೆ ಶ್ರೀ.ಧ.ಮಂ. ಅನುದಾನಿತ ಪ್ರೌಢಶಾಲೆ ವಿದ್ಯಾರ್ಥಿನಿ ಹಾಜ್ರ ರಾಫಿಯಾ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕೊಕ್ಕಡದಲ್ಲಿ ವಿಧಾನಪರಿಷತ್ ಉಪಚುನಾವಣೆ ನಿಮಿತ್ತ ಪೂರ್ವಭಾವಿ ಸಭೆ

Suddi Udaya

ಮಾ.19-26: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ, ಶ್ರೀ ದುರ್ಗಾದೇವಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ವಾರ್ಷಿಕ ಪ್ರತಿಷ್ಠಾ ವರ್ಧಂತಿ ಉತ್ಸವ-ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್‌ಎಂವೈಎಂ ಸೆಂಟ್ ಅಲ್ಫೋನ್ಸ ಚರ್ಚ್ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ಕಾರಿನಲ್ಲಿ ಮಲಗಿದ್ದವರ ಮೇಲೆ ಕಿಡಿಗೇಡಿಗಳಿಂದ ಹಲ್ಲೆ : ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದ ಘಟನೆ: ಗಾಯಗೊಂಡ ಮಿತ್ತಬಾಗಿಲು ಸಂಶುದ್ದೀನ್ ಮಂಗಳೂರು ಆಸ್ಪತ್ರೆಯಲ್ಲಿ ದಾಖಲು

Suddi Udaya

ಮುಮ್ತಾಜ್ ಇವರ ಚಿಕಿತ್ಸಾ ವೆಚ್ಚದ ಸಹಾಯಾರ್ಥವಾಗಿ ಲಕ್ಕಿ ಡ್ರಾ: ರೂ. 250/- ಗೆ ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ 5 ಸೆಂಟ್ಸ್ ಜಾಗ ಮತ್ತು ಮನೆ

Suddi Udaya
error: Content is protected !!