ಬೆಳ್ತಂಗಡಿ: ಧರ್ಮಸ್ಥಳ ಪರಿಸರದಲ್ಲಿ ಶವ ಹೂತಿಟ್ಟಿದ್ದಾಗಿ ಹೇಳಿರುವ ಪ್ರಕರಣದ ತನಿಖೆಗಾಗಿ ರಚಿಸಲಾದ ವಿಶೇಷ ತನಿಖಾ ತಂಡದ ಕಚೇರಿಯನ್ನು ಮಂಗಳೂರು ನಗರದ ಕದ್ರಿ ಮಲ್ಲಿಕಟ್ಟೆಯ ನಿರೀಕ್ಷಣ ಮಂದಿರದಲ್ಲಿ ತೆರೆಯಲಾಗಿದೆ.
ಪ್ರಕರಣದ ಬಗ್ಗೆ ವಿಶೇಷ ತನಿಖಾ ತಂಡವನ್ನು ಸಂಪರ್ಕಿಸಲು ಅಥವಾ ಮಾಹಿತಿ ನೀಡಲು ಬೆಳಗ್ಗೆ 10ರಿಂದ ಸಂಜೆ 5ರ ವರೆಗೆ ಸಹಾಯವಾಣಿ ಕಾರ್ಯನಿರ್ವಹಿಸಲಿದ್ದು, ಸಹಾಯವಾಣಿ ಸಂಖ್ಯೆ 0824-2005301, 8277986369 [email protected] ಎಂದು ಪ್ರಕಟನೆ ತಿಳಿಸಿದೆ.











