25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಬೆಳ್ತಂಗಡಿ ಪಟ್ಟಣ ಪಂಚಾಯತ್ ಬಿಲ್‌ಕಲೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ಲಕ್ಷ್ಮೀನಾರಾಯಣರಿಗೆ ಬೀಳ್ಕೊಡುಗೆ

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತ್‌ನಲ್ಲಿ ಸುಮಾರು ೩೨ ವರ್ಷಗಳ ಕಾಲ ಬಿಲ್‌ಕಲೆಕ್ಟರ್ ಆಗಿ ಸೇವೆ ಸಲ್ಲಿಸಿದ್ದ ಲಕ್ಷ್ಮೀನಾರಾಯಣ ಅವರು ಜು.೩೧ಕ್ಕೆ ಸೇವೆಯಿಂದ ನಿವೃತ್ತಿಹೊಂದಿದ್ದು ಅವರಿಗೆ ಪಟ್ಟಣ ಪಂಚಾಯತು ವತಿಯಿಂದ ಗೌರವಾರ್ಪಣೆ ಹಾಗೂ ಬೀಳ್ಕೋಡುಗೆ ಕಾರ್ಯಕ್ರಮ ಜು.೩೧ರಂದು ನಡೆಯಿತು.

ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ಅವರು ನಿವೃತ್ತರಾದ ಲಕ್ಷ್ಮೀನಾರಾಯಣ ಅವರನ್ನು ಪಂಚಾಯತು ವತಿಯಿಂದ ಪೇಟಾ ತೋಡಿಸಿ, ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು. ನಂತರ ಮಾತನಾಡಿ ಲಕ್ಷ್ಮೀನಾರಾಯಣ ಅವರ ಸಾಧನೆ ಹಾಗೂ ಕೆಲಸದಲ್ಲಿ ಪ್ರಾಮಾಣಿಕತೆ, ಸೇವಾ ನಿಷ್ಠತೆಗೆ ಮೆಚ್ಚುಗೆ ವ್ಯಕ್ತಪಡಿಸಿ, ನಿವೃತ್ತ ಜೀವನಕ್ಕೆ ಶುಭ ಕೋರಿದರು. ಹಿರಿಯ ಸದಸ್ಯ ಜಗದೀಶ್ ಡಿ, ಇಂಜಿನಿಯರ್ ಮಹಾವೀರ್ ಮಾನತಾಡಿ ನಿವೃತರ ಸೇವಾ ಕಾರ್ಯಗಳ ಬಗ್ಗೆ ತಿಳಿಸಿ ಶುಭ ಹಾರೈಸಿದರು.

ಮುಖ್ಯಾಧಿಕಾರಿ ರಾಜೇಶ್ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಶರತ್‌ಕುಮಾರ್ ಶೆಟ್ಟಿ, ಉಪಾಧ್ಯಕ್ಷೆ ಗೌರಿ, ಸದಸ್ಯರಾದ ಅಂಬರೀಶ್, ತುಳಸಿ, ಜನಾರ್ದನ್ ಕುಲಾಲ್, ಲೋಕೇಶ್ ನಾಯ್ಕ, ನಾಮನಿರ್ದೇಶನ ಸದಸ್ಯರಾದ ಹೆನ್ರಿಲೋಬೋ, ಸತೀಶ್ ಶೆಟ್ಟಿ, ಅಬ್ದುಲ್ ಬಶೀರ್ ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಉಜಿರೆ: ಶ್ರೀ ಧ. ಮಂ. ಆಂ. ಮಾ. ಶಾಲೆಯಲ್ಲಿ ಯೋಗ ಉದ್ಘಾಟನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯ ಮೂವರ ಸಜೀವ ದಹನ ಪ್ರಕರಣ: ವಿಧಾನ ಪರಿಷತ್ ಸದಸ್ಯರನ್ನು ಭೇಟಿಯಾದ ಎಸ್‌ಡಿಪಿಐ ಮುಖಂಡರ ನಿಯೋಗ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಮಂಗಳೂರು ವಿ.ವಿ. ಮಟ್ಟದ ತ್ರೋಬಾಲ್ ಕ್ರೀಡಾಕೂಟ

Suddi Udaya

ಉಜಿರೆ: ವರ್ತಕರ ಸಂಘದ ನೇತೃತ್ವದಲ್ಲಿ ಉಜಿರೆ ಬ್ರಹ್ಮಕಲಶೋತ್ಸವ ವಾಹನ ಜಾಥಕ್ಕೆ ಚಾಲನೆ – ನೂರಾರು ಸಂಖ್ಯೆಯಲ್ಲಿ ವಾಹನದಲ್ಲಿ ಪಾಲ್ಗೊಂಡ ಭಕ್ತರು, ಪುಂಜಾಲಕಟ್ಟೆ,ಧರ್ಮಸ್ಥಳ,ಉಜಿರೆ ವಾಹನ ಜಾಥ ಮೂಲಕ ಸೇವೆ

Suddi Udaya

ಬೆಳ್ತಂಗಡಿ ಕ.ಸಾ.ಪ. ಕ್ಕೆ ಸಂಘಟನ ಕಾರ್ಯದರ್ಶಿಗಳ ನೇಮಕ

Suddi Udaya

ಕೊಕ್ಕಡ ವಲಯದ ಭಜನಾ ಪರಿಷತ್ ಸಭೆ

Suddi Udaya
error: Content is protected !!