23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಬೆಳ್ತಂಗಡಿ ಪಟ್ಟಣ ಪಂಚಾಯತ್ ಬಿಲ್‌ಕಲೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ಲಕ್ಷ್ಮೀನಾರಾಯಣರಿಗೆ ಬೀಳ್ಕೊಡುಗೆ

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತ್‌ನಲ್ಲಿ ಸುಮಾರು ೩೨ ವರ್ಷಗಳ ಕಾಲ ಬಿಲ್‌ಕಲೆಕ್ಟರ್ ಆಗಿ ಸೇವೆ ಸಲ್ಲಿಸಿದ್ದ ಲಕ್ಷ್ಮೀನಾರಾಯಣ ಅವರು ಜು.೩೧ಕ್ಕೆ ಸೇವೆಯಿಂದ ನಿವೃತ್ತಿಹೊಂದಿದ್ದು ಅವರಿಗೆ ಪಟ್ಟಣ ಪಂಚಾಯತು ವತಿಯಿಂದ ಗೌರವಾರ್ಪಣೆ ಹಾಗೂ ಬೀಳ್ಕೋಡುಗೆ ಕಾರ್ಯಕ್ರಮ ಜು.೩೧ರಂದು ನಡೆಯಿತು.

ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ಅವರು ನಿವೃತ್ತರಾದ ಲಕ್ಷ್ಮೀನಾರಾಯಣ ಅವರನ್ನು ಪಂಚಾಯತು ವತಿಯಿಂದ ಪೇಟಾ ತೋಡಿಸಿ, ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು. ನಂತರ ಮಾತನಾಡಿ ಲಕ್ಷ್ಮೀನಾರಾಯಣ ಅವರ ಸಾಧನೆ ಹಾಗೂ ಕೆಲಸದಲ್ಲಿ ಪ್ರಾಮಾಣಿಕತೆ, ಸೇವಾ ನಿಷ್ಠತೆಗೆ ಮೆಚ್ಚುಗೆ ವ್ಯಕ್ತಪಡಿಸಿ, ನಿವೃತ್ತ ಜೀವನಕ್ಕೆ ಶುಭ ಕೋರಿದರು. ಹಿರಿಯ ಸದಸ್ಯ ಜಗದೀಶ್ ಡಿ, ಇಂಜಿನಿಯರ್ ಮಹಾವೀರ್ ಮಾನತಾಡಿ ನಿವೃತರ ಸೇವಾ ಕಾರ್ಯಗಳ ಬಗ್ಗೆ ತಿಳಿಸಿ ಶುಭ ಹಾರೈಸಿದರು.

ಮುಖ್ಯಾಧಿಕಾರಿ ರಾಜೇಶ್ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಶರತ್‌ಕುಮಾರ್ ಶೆಟ್ಟಿ, ಉಪಾಧ್ಯಕ್ಷೆ ಗೌರಿ, ಸದಸ್ಯರಾದ ಅಂಬರೀಶ್, ತುಳಸಿ, ಜನಾರ್ದನ್ ಕುಲಾಲ್, ಲೋಕೇಶ್ ನಾಯ್ಕ, ನಾಮನಿರ್ದೇಶನ ಸದಸ್ಯರಾದ ಹೆನ್ರಿಲೋಬೋ, ಸತೀಶ್ ಶೆಟ್ಟಿ, ಅಬ್ದುಲ್ ಬಶೀರ್ ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ನಿಡಿಗಲ್ ಹಳೆ ಸೇತುವೆ ಪರಿಸರದಲ್ಲಿ ಕಸ ಹಾಕಿದವರಿಂದಲೇ ಕಸ ವಿಲೇವಾರಿ: ದಂಡ ವಸೂಲಿ

Suddi Udaya

ಬೆಳ್ತಂಗಡಿ: ಮರದ ಗೆಲ್ಲು ಬಿದ್ದು ಮಹಿಳೆ ಸಾವು

Suddi Udaya

ಎಸ್.ಡಿ.ಎಂ ಬಿ.ಎಡ್ ಕಾಲೇಜು ವಾರ್ಷಿಕೋತ್ಸವ

Suddi Udaya

ಮೇ.3 : ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

Suddi Udaya

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ರಾಜ್ಯ ಸರ್ಕಾರ ವಿರುದ್ಧ ಬೃಹತ್ ಪ್ರತಿಭಟನೆ ಮಲವಂತಿಗೆ ಗ್ರಾ.ಪಂ ಎದುರು ಪ್ರತಿಭಟನೆ

Suddi Udaya
error: Content is protected !!