22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಬೆಳ್ತಂಗಡಿ ಪಟ್ಟಣ ಪಂಚಾಯತ್ ಬಿಲ್‌ಕಲೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ಲಕ್ಷ್ಮೀನಾರಾಯಣರಿಗೆ ಬೀಳ್ಕೊಡುಗೆ

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತ್‌ನಲ್ಲಿ ಸುಮಾರು ೩೨ ವರ್ಷಗಳ ಕಾಲ ಬಿಲ್‌ಕಲೆಕ್ಟರ್ ಆಗಿ ಸೇವೆ ಸಲ್ಲಿಸಿದ್ದ ಲಕ್ಷ್ಮೀನಾರಾಯಣ ಅವರು ಜು.೩೧ಕ್ಕೆ ಸೇವೆಯಿಂದ ನಿವೃತ್ತಿಹೊಂದಿದ್ದು ಅವರಿಗೆ ಪಟ್ಟಣ ಪಂಚಾಯತು ವತಿಯಿಂದ ಗೌರವಾರ್ಪಣೆ ಹಾಗೂ ಬೀಳ್ಕೋಡುಗೆ ಕಾರ್ಯಕ್ರಮ ಜು.೩೧ರಂದು ನಡೆಯಿತು.

ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ಅವರು ನಿವೃತ್ತರಾದ ಲಕ್ಷ್ಮೀನಾರಾಯಣ ಅವರನ್ನು ಪಂಚಾಯತು ವತಿಯಿಂದ ಪೇಟಾ ತೋಡಿಸಿ, ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು. ನಂತರ ಮಾತನಾಡಿ ಲಕ್ಷ್ಮೀನಾರಾಯಣ ಅವರ ಸಾಧನೆ ಹಾಗೂ ಕೆಲಸದಲ್ಲಿ ಪ್ರಾಮಾಣಿಕತೆ, ಸೇವಾ ನಿಷ್ಠತೆಗೆ ಮೆಚ್ಚುಗೆ ವ್ಯಕ್ತಪಡಿಸಿ, ನಿವೃತ್ತ ಜೀವನಕ್ಕೆ ಶುಭ ಕೋರಿದರು. ಹಿರಿಯ ಸದಸ್ಯ ಜಗದೀಶ್ ಡಿ, ಇಂಜಿನಿಯರ್ ಮಹಾವೀರ್ ಮಾನತಾಡಿ ನಿವೃತರ ಸೇವಾ ಕಾರ್ಯಗಳ ಬಗ್ಗೆ ತಿಳಿಸಿ ಶುಭ ಹಾರೈಸಿದರು.

ಮುಖ್ಯಾಧಿಕಾರಿ ರಾಜೇಶ್ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಶರತ್‌ಕುಮಾರ್ ಶೆಟ್ಟಿ, ಉಪಾಧ್ಯಕ್ಷೆ ಗೌರಿ, ಸದಸ್ಯರಾದ ಅಂಬರೀಶ್, ತುಳಸಿ, ಜನಾರ್ದನ್ ಕುಲಾಲ್, ಲೋಕೇಶ್ ನಾಯ್ಕ, ನಾಮನಿರ್ದೇಶನ ಸದಸ್ಯರಾದ ಹೆನ್ರಿಲೋಬೋ, ಸತೀಶ್ ಶೆಟ್ಟಿ, ಅಬ್ದುಲ್ ಬಶೀರ್ ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ : ಮಹಿಳೆಯ ರೂ. 2 ಲಕ್ಷ ಮೌಲ್ಯದ ಮಾಂಗಲ್ಯ ಸರ ಇರಿಸಿದ್ದ ಪರ್ಸ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ನರೇಗಾ ಮತ್ತು ತೆರಿಗೆ ವಸೂಲಾತಿಯಲ್ಲಿ ಗುರಿ ಸಾಧನೆ ಮಾಡಿದವರಿಗೆ ಸನ್ಮಾನ

Suddi Udaya

ಎಸ್. ಡಿ. ಎಮ್ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮಂಗಳೂರು ವಿ.ವಿ ರಾಣಿ ಅಬ್ಬಕ್ಕ ಅಧ್ಯಯನ ಪೀಠದ ಸಲಹಾ ಸಮಿತಿಯ ನಾಮ ನಿರ್ದೇಶಿತ ಸದಸ್ಯರಾಗಿ ಯೋಗೀಶ್ ಕೈರೋಡಿಆಯ್ಕೆ

Suddi Udaya

ಮಧ್ವ ಯಕ್ಷಕೂಟ:ವಾರ್ಷಿಕೋತ್ಸವ, ಸಮ್ಮಾನಸನಾತರ ಧರ್ಮದ ಉಳಿವಿಗೆ ಯಕ್ಷಗಾನದ ಕೊಡುಗೆ ಅಪಾರ: ರಾಘವೇಂದ್ರ ಭಟ್

Suddi Udaya
error: Content is protected !!