July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಕಾಮರ್ಸ್ ಕ್ಯಾಂಪಸ್ ಅಸೋಸಿಯೇಶನ್ ಉದ್ಘಾಟನೆ

ಉಜಿರೆ: ಜೀವನದಲ್ಲಿ ದೊಡ್ಡ ಸ್ಥಾನಕ್ಕೆ ನಾವು ಹೋಗಬಯಸುವುದಾದರೆ, ನಮ್ಮಲ್ಲಿ ದೊಡ್ಡ ಕನಸಿರಬೇಕು, ಜೊತೆಗೆ ನಮ್ಮ ಗುರಿಯತ್ತ ಮುನ್ನಡೆಸುವುದಕ್ಕೆ ಉತ್ತಮ ಗುರು ಇರಬೇಕು” ಎಂದು ನಟ ಹಾಗೂ ಬೆಂಗಳೂರಿನ ಎಸ್ ಜಿ ಅಡ್ವೈಸರಿ ಸರ್ವೀಸಸ್ ನ ಪ್ರಾಕ್ಟೀಸಿಂಗ್ ಕಂಪನಿ ಸೆಕ್ರೆಟರಿ, ಉಜಿರೆ ಎಸ್.ಡಿ.ಎಂ. ಕಾಲೇಜಿನ ಹಿರಿಯ ವಿದ್ಯಾರ್ಥಿ ಗಣೇಶ್ ಶೆಣೈ ಹೇಳಿದರು.

ಕಾಲೇಜಿನಲ್ಲಿ ಇಂದು (ಜು.30) ಅವರು ಕಾಮರ್ಸ್ ಕ್ಯಾಂಪಸ್ ಅಸೋಸಿಯೇಶನ್ (ಸಿಸಿಎ) ಉದ್ಘಾಟಿಸಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಕಾಲೇಜಿನ ವಾಣಿಜ್ಯ ವಿಭಾಗ ಮತ್ತು ವ್ಯವಹಾರ ಆಡಳಿತ ವಿಭಾಗದ ಜಂಟಿ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

“ಸಾಧನೆಗೆ ಅವಕಾಶಗಳು ಎಂದಿಗೂ ಕಡಿಮೆಯಾಗುವುದಿಲ್ಲ. ಯಾವುದು ನಿಮ್ಮ ಕ್ಷೇತ್ರವೋ ಅದರಲ್ಲಿ ನೀವು ಬೆಳೆಯಬಹುದು. ಆದರೆ ಎಲ್ಲದಕ್ಕೂ ಕೂಡ ನೀವು ಪಡುವ ಶ್ರಮ, ಶ್ರದ್ಧೆ ಮಾತ್ರ ಬಹಳ ದೊಡ್ಡ ಪಾತ್ರವಹಿಸುತ್ತದೆ. ಗುರಿಯ ಬಗ್ಗೆ ಸ್ಪಷ್ಟತೆ, ಗುರುವಿನ ಮಾರ್ಗದರ್ಶನವಿದ್ದರೆ ಯಶಸ್ಸು ಸಾಧ್ಯ” ಎಂದು ಅವರು ಕಿವಿಮಾತು ಹೇಳಿದರು.


ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲ ಡಾ. ವಿಶ್ವನಾಥ ಪಿ., “ಕಲಿಕೆಗೆ ಪೂರಕವಾದ ಎಲ್ಲಾ ಸೌಲಭ್ಯಗಳು ಇಂದು ವಿದ್ಯಾರ್ಥಿಗಳಿಗೆ ಸುಲಭವಾಗಿ ಲಭ್ಯವಿದೆ. ಇದನ್ನೆಲ್ಲಾ ಬಳಸಿಕೊಂಡು ಯಾವ ರೀತಿ ಜ್ಞಾನವನ್ನು ಪಡೆದುಕೊಳ್ಳಬೇಕು ಎಂಬುದನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು. ಇದರ ಜೊತೆಗೆ ಇರುವ ಜ್ಞಾನವನ್ನು ಯಾವ ರೀತಿ ಎಲ್ಲಿ ಬಳಸಬೇಕು ಎನ್ನುವುದನ್ನು ಸರಿಯಾಗಿ ತಿಳಿದುಕೊಂಡು ವಿದ್ಯಾರ್ಥಿಗಳು ಮುನ್ನಡೆಯಬೇಕಿದೆ” ಎಂದರು.


ವಿಭಾಗದ ಭಿತ್ತಿಪತ್ರಿಕೆ ‘ವಣಿಕ’ ಬಿಡುಗಡೆಗೊಳಿಸಲಾಯಿತು. ವಾಣಿಜ್ಯ ನಿಕಾಯದ ಡೀನ್ ಶಕುಂತಳಾ ಅವರು ಸಿ ಸಿ ಎ ಸಂಘದ ನೂತನ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು.

ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ. ರತ್ನಾವತಿ ಕೆ., ಸಿಸಿಎ ಸಂಯೋಜಕರಾದ ಫಾತಿಮಾ ಸಫೀರಾ, ಗುರುರಾಜ್ ಮತ್ತು ವಿದ್ಯಾರ್ಥಿ ನಾಯಕರು ಉಪಸ್ಥಿತರಿದ್ದರು.

Related posts

ಮಾಜಿ ಶಾಸಕ ಕೆ.ವಸಂತ ಬಂಗೇರರಿಗೆ ಸಾವಿರದ ನುಡಿ ನಮನ ಕಾಯ೯ಕ್ರಮ

Suddi Udaya

ಬೆಳ್ತಂಗಡಿ : ರಸ್ತೆ ಬದಿ ಕುಸಿದು ಬಿದ್ದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಮಹೇಶ್ ಶೆಟ್ಟಿಯವರು‌ ಕಾಂಗ್ರೆಸ್ ಗೆ ಬೆಂಬಲ‌ ನೀಡಿದ್ರೆ ಅದು ವ್ಯಕ್ತಿಗತ, ಪಕ್ಷವಾಗಿ ಅಲ್ಲ, ಶಶಿರಾಜ್ ಶೆಟ್ಟಿಯವರ ಆರೋಪ ಸತ್ಯಕ್ಕೆ ದೂರವಾದದ್ದು

Suddi Udaya

ಮಂಗಳೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಂಎಲ್ಸಿ ಹರೀಶ್ ಕುಮಾರ್ ಪಿಕ್ಸ್

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ, ಯುವ ಬಂಟರ ಹಾಗೂ ಮಹಿಳಾ ವಿಭಾಗದ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಅನಿತಾ ಕುಮಾರಿ ಎ, ಉಪಾಧ್ಯಕ್ಷರಾಗಿ ಪೂರ್ಣಾಕ್ಷ ಬಿ ಆಯ್ಕೆ

Suddi Udaya
error: Content is protected !!