September 6, 2026
Uncategorized

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ಪ್ರಕರಣ ಮತ್ತೆ 9 ಮಂದಿ ಪೊಲೀಸರು SIT ಗೆ ನೇಮಕ

ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧಿಸಿದಂತೆ ಎಸ್.ಐ.ಟಿಯ ಮೂವರು ಉನ್ನತ ಅಧಿಕಾರಿಗಳು ನೇಮಕ ಮಾಡಿದ ಬಳಿಕ 20 ಮಂದಿ ಅಧಿಕಾರಿಗಳನ್ನು ನೇಮಕ ಮಾಡಲಾಗಿತ್ತು.‌ ಇದೀಗ ಮತ್ತೆ 9 ಮಂದಿ ಪೊಲೀಸರನ್ನು ನೇಮಕಗೊಳಿಸಿ ಆದೇಶ ಮಾಡಲಾಗಿದೆ.

ಉಪ್ಪಿನಂಗಡಿ ಪೊಲೀಸ್ ಠಾಣೆಯ ಪಿಎಸ್ಐ ಲಾರೆನ್ಸ್, ಸೆನ್ ಪೊಲೀಸ್‌ ಠಾಣೆಯ ಹೆಚ್.ಸಿ ಪುನೀತ್, ಉಪ್ಪಿನಂಗಡಿ ಪೊಲೀಸ್ ಠಾಣೆಯ ಹೆಚ್.ಸಿ ಮನೋಹರ, ವಿಟ್ಲ ಪೊಲೀಸ್ ಠಾಣೆಯ ಪಿ.ಸಿ ಮನೋಜ್, ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪಿ.ಸಿ ಸಂದೀಪ್, ಉಡುಪಿ ಸಿ.ಎಸ್.ಪಿ ಪೊಲೀಸ್ ಠಾಣೆಯ ಪಿ.ಸಿ ಲೋಕೇಶ್, ಹೊನ್ನಾವರ ಪೊಲೀಸ್ ಠಾಣೆಯ ಹೆಚ್.ಸಿ ಸತೀಶ್ ನಾಯ್ಕ, ಮಂಗಳೂರು ಎಫ್.ಎಮ್.ಎಸ್ ದಳದ ಹೆಚ್.ಸಿ ಜಯರಾಮೇಗೌಡ ಮತ್ತು ಹೆಚ್.ಸಿ ಬಾಲಕೃಷ್ಣ ಗೌಡ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಎಸ್.ಐ.ಟಿ ಸಂಸ್ಥೆಗೆ ವರದಿ ಮಾಡಿಕೊಳ್ಳಲು ಡಿಜಿ&ಐಜಿಪಿ ಡಾ.ಎಂ.ಎ ಸಲೀಂ ಜು.30 ರಂದು ಆದೇಶ ಹೊರಡಿಸಿದ್ದಾರೆ.

Related posts

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಅನುಷ್ಕಾ ಶೆಟ್ಟಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿ ಶುಭರಾಜ್ ಬಂಧನ

Suddi Udaya

ಅರಸಿನಮಕ್ಕಿ -ಶಿಶಿಲ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಿಂದ ಕೊಕ್ಕಡ ಸರಕಾರಿ ಆಸ್ಪತ್ರೆಯ ಬಾವಿಯ ಸ್ವಚ್ಛತಾ ಕಾರ್ಯ

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆ : ಸದಸ್ಯರಿಗೆ ಶೇಕಡಾ 20 ರಷ್ಟು ಲಾಭಾಂಶವನ್ನು ಘೋಷಿಸಿದ ಅಧ್ಯಕ್ಷ ಜಯಕೀತಿ೯ ಜೈನ್

Suddi Udaya

ವಗ್ಗ: ಬೈಕ್ ಮತ್ತು ಸರ್ಕಾರಿ ಬಸ್ ನಡುವೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

Suddi Udaya

ಮುಂಡಾಜೆ ವಿನೋದ್ ಖಾಡಿಲ್ಕರ್ ನಿಧನ

Suddi Udaya
error: Content is protected !!