September 6, 2026
Uncategorized

ಬೆಳ್ತಂಗಡಿ ಪಟ್ಟಣ ಪಂಚಾಯತ್ ಬಿಲ್‌ಕಲೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ಲಕ್ಷ್ಮೀನಾರಾಯಣರಿಗೆ ಬೀಳ್ಕೊಡುಗೆ

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತ್‌ನಲ್ಲಿ ಸುಮಾರು ೩೨ ವರ್ಷಗಳ ಕಾಲ ಬಿಲ್‌ಕಲೆಕ್ಟರ್ ಆಗಿ ಸೇವೆ ಸಲ್ಲಿಸಿದ್ದ ಲಕ್ಷ್ಮೀನಾರಾಯಣ ಅವರು ಜು.೩೧ಕ್ಕೆ ಸೇವೆಯಿಂದ ನಿವೃತ್ತಿಹೊಂದಿದ್ದು ಅವರಿಗೆ ಪಟ್ಟಣ ಪಂಚಾಯತು ವತಿಯಿಂದ ಗೌರವಾರ್ಪಣೆ ಹಾಗೂ ಬೀಳ್ಕೋಡುಗೆ ಕಾರ್ಯಕ್ರಮ ಜು.೩೧ರಂದು ನಡೆಯಿತು.

ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ಅವರು ನಿವೃತ್ತರಾದ ಲಕ್ಷ್ಮೀನಾರಾಯಣ ಅವರನ್ನು ಪಂಚಾಯತು ವತಿಯಿಂದ ಪೇಟಾ ತೋಡಿಸಿ, ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು. ನಂತರ ಮಾತನಾಡಿ ಲಕ್ಷ್ಮೀನಾರಾಯಣ ಅವರ ಸಾಧನೆ ಹಾಗೂ ಕೆಲಸದಲ್ಲಿ ಪ್ರಾಮಾಣಿಕತೆ, ಸೇವಾ ನಿಷ್ಠತೆಗೆ ಮೆಚ್ಚುಗೆ ವ್ಯಕ್ತಪಡಿಸಿ, ನಿವೃತ್ತ ಜೀವನಕ್ಕೆ ಶುಭ ಕೋರಿದರು. ಹಿರಿಯ ಸದಸ್ಯ ಜಗದೀಶ್ ಡಿ, ಇಂಜಿನಿಯರ್ ಮಹಾವೀರ್ ಮಾನತಾಡಿ ನಿವೃತರ ಸೇವಾ ಕಾರ್ಯಗಳ ಬಗ್ಗೆ ತಿಳಿಸಿ ಶುಭ ಹಾರೈಸಿದರು.

ಮುಖ್ಯಾಧಿಕಾರಿ ರಾಜೇಶ್ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಶರತ್‌ಕುಮಾರ್ ಶೆಟ್ಟಿ, ಉಪಾಧ್ಯಕ್ಷೆ ಗೌರಿ, ಸದಸ್ಯರಾದ ಅಂಬರೀಶ್, ತುಳಸಿ, ಜನಾರ್ದನ್ ಕುಲಾಲ್, ಲೋಕೇಶ್ ನಾಯ್ಕ, ನಾಮನಿರ್ದೇಶನ ಸದಸ್ಯರಾದ ಹೆನ್ರಿಲೋಬೋ, ಸತೀಶ್ ಶೆಟ್ಟಿ, ಅಬ್ದುಲ್ ಬಶೀರ್ ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ದ.ಕ. ಜಿಲ್ಲೆಯ ಪ್ರಸಿದ್ಧ ದೇವಾಲಯಗಳು ಮತ್ತು ಇತರ ಸ್ಥಳಗಳಿಗೆ ಸಂಪರ್ಕವನ್ನು ಹೆಚ್ಚಿಸುವ ದೃಷ್ಟಿಯಿಂದ ಎರಡು ಸ್ಪರ್ ರಸ್ತೆಗಳ ನಿರ್ಮಾಣಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ರವರಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಗೆಲುವು: ಬೈಕ್ ಜಾಥದ ಮುಖೇನಾ ಗೆಲುವನ್ನು ಸಂಭ್ರಮಿಸಿದ ನಾಲ್ಕೂರಿನ ಕಾರ್ಯಕರ್ತರು

Suddi Udaya

ಬೆಳಾಲು : ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಉಡುಪಿ ಪೇಜಾವರ ಮಠದ ಸ್ವಾಮೀಜಿ ಭೇಟಿ, ಆಶೀರ್ವಚನ

Suddi Udaya

ಮರೋಡಿ ಗ್ರಾ.ಪಂನಿಂದ ಪೆರಾಡಿಯಲ್ಲಿ ನಿರ್ಮಿಸಲಾದ ರೂ.5.60 ಲಕ್ಷ ವೆಚ್ಚದ ಸೋಲಾರ್ ದೀಪ ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

Suddi Udaya

ಮಂಗಳೂರು ವಿ.ವಿ ರಾಣಿ ಅಬ್ಬಕ್ಕ ಅಧ್ಯಯನ ಪೀಠದ ಸಲಹಾ ಸಮಿತಿಯ ನಾಮ ನಿರ್ದೇಶಿತ ಸದಸ್ಯರಾಗಿ ಯೋಗೀಶ್ ಕೈರೋಡಿಆಯ್ಕೆ

Suddi Udaya

ಕಟ್ಟೆ: ಎಂಟು ಅಡಿ ಉದ್ದದ ಹೆಬ್ಬಾವು ಪತ್ತೆ

Suddi Udaya
error: Content is protected !!