22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಬೆಳ್ತಂಗಡಿ ಪಟ್ಟಣ ಪಂಚಾಯತ್ ಬಿಲ್‌ಕಲೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ಲಕ್ಷ್ಮೀನಾರಾಯಣರಿಗೆ ಬೀಳ್ಕೊಡುಗೆ

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತ್‌ನಲ್ಲಿ ಸುಮಾರು ೩೨ ವರ್ಷಗಳ ಕಾಲ ಬಿಲ್‌ಕಲೆಕ್ಟರ್ ಆಗಿ ಸೇವೆ ಸಲ್ಲಿಸಿದ್ದ ಲಕ್ಷ್ಮೀನಾರಾಯಣ ಅವರು ಜು.೩೧ಕ್ಕೆ ಸೇವೆಯಿಂದ ನಿವೃತ್ತಿಹೊಂದಿದ್ದು ಅವರಿಗೆ ಪಟ್ಟಣ ಪಂಚಾಯತು ವತಿಯಿಂದ ಗೌರವಾರ್ಪಣೆ ಹಾಗೂ ಬೀಳ್ಕೋಡುಗೆ ಕಾರ್ಯಕ್ರಮ ಜು.೩೧ರಂದು ನಡೆಯಿತು.

ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ಅವರು ನಿವೃತ್ತರಾದ ಲಕ್ಷ್ಮೀನಾರಾಯಣ ಅವರನ್ನು ಪಂಚಾಯತು ವತಿಯಿಂದ ಪೇಟಾ ತೋಡಿಸಿ, ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು. ನಂತರ ಮಾತನಾಡಿ ಲಕ್ಷ್ಮೀನಾರಾಯಣ ಅವರ ಸಾಧನೆ ಹಾಗೂ ಕೆಲಸದಲ್ಲಿ ಪ್ರಾಮಾಣಿಕತೆ, ಸೇವಾ ನಿಷ್ಠತೆಗೆ ಮೆಚ್ಚುಗೆ ವ್ಯಕ್ತಪಡಿಸಿ, ನಿವೃತ್ತ ಜೀವನಕ್ಕೆ ಶುಭ ಕೋರಿದರು. ಹಿರಿಯ ಸದಸ್ಯ ಜಗದೀಶ್ ಡಿ, ಇಂಜಿನಿಯರ್ ಮಹಾವೀರ್ ಮಾನತಾಡಿ ನಿವೃತರ ಸೇವಾ ಕಾರ್ಯಗಳ ಬಗ್ಗೆ ತಿಳಿಸಿ ಶುಭ ಹಾರೈಸಿದರು.

ಮುಖ್ಯಾಧಿಕಾರಿ ರಾಜೇಶ್ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಶರತ್‌ಕುಮಾರ್ ಶೆಟ್ಟಿ, ಉಪಾಧ್ಯಕ್ಷೆ ಗೌರಿ, ಸದಸ್ಯರಾದ ಅಂಬರೀಶ್, ತುಳಸಿ, ಜನಾರ್ದನ್ ಕುಲಾಲ್, ಲೋಕೇಶ್ ನಾಯ್ಕ, ನಾಮನಿರ್ದೇಶನ ಸದಸ್ಯರಾದ ಹೆನ್ರಿಲೋಬೋ, ಸತೀಶ್ ಶೆಟ್ಟಿ, ಅಬ್ದುಲ್ ಬಶೀರ್ ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಎಪಿಎಂಸಿ ನಿವೃತ್ತ ಕಾರ್ಯದರ್ಶಿ ವೆಂಕಪ್ಪ ಗೌಡ ಕೈಯಾಡಿ ನಿಧನ

Suddi Udaya

ಪಕ್ಷೇತರ ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ಭಟ್ ನಾಮಪತ್ರ ಸಲ್ಲಿಕೆ

Suddi Udaya

ಬೆಳ್ತಂಗಡಿ ಹುಂಡೈ ಶೋ ರೂಮ್ ನಲ್ಲಿ ನ್ಯೂ ಕ್ರೆಟಾ ಫೇಸ್ ಲಿಫ್ಟ್ ಕಾರು ಮಾರುಕಟ್ಟೆಗೆ ಬಿಡುಗಡೆ

Suddi Udaya

ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಸೇವಾ ನಿವೃತ್ತಿ: ಗೇರುಕಟ್ಟೆ ಸ.ಪ್ರೌ. ಶಾಲೆ ವತಿಯಿಂದ ಗೌರವಾರ್ಪಣೆ

Suddi Udaya

ನಡ: ಭಾರೀ ಗಾಳಿಗೆ ಮನೆಗೆ ಮರ ಬಿದ್ದು ಹಾನಿ

Suddi Udaya

ಬೆಳ್ತಂಗಡಿ: 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅಂದರ್: ಈತನ 36 ವರ್ಷದ ಟ್ರಾವೆಲ್ ಹಿಸ್ಟರಿ ಮಾತ್ರ ಬಿಂದಾಸ್

Suddi Udaya
error: Content is protected !!