23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಬೆಳ್ತಂಗಡಿ ಪಟ್ಟಣ ಪಂಚಾಯತ್ ಬಿಲ್‌ಕಲೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ಲಕ್ಷ್ಮೀನಾರಾಯಣರಿಗೆ ಬೀಳ್ಕೊಡುಗೆ

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತ್‌ನಲ್ಲಿ ಸುಮಾರು ೩೨ ವರ್ಷಗಳ ಕಾಲ ಬಿಲ್‌ಕಲೆಕ್ಟರ್ ಆಗಿ ಸೇವೆ ಸಲ್ಲಿಸಿದ್ದ ಲಕ್ಷ್ಮೀನಾರಾಯಣ ಅವರು ಜು.೩೧ಕ್ಕೆ ಸೇವೆಯಿಂದ ನಿವೃತ್ತಿಹೊಂದಿದ್ದು ಅವರಿಗೆ ಪಟ್ಟಣ ಪಂಚಾಯತು ವತಿಯಿಂದ ಗೌರವಾರ್ಪಣೆ ಹಾಗೂ ಬೀಳ್ಕೋಡುಗೆ ಕಾರ್ಯಕ್ರಮ ಜು.೩೧ರಂದು ನಡೆಯಿತು.

ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ಅವರು ನಿವೃತ್ತರಾದ ಲಕ್ಷ್ಮೀನಾರಾಯಣ ಅವರನ್ನು ಪಂಚಾಯತು ವತಿಯಿಂದ ಪೇಟಾ ತೋಡಿಸಿ, ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು. ನಂತರ ಮಾತನಾಡಿ ಲಕ್ಷ್ಮೀನಾರಾಯಣ ಅವರ ಸಾಧನೆ ಹಾಗೂ ಕೆಲಸದಲ್ಲಿ ಪ್ರಾಮಾಣಿಕತೆ, ಸೇವಾ ನಿಷ್ಠತೆಗೆ ಮೆಚ್ಚುಗೆ ವ್ಯಕ್ತಪಡಿಸಿ, ನಿವೃತ್ತ ಜೀವನಕ್ಕೆ ಶುಭ ಕೋರಿದರು. ಹಿರಿಯ ಸದಸ್ಯ ಜಗದೀಶ್ ಡಿ, ಇಂಜಿನಿಯರ್ ಮಹಾವೀರ್ ಮಾನತಾಡಿ ನಿವೃತರ ಸೇವಾ ಕಾರ್ಯಗಳ ಬಗ್ಗೆ ತಿಳಿಸಿ ಶುಭ ಹಾರೈಸಿದರು.

ಮುಖ್ಯಾಧಿಕಾರಿ ರಾಜೇಶ್ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಶರತ್‌ಕುಮಾರ್ ಶೆಟ್ಟಿ, ಉಪಾಧ್ಯಕ್ಷೆ ಗೌರಿ, ಸದಸ್ಯರಾದ ಅಂಬರೀಶ್, ತುಳಸಿ, ಜನಾರ್ದನ್ ಕುಲಾಲ್, ಲೋಕೇಶ್ ನಾಯ್ಕ, ನಾಮನಿರ್ದೇಶನ ಸದಸ್ಯರಾದ ಹೆನ್ರಿಲೋಬೋ, ಸತೀಶ್ ಶೆಟ್ಟಿ, ಅಬ್ದುಲ್ ಬಶೀರ್ ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕರ್ನಾಟಕ ಮುಸ್ಲಿಮ್ ಜಮಾ ಅತ್ ನ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್ ನ ವಾರ್ಷಿಕ ಮಹಾಸಭೆ

Suddi Udaya

ಭರತನಾಟ್ಯ ಜ್ಯೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಬೆಳ್ತಂಗಡಿ ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರಾಪ್ತಿ ವಿ. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಮಿತ್ತಬಾಗಿಲು ಕೊಪ್ಪದಗುಂಡಿ ಕಿಂಡಿ ಅಣೆಕಟ್ಟು ಮುಳುಗಡೆ:ಬೈಕ್ ಸಹಿತ ನೀರು ಪಾಲಾದ ವ್ಯಕ್ತಿ ಅಪಾಯದಿಂದ ಪಾರು

Suddi Udaya

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಶೇ. 92 ಫಲಿತಾಂಶ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನ ಕಂಪೌಂಡ್ ಕುಸಿತ

Suddi Udaya
error: Content is protected !!