23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಬೆಳ್ತಂಗಡಿ ಪಟ್ಟಣ ಪಂಚಾಯತ್ ಬಿಲ್‌ಕಲೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ಲಕ್ಷ್ಮೀನಾರಾಯಣರಿಗೆ ಬೀಳ್ಕೊಡುಗೆ

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತ್‌ನಲ್ಲಿ ಸುಮಾರು ೩೨ ವರ್ಷಗಳ ಕಾಲ ಬಿಲ್‌ಕಲೆಕ್ಟರ್ ಆಗಿ ಸೇವೆ ಸಲ್ಲಿಸಿದ್ದ ಲಕ್ಷ್ಮೀನಾರಾಯಣ ಅವರು ಜು.೩೧ಕ್ಕೆ ಸೇವೆಯಿಂದ ನಿವೃತ್ತಿಹೊಂದಿದ್ದು ಅವರಿಗೆ ಪಟ್ಟಣ ಪಂಚಾಯತು ವತಿಯಿಂದ ಗೌರವಾರ್ಪಣೆ ಹಾಗೂ ಬೀಳ್ಕೋಡುಗೆ ಕಾರ್ಯಕ್ರಮ ಜು.೩೧ರಂದು ನಡೆಯಿತು.

ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ಅವರು ನಿವೃತ್ತರಾದ ಲಕ್ಷ್ಮೀನಾರಾಯಣ ಅವರನ್ನು ಪಂಚಾಯತು ವತಿಯಿಂದ ಪೇಟಾ ತೋಡಿಸಿ, ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು. ನಂತರ ಮಾತನಾಡಿ ಲಕ್ಷ್ಮೀನಾರಾಯಣ ಅವರ ಸಾಧನೆ ಹಾಗೂ ಕೆಲಸದಲ್ಲಿ ಪ್ರಾಮಾಣಿಕತೆ, ಸೇವಾ ನಿಷ್ಠತೆಗೆ ಮೆಚ್ಚುಗೆ ವ್ಯಕ್ತಪಡಿಸಿ, ನಿವೃತ್ತ ಜೀವನಕ್ಕೆ ಶುಭ ಕೋರಿದರು. ಹಿರಿಯ ಸದಸ್ಯ ಜಗದೀಶ್ ಡಿ, ಇಂಜಿನಿಯರ್ ಮಹಾವೀರ್ ಮಾನತಾಡಿ ನಿವೃತರ ಸೇವಾ ಕಾರ್ಯಗಳ ಬಗ್ಗೆ ತಿಳಿಸಿ ಶುಭ ಹಾರೈಸಿದರು.

ಮುಖ್ಯಾಧಿಕಾರಿ ರಾಜೇಶ್ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಶರತ್‌ಕುಮಾರ್ ಶೆಟ್ಟಿ, ಉಪಾಧ್ಯಕ್ಷೆ ಗೌರಿ, ಸದಸ್ಯರಾದ ಅಂಬರೀಶ್, ತುಳಸಿ, ಜನಾರ್ದನ್ ಕುಲಾಲ್, ಲೋಕೇಶ್ ನಾಯ್ಕ, ನಾಮನಿರ್ದೇಶನ ಸದಸ್ಯರಾದ ಹೆನ್ರಿಲೋಬೋ, ಸತೀಶ್ ಶೆಟ್ಟಿ, ಅಬ್ದುಲ್ ಬಶೀರ್ ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ಪ್ರಕರಣ ಮತ್ತೆ 9 ಮಂದಿ ಪೊಲೀಸರು SIT ಗೆ ನೇಮಕ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ ಹಾಗೂ ನೂತನ ಕಟ್ಟಡ ಉದ್ಘಾಟನೆ

Suddi Udaya

ಶಿಶಿಲ ಗ್ರಾ.ಪಂ. ಪ್ರಭಾರ ಪಂ.ಅ. ಅಧಿಕಾರಿಯಾಗಿ ದಿನೇಶ್ ಅಧಿಕಾರ ಸ್ವೀಕಾರ

Suddi Udaya

ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ: ಮರದ ಗೆಲ್ಲು ಬಿದ್ದು ಮಹಿಳೆ ಸಾವು

Suddi Udaya

ಗುರುವಾಯನಕೆರೆ ಶಕ್ತಿನಗರದ ಅಕ್ರಮ ಕಸಾಯಿಖಾನೆ ಅಡ್ಡೆ ಮೇಲೆ ಪೊಲೀಸ್ ದಾಳಿ: ಇಬ್ಬರ ಬಂಧನ

Suddi Udaya
error: Content is protected !!