23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಅಳದಂಗಡಿ ಸರಕಾರಿ ಪ.ಪೂ. ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಅಳದಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಗುರುವಾಯನಕೆರೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟಗಳು ಅಳದಂಗಡಿ ವಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವು ಅಳದಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.

ಕಾಲೇಜು ಪ್ರಾಂಶುಪಾಲರಾದ ಸನ್ನಿ ಕೆಎಂ ರವರು ಅಧ್ಯಕ್ಷತೆಯನ್ನು ವಹಿಸಿದ್ದರು.

ಅಳದಂಗಡಿ ವಲಯದ ಜನಜಾಗೃತಿ ವಲಯಾಧ್ಯಕ್ಷ ನಾರಾಯಣ ಸಾಲ್ಯಾನ್ ರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಕ್ಕಳು ಹದಿಹರೆಯದಲ್ಲಿ ಎಡವದಂತೆ ಜಾಗೃತರಾಗುವಂತೆ ಮಕ್ಕಳಿಗೆ ಮನವರಿಕೆ ಮಾಡಿದರು.

ನಾರಾವಿ ಜನಜಾಗೃತಿ ವಲಯಾಧ್ಯಕ್ಷ ನಿತ್ಯಾನಂದ ನಾವರ ರವರು ಮಕ್ಕಳಿಗೆ ಕೆಟ್ಟ ಚಟಗಳಿಗೆ ಬಲಿಯಾಗದಂತೆ ಜಾಗೃತೆ ವಹಿಸುವಂತೆ, ಕೆಟ್ಟ ಹವ್ಯಾಸಗಳಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು.

ಬಡಗಕಾರಂದೂರು ಎ&ಬಿ ಒಕ್ಕೂಟದ ಅಧ್ಯಕ್ಷರಾದ ಹರೀಶ್ ಸಾಲ್ಯಾನ್, ಕೃಷ್ಣಪ್ಪ ಪೂಜಾರಿ, ಭಜನಾ ಮಂಡಳಿ ಕಾರ್ಯದರ್ಶಿ ಮಂಜುನಾಥ್ ಆಚಾರ್ಯ, ವಿಪತ್ತು ಘಟಕದ ಸದಸ್ಯ ಯಶೋಧರ ಸುವರ್ಣ, ಮೇಲ್ವಿಚಾರಕಿ ಯಶೋಧ ಎಂ, ಸೇವಾಪ್ರತಿನಿಧಿಗಳಾದ ಶುಭಲತಾ, ಪೂರ್ಣಿಮಾ, ಕಾಲೇಜು ಉಪನ್ಯಾಸಕರು ಉಪಸ್ಥಿತರಿದ್ದರು.

172 ವಿದ್ಯಾರ್ಥಿಗಳು ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು.

ಮೇಲ್ವಿಚಾರಕಿ ಯಶೋದಾ ಎಂ. ಸ್ವಾಗತಿಸಿ, ಕಾಲೇಜು ಉಪನ್ಯಾಸಕ ಪ್ರಶಾಂತ್ ಶೆಟ್ಟಿ ಧನ್ಯವಾದವಿತ್ತರು. ಒಕ್ಕೂಟದ ನಿಕಟಪೂರ್ವ ಕಾರ್ಯದರ್ಶಿ ಮನೋಹರ್ ನಿರೂಪಿಸಿದರು.

Related posts

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಓಡಿಲ್ನಾಳ ಸ.ಉ.ಪ್ರಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ಗೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾನ್ಯತೆ

Suddi Udaya

ತೋಟತ್ತಾಡಿ : ಯಾಂತ್ರಿಕೃತ ಭತ್ತದ ಬೇಸಾಯ “ಯಂತ್ರಶ್ರೀ” ತರಬೇತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ಪಟ್ಟಣ ಪಂಚಾಯತು ಅಧಿಕಾರಾವಧಿ ನ.7ಕ್ಕೆ ಮುಕ್ತಾಯ: ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷರ ಅಧಿಕಾರಾವಧಿ ಮೊಟಕು

Suddi Udaya

ನಡ ಶಾಲಾ ಶತಮಾನೋತ್ಸವ ಸಮಾರೋಪ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!