23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ: ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸ್ಕಾರ್ಫ್ ಡೇ, ಕಾರ್ಗಿಲ್ ದಿನಾಚರಣೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ

ಧರ್ಮಸ್ಥಳ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಾರ್ಗಿಲ್ ದಿನ ಹಾಗೂ ಸ್ಕಾರ್ಫ್ ಡೇಯನ್ನು ಭಾರತ್ ಸ್ಕೌಟ್ಸ್ ಗೈಡ್ಸ್ ವತಿಯಿಂದ ಆಚರಿಸಲಾಯಿತು.

ಶಾಲೆಯ ಸ್ಕೌಟ್ಸ್-ಗೈಡ್ಸ್ ಕಬ್ಸ್-ಬುಲ್‌ಬುಲ್ ವಿದ್ಯಾರ್ಥಿಗಳು ಮಣ್ಣಿನ ಹಣತೆಯಲ್ಲಿ ದೀಪವನ್ನು ಬೆಳಗಿಸಿ ಅದನ್ನು ಭಾರತದ ನಕ್ಷೆಯ ಸುತ್ತಲೂ ಇರಿಸಿ ಕಾರ್ಗಿಲ್‌ನಲ್ಲಿ ಮಡಿದ ವೀರಯೋಧರಿಗೆ ವಿನೂತನವಾಗಿ ನಮನವನ್ನು ಸಲ್ಲಿಸಿದರು.

ಸ್ಕೌಟ್ ಮಾಸ್ಟರ್ ಆಶಾ ಕಾರ್ಗಿಲ್ ವಿಜಯೋತ್ಸವ ಹಾಗೂ ಸ್ಕಾರ್ಫ್ ಡೇ ಯ ಕುರಿತಾಗಿ ಮಾಹಿತಿಯನ್ನು ನೀಡಿ ವಿದ್ಯಾರ್ಥಿಗಳಲ್ಲಿ ದೇಶಪ್ರೇಮವನ್ನು ಮೂಡಿಸಿದರು.

ಕಾರ್ಯಕ್ರಮದಲ್ಲಿ ಸ್ಥಳೀಯ ೯ ಮಂದಿ ಆಶಾ ಕಾರ್ಯಕರ್ತೆಯರನ್ನು ಗುರುತಿಸಿ ಅವರ ನಿಸ್ವಾರ್ಥ ಸೇವೆಗಾಗಿ ಸ್ಕಾರ್ಫ್ ತೊಡಿಸಿ ಅಭಿನಂದನಾ ಪತ್ರವನ್ನು ನೀಡಿ ಗೌರವಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಆಶಾ ಕಾರ್ಯಕರ್ತೆಯರಾದ ಶ್ರೀಮತಿ ಸರಸ್ವತಿ ಮತ್ತು ಶ್ರೀಮತಿ ಸುಜಾತಾ ಅವರ ಕಾರ್ಯ ಗಮನಿಸಿ ಅವರನ್ನು ಅಭಿನಂದಿಸಿದ್ದಕ್ಕಾಗಿ ಶಾಲೆಗೆ ಧನ್ಯವಾದ ಸಲ್ಲಿಸಿದರು.

ಕಬ್ ಮಾಸ್ಟರ್ ಹೇಮಾವತಿ ಜೈನ್ ಆಶಾ ಕಾರ್ಯಕರ್ತೆಯರ ಕಿರುಪರಿಚಯ ಮಾಡಿದರು. ಶಾಲಾ ಮುಖ್ಯಶಿಕ್ಷಕಿ ಪರಿಮಳ ಎಂ.ವಿ. ಪ್ರಾಸ್ತಾವಿಕವಾಗಿ ಮಾತನಾಡಿ ಆಶಾ ಕಾರ್ಯಕರ್ತೆಯರ ಕೆಲಸ ಹಾಗೂ ಸಮಾಜಮುಖಿ ಕೆಲಸಗಳನ್ನು ವಿವರಿಸಿದರು. ಸ್ಕೌಟ್ಸ್ ಮಾಸ್ಟರ್ ಆಶಾ ನಿರೂಪಿಸಿ, ಗೈಡ್ ಕ್ಯಾಪ್ಟನ್ ಗೀತಾ ವಂದಿಸಿದರು. ಸ್ಕೌಟ್ಸ್ ಮಾಸ್ಟರ್ ಶಶಿಕಲಾ, ಶ್ರೀಮತಿ ಜ್ಯೋತಿ, ಗೈಡ್ ಕ್ಯಾಪ್ಟನ್ ದೀಕ್ಷ ಶೀಭಾ, ಪ್ಲಾಕ್ ಲೀಡರ್ ಸೌಮ್ಯ, ಕಬ್ ಮಾಸ್ಟರ್ ಅಮೃತ ವಿ ಶೆಟ್ಟಿ ಸಹಕರಿಸಿ ದರು.

Related posts

ಫೆ.8: ಬೆನಕ ಆಸ್ಪತ್ರೆಯಿಂದ ಪಡಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಯೇಸುರಾಜ್ ನೇಮಕ

Suddi Udaya

‘ಭರತನಾಟ್ಯಂ’ ಜೂನಿಯರ್ ಗ್ರೇಡ್ ಪರೀಕ್ಷೆ : ಪುತ್ತೂರು ಮೂಕಾಂಬಿಕ ಕಲ್ಚರಲ್ ಅಕಾಡೆಮಿಯ ವಿದ್ಯಾರ್ಥಿ ಧೃತಿ ಎಂ. ಪಟ್ಟೂರು ಡಿಸ್ಟಿಂಕ್ಷನ್

Suddi Udaya

ಬದಿಯಡ್ಕದಲ್ಲಿ ಕಾರು ಅಪಘಾತ: ಬೆಳ್ತಂಗಡಿಯ ಇಬ್ಬರು ಪ್ರಾಣಾಪಾಯದಿಂದ ಪಾರು

Suddi Udaya

ಗುರುವಾಯನಕೆರೆ: ಎಕ್ಸೆಲ್ ನಲ್ಲಿ ಪ್ರತಿಭಾವಂತರಿಗೆ ಉಚಿತ ನೀಟ್ ಲಾಂಗ್ ಟರ್ಮ್ ಕೋಚಿಂಗ್

Suddi Udaya

ಬೆಳ್ತಂಗಡಿ: ದೀಪಾವಳಿ ಹಬ್ಬದ ಪ್ರಯುಕ್ತ ಆಧಿನಾಥ್ ಬಜಾಜ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್

Suddi Udaya
error: Content is protected !!