July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಓಬಿಸಿ ಮೋರ್ಚಾದ ಸಭೆ

ಬೆಳ್ತಂಗಡಿ: ಓಬಿಸಿ ಮೋರ್ಚಾದ ಸಭೆ ತಾಲೂಕು ಓಬಿಸಿ ಮೋರ್ಚಾದ ಅಧ್ಯಕ್ಷ ರತ್ನಾಕರ ಬುಣ್ಣನ್ ಅಧ್ಯಕ್ಷತೆಯಲ್ಲಿ ಆ.೧ರಂದು ನಡೆಯಿತು.

ಓಬಿಸಿ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬೆಳ್ತಂಗಡಿ ಓಬಿಸಿ ಮೋರ್ಚಾದ ವೀಕ್ಷಕ ಮೋನಪ್ಪ ದೇವಸ್ಯ ಓಬಿಸಿ ಮೋರ್ಚಾದ ಕಾರ್ಯ ಚಟುವಟಿಕೆ ಬಗ್ಗೆ ಹಾಗೂ ಓಬಿಸಿ ಮೋರ್ಚಾದ ಸಂಘಟನೆಯ ಬಗ್ಗೆ ಮಾಹಿತಿ ನೀಡಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಶಿಧರ್ ಕಲ್ಮಂಜ ತಾಲೂಕು ಓಬಿಸಿ ಮೋರ್ಚಾದ ಪದಾಧಿಕಾರಿಗಳ ಸಭೆಗಳ ಬಗ್ಗೆ ಮಾಹಿತಿ ನೀಡಿದರು.

ತಾಲೂಕು ಒಬಿಸಿ ಮೋರ್ಚಾದ ಪ್ರಭಾರಿ ಚಂದ್ರಶೇಖರ್ ಪೆನ್ನೆ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಶಕ್ತಿಕೇಂದ್ರಗಳಿಂದ ಒಬ್ಬೊಬ್ಬರನ್ನು ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರನ್ನು ಓಬಿಸಿ ಮೋರ್ಚಾಕ್ಕೆ ಸಂಘಟನೆಯ ದೃಷ್ಟಿಯಿಂದ ಸೇರಿಸಿಕೊಳ್ಳುವಂತೆ ಮಾಹಿತಿ ನೀಡಿದರು.

ಮಂಡಲದ ಪ್ರಭಾರಿಗಳಾದ ಶ್ರೀಮತಿ ಅಶ್ವಿನಿ ನಾಯಕ್ ಸಂಘಟನೆ ದೃಷ್ಟಿಯಿಂದ ಮುಂದಿನ ಯೋಜನೆಯ ಬಗ್ಗೆ ಮಾಹಿತಿ ನೀಡಿದರು.

ಸಭೆಯಲ್ಲಿ ತಾಲೂಕು ಓಬಿಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸುಧೀರ್ ಭಂಡಾರಿ ವೇಣೂರು, ವಿಠಲ ಆಚಾರ್ಯ ಗುರುವಾಯನಕೆರೆ ಹಾಗೂ ಓಬಿಸಿ ಮೋರ್ಚಾದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು

ಪ್ರಧಾನ ಕಾರ್ಯದರ್ಶಿ ಸುಧೀರ್ ಭಂಡಾರಿ ಸ್ವಾಗತಿಸಿ, ಉಪಾಧ್ಯಕ್ಷ ರಾಜೇಶ್ ಮೂಡುಕೋಡಿ ವಂದಿಸಿದರು.

Related posts

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಶ್ವಥಕಟ್ಟೆ ನಿರ್ಮಾಣದ ಶಿಲಾನ್ಯಾಸ

Suddi Udaya

ಅಕ್ರಮ-ಸಕ್ರಮ ಹಾಗೂ 94ಸಿ ಅರ್ಜಿಗಳನ್ನು ತ್ವರಿತ ವಿಲೇವಾರಿ ಮಾಡಿ ಅರ್ಹರಿಗೆ ಹಕ್ಕುಪತ್ರ ನೀಡಿ : ಎಸ್‌ಡಿಪಿಐ ಆಗ್ರಹ”

Suddi Udaya

ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಗೆ ಸತತ 11 ನೇ ಬಾರಿಗೆ ಶೇ. 100 ಫಲಿತಾಂಶ

Suddi Udaya

ಪುಂಜಾಲಕಟ್ಟೆ: ಪಿಲಾತಬೆಟ್ಟು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಜಿ.ಪಂ. ಮಾಜಿ ಉಪಾಧ್ಯಕ್ಷ ಎಂ ತುಂಗಪ್ಪ ಬಂಗೇರ ಆಯ್ಕೆ

Suddi Udaya

ನಿಡ್ಲೆ ಹಾಗೂ ಪಟ್ರಮೆಯಲ್ಲಿ ಕಾಡಾನೆ ಪ್ರತ್ಯಕ್ಷ

Suddi Udaya

ಉಜಿರೆ: ಮುಂಡತ್ತೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya
error: Content is protected !!