March 7, 2026
ಅಪರಾಧ ಸುದ್ದಿ

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ ಪತ್ತೆ, ಮೂರು ಆರೋಪಿಗಳ ಸೆರೆ

ಬೆಳ್ತಂಗಡಿ: ಮಂಗಳೂರು ನಗರ ಸಿಸಿಬಿ ತಂಡವು ಮಾದಕ ವಸ್ತುಗಳ ಅಕ್ರಮ ಸಾಗಣೆ ವಿರುದ್ಧ ಕೈಗೊಂಡಿರುವ ಭಾಗವಾಗಿ ಇಂದು ದೊಡ್ಡ ಪ್ರಮಾಣದ 123 ಕೆಜಿ ಗಾಂಜಾ ಮತ್ತು ಅದನ್ನು ಸಾಗಾಟ ಮಾಡುತ್ತಿದ್ದ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಮೂರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರು ಆಂಧ್ರಪ್ರದೇಶದಿಂದ ಗಾಂಜಾ ಸಾಗಾಟ ಮಾಡುತ್ತಿದ್ದರು. ಸಿಸಿಬಿ ಪೊಲೀಸರು ಜು.31 ರಂದು 2 ಕಾರುಗಳಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದು, ಮೂಡಬಿದಿರೆ ತಾಲ್ಲೂಕಿನ ಬೆಳುವಾಯಿ ಗ್ರಾಮದ ಕಾಂತಾವರ ಕ್ರಾಸ್ ನ ಮಠದಕೆರೆ ಎಂಬ ಸ್ಥಳದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಗಾಂಜಾ ಸಮೇತ 2 ವಾಹನಗಳನ್ನು ಪತ್ತೆಹಚ್ಚಿರುತ್ತಾರೆ.

ಬಂಧಿತ ಆರೋಪಿಗಳ ವಿವರ:ಮಸೂದ್ ಎಂಕೆ (45 ವ )ಮೊಗರು ಹೌಸ್, ಆಡೂರು, ಉರ್ದೂರು ಕಾಸರಗೋಡು ತಾಲೂಕು ಕೇರಳ, ಮೊಹಮ್ಮದ್ ಆಶಿಕ್ (24 ವ) ಚೆಂದಮೂಲ ಹೌಸ್, ಪರಪ್ಪ ದೇಲಂಪಾಡಿ ಪರಪ್ಪ ಪೋಸ್ಟ್, ಕಾಸರಗೋಡು ಕೇರಳ ರಾಜ್ಯ, ಸುಬೇರ್ ( 30 ವರ್ಷ) ಪರಪ್ಪ ದೇಲಂಪಾಡಿ ಪರಪ್ಪ ಕಾಸರಗೋಡು ಕೇರಳ ಬಂಧಿತರು. ಪೊಲೀಸರು ಆರೋಪಿಗಳಿಂದ 123 ಕೆಜಿ ಗಾಂಜಾ, ಎರಡು ವಾಹನಗಳು (KA-21-P-9084 ಹಾಗೂ KL-14-AF-7010) ಮತ್ತು 5 ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿದ್ದು, ಈ ಎಲ್ಲಾ ಸೊತ್ತಿನ ಒಟ್ಟು ಮೌಲ್ಯ ಸುಮಾರು 46, 20,000 ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಮಂಗಳೂರು ನಗರ ಪೊಲೀಸರಿಂದ ನಿರಂತರವಾಗಿ ಮಾದಕ ವಸ್ತುಗಳ ವಿರುದ್ಧದ ಕಾರ್ಯಾಚರಣೆಯು ಮುಂದುವರೆದಿರುತ್ತದೆ, ಈ ಬೃಹತ್ ಗಾಂಜಾ ಮಾರಾಟ/ಸಾಗಾಟ ಜಾಲದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

Related posts

ಮುಡುಕೋಡಿ: ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ವಂಚನೆ ಆರೋಪ: 7 ಮಂದಿ ವಿರುದ್ದ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನಿವೃತ್ತ ಯೋಧ ದಿನೇಶ್ ಮೂಲ್ಯಹೃದಯಾಘಾತದಿಂದ ನಿಧನ

Suddi Udaya

ಯೂಟ್ಯೂಬ್ ನಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಸಂಬಂಧ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ಮಹೇಶ್ ಶೆಟ್ಟಿ ತಿಮರೋಡಿ ಯವರನ್ನು ಬಂಧಿಸಿದ ಬ್ರಹ್ಮಾವರ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಜಾಮೀನು ಅರ್ಜಿ ವಜಾಗೊಳಿಸಿ ನ್ಯಾಯಾಂಗ ಬಂಧನ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಅವಮಾನಕಾರಿ‌ ಸಂದೇಶಗಳ ಪೋಸ್ಟ್ : ಬೆಳ್ತಂಗಡಿ ಹಾಗೂ ವೇಣೂರು ಠಾಣೆಯಲ್ಲಿ 6 ಪ್ರಕರಣ ದಾಖಲು

Suddi Udaya

ಬೆಳಾಲು: ನೇತ್ರಾವತಿ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಪ್ರಸಾದ್ ಮೃತದೇಹ ಪತ್ತೆ

Suddi Udaya

ಪುದುವೆಟ್ಟು: ಮಿಯಾರು ನಿವಾಸಿ ಶೇಖರ್ ಗೌಡ ವಿಷ ಸೇವಿಸಿ ಆತ್ಮಹತ್ಯೆ

Suddi Udaya
error: Content is protected !!