22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡಾಜೆ: ವಿಶ್ವ ಸ್ಕಾರ್ಫ್ ದಿನಾಚರಣೆ

ಮುಂಡಾಜೆ: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧೀನಕ್ಕೊಳಪಟ್ಟ ಮುಂಡಾಜೆ ಪದವಿಪೂರ್ವ ಕಾಲೇಜು ಮುಂಡಾಜೆ ಹಾಗೂ ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿನ ಕಬ್ಸ್-ಬುಲ್ ಬುಲ್, ಸೌಟ್ಸ್-ಗೈಡ್ಸ್, ರೋವರ್ಸ್ ಮತ್ತು ರೇಂಜರ್ಸ್ ವಿಭಾಗಗಳ ಸಹಯೋಗದಲ್ಲಿ ವಿಶ್ವ ಸ್ಕಾರ್ಫ್ ದಿನಾಚರಣೆಯನ್ನು ಆಚರಿಸಲಾಯಿತು.

ರೋವರ್ ಸ್ಕೌಟ್ ಲೀಡರ್ ಕೃಷ್ಣ ಕಿರಣ್ ಕೆ. ಸ್ಕಾರ್ಫ್‌ನ ಮಹತ್ವ, ಉಪಯೋಗಳು ಹಾಗೂ ವಿಶ್ವ ಸ್ಕಾರ್ಫ್ ದಿನಾಚರಣೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು.

ರೇಂಜರ್ ಲೀಡರ್ ವಸಂತಿ ಅತಿಥಿಗಳಿಗೆ ಸ್ಕಾರ್ಫ್‌ನ್ನು ತೊಡಿಸುವ ಮೂಲಕ ವಿನೂತನ ರೀತಿಯಲ್ಲಿ ಕಾರ್ಯಕ್ರಮವನ್ನು ಆಚರಿಸಲಾಯಿತು ಹಾಗೂ ರೋವರ್ಸ್ ರೇಂಜರ್ಸ್ ವಿಭಾಗದ ನೂತನ ಸ್ಕಾರ್ಫ್‌ನ್ನು ಬಿಡುಗಡೆಗೊಳಿಸಲಾಯಿತು.

ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಚಂದ್ರಮತಿ ಅಧ್ಯಕ್ಷತೆಯನ್ನು ವಹಿಸಿದ್ದರು. ಸರಸ್ವತಿ ಪ್ರಾಥಮಿಕ ಶಾಲೆಯ ಹಿರಿಯ ಶಿಕ್ಷಕಿ ಶ್ರೀಜಾ ಉಪಸ್ಥಿತರಿದ್ದರು.

ರೇಂಜರ್ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಆರಂಭವಾದ ರೇಂಜರ್ ವಿದ್ಯಾರ್ಥಿಗಳಾದ ಮೋಕ್ಷಿತಾ ಕಾರ್ಯಕ್ರಮ ನಿರೂಪಿಸಿ, ಹೊಂಗಿರಣ ಸ್ವಾಗತಿಸಿ, ಜಲಜಾಕ್ಷಿ ಧನ್ಯವಾದಗೈದರು. ಗೈಡ್ ಕ್ಯಾಪ್ಟನ್ ರೇವತಿ, ಕಬ್ ಮಾಸ್ಟರ್ ಪ್ರೇಮಾ, ಫ್ಲಾಕ್ ಲೀಡರ್ ಭಾರತಿ ಸಹಕರಿಸಿದರು.

Related posts

ಉಜಿರೆ : ಅಕ್ರಮ ಮದ್ಯ ಮಾರಾಟ: ವಾಹನ ಸಹಿತ ರೂ. 1.53 ಲಕ್ಷದ ಮದ್ಯ ವಶ

Suddi Udaya

ಉಜಿರೆ ಎಸ್ ಡಿ ಎಂ ಮಹಿಳಾ ಐ.ಟಿ.ಐ. ನಲ್ಲಿ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮ

Suddi Udaya

ಕೊಯ್ಯೂರು ಸರಕಾರಿ ಪದವಿ ಪೂರ್ವ ಕಾಲೇಜು-ತರಗತಿ ಕೊಠಡಿಗಳ ಕಾಮಗಾರಿಗೆ ಶಿಲಾನ್ಯಾಸ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಾರ್ಷಿಕ ಮಹೋತ್ಸವ ಪ್ರಾರಂಭ

Suddi Udaya

ಸಿಯೋನ್ ಆಶ್ರಮದಿಂದ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ಎ 8-17: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ: ಕ್ಷೇತ್ರಕ್ಕೆ ಶ್ರೀಧಾಮ ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ ಭೇಟಿ

Suddi Udaya
error: Content is protected !!