23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಅಳದಂಗಡಿ ಸರಕಾರಿ ಪ.ಪೂ. ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಅಳದಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಗುರುವಾಯನಕೆರೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟಗಳು ಅಳದಂಗಡಿ ವಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವು ಅಳದಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.

ಕಾಲೇಜು ಪ್ರಾಂಶುಪಾಲರಾದ ಸನ್ನಿ ಕೆಎಂ ರವರು ಅಧ್ಯಕ್ಷತೆಯನ್ನು ವಹಿಸಿದ್ದರು.

ಅಳದಂಗಡಿ ವಲಯದ ಜನಜಾಗೃತಿ ವಲಯಾಧ್ಯಕ್ಷ ನಾರಾಯಣ ಸಾಲ್ಯಾನ್ ರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಕ್ಕಳು ಹದಿಹರೆಯದಲ್ಲಿ ಎಡವದಂತೆ ಜಾಗೃತರಾಗುವಂತೆ ಮಕ್ಕಳಿಗೆ ಮನವರಿಕೆ ಮಾಡಿದರು.

ನಾರಾವಿ ಜನಜಾಗೃತಿ ವಲಯಾಧ್ಯಕ್ಷ ನಿತ್ಯಾನಂದ ನಾವರ ರವರು ಮಕ್ಕಳಿಗೆ ಕೆಟ್ಟ ಚಟಗಳಿಗೆ ಬಲಿಯಾಗದಂತೆ ಜಾಗೃತೆ ವಹಿಸುವಂತೆ, ಕೆಟ್ಟ ಹವ್ಯಾಸಗಳಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು.

ಬಡಗಕಾರಂದೂರು ಎ&ಬಿ ಒಕ್ಕೂಟದ ಅಧ್ಯಕ್ಷರಾದ ಹರೀಶ್ ಸಾಲ್ಯಾನ್, ಕೃಷ್ಣಪ್ಪ ಪೂಜಾರಿ, ಭಜನಾ ಮಂಡಳಿ ಕಾರ್ಯದರ್ಶಿ ಮಂಜುನಾಥ್ ಆಚಾರ್ಯ, ವಿಪತ್ತು ಘಟಕದ ಸದಸ್ಯ ಯಶೋಧರ ಸುವರ್ಣ, ಮೇಲ್ವಿಚಾರಕಿ ಯಶೋಧ ಎಂ, ಸೇವಾಪ್ರತಿನಿಧಿಗಳಾದ ಶುಭಲತಾ, ಪೂರ್ಣಿಮಾ, ಕಾಲೇಜು ಉಪನ್ಯಾಸಕರು ಉಪಸ್ಥಿತರಿದ್ದರು.

172 ವಿದ್ಯಾರ್ಥಿಗಳು ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು.

ಮೇಲ್ವಿಚಾರಕಿ ಯಶೋದಾ ಎಂ. ಸ್ವಾಗತಿಸಿ, ಕಾಲೇಜು ಉಪನ್ಯಾಸಕ ಪ್ರಶಾಂತ್ ಶೆಟ್ಟಿ ಧನ್ಯವಾದವಿತ್ತರು. ಒಕ್ಕೂಟದ ನಿಕಟಪೂರ್ವ ಕಾರ್ಯದರ್ಶಿ ಮನೋಹರ್ ನಿರೂಪಿಸಿದರು.

Related posts

ಭಾರತೀಯ ಸೇನೆಗೆ ಶಕ್ತಿ ತುಂಬಲು ಪ್ರಾರ್ಥನೆ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ: 13ನೇ ವರ್ಷದ ಪಾದಯಾತ್ರೆಗೆ ಚಾಲನೆ: ಬೃಹತ್ ಸಂಖ್ಯೆಯಲ್ಲಿ ಭಕ್ತರು ಭಾಗಿ : ಭಜನಾ ತಂಡಗಳಿಂದ ವಿಶೇಷ ಕುಣಿತ ಭಜನೆ

Suddi Udaya

ಕಳೆoಜ: ನಾಟಿ ವೈದ್ಯೆ ಕಮಲ ನಿಧನ

Suddi Udaya

ಫೆ.12-16: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಎಕ್ಸೆಲ್ ಪ.ಪೂ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ಪ್ರಪ್ರಥಮ ಇಂಟಗ್ರೇಟೆಡ್ ಪದವಿಪೂರ್ವ ಶಿಕ್ಷಣ

Suddi Udaya

ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆ ಶಾಂತಿವನದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!