22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಡ ಸ. ಪ.ಪೂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ನಡ: ಮನುಷ್ಯರಾದ ಮೇಲೆ ಎಲ್ಲವನ್ನೂ ಸಾಧಿಸುವ ಸಾಮರ್ಥ್ಯ, ಧೈರ್ಯ ಇರಬೇಕು. ಗಡಿಯಲ್ಲಿ ಚಳಿ, ಮಳೆಯನ್ನು ಲೆಕ್ಕಿಸದೆ ದೇಶ ಕಾಯುವ ಯೋಧರಿಂದಾಗಿ ನಾವು ನೆಮ್ಮದಿಯ ನಿದ್ರೆ ಮಾಡುತ್ತೇವೆ, ಸೈನಿಕರಾಗಿ ಸೇರಿ ದೇಶಸೇವೆ ಮಾಡಲು ಎಲ್ಲರೂ ಮನಸು ಮಾಡಬೇಕೆಂದು ಮಾಜಿ ವೀರ ಯೋಧ ವಿಕ್ಟರ್ ಕ್ರಾಸ್ಟಾ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಅವರು ನಡ ಸ. ಪ. ಪೂ. ಕಾಲೇಜಿನ ಕಲ್ಪನಾ ಚಾವ್ಲಾ ರೇಂಜರ್ಸ್ ಘಟಕದ ವತಿಯಿಂದ ನಡೆಸಿದ ಕಾರ್ಗಿಲ್ ವಿಜಯ ದಿನ-೨೬ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಹಿರಿಯ ಉಪನ್ಯಾಸಕಿ ಲಿಲ್ಲಿ ಪಿ.ವಿ. ಉಪಸ್ಥಿತರಿದ್ದರು.

ರೇಂಜರ್ ಶಶಿಕಲಾ ಗ್ರೆನೇಡಿಯರ್ ಯೋಗೇಂದ್ರ ಸಿಂಗ್ ಯಾದವ್ ಅವರ ಧೀರೋದಾತ್ತ ವ್ಯಕ್ತಿತ್ವವನ್ನು ವಿವರಿಸಿದರು. ರೇಂಜರ್ ಸುರಕ್ಷಿತಾ ಅತಿಥಿಗಳನ್ನು ಪರಿಚಯಿಸಿದರು. ರೇಂಜರ್ ಲೀಡರ್ ವಸಂತಿ ಪಿ. ಪ್ರಾಸ್ತಾವಿಸಿದರು. ರೇಂಜರ್ ಸುದಿಶಾ ಸ್ವಾಗತಿಸಿ, ರೇಂಜರ್ ಸಿಂಚನಾ ಕಾರ್ಯಕ್ರಮ ನಿರೂಪಿಸಿ, ರೇಂಜರ್ ಗಾಯತ್ರಿ ವಂದಿಸಿದರು.

Related posts

ನೆರಿಯ: ತಿಮ್ಮಯ್ಯ ಗೌಡ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್‌ ಮೋಟಾರು ರಿವೈಂಡಿಂಗ್‌ ಮತ್ತು ಪಂಪ್‌ ಸೆಟ್‌ ರಿಪೇರಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಮತ್ತು ಲಯನ್ ಸೇವಾ ಟ್ರಸ್ಟ್ ವತಿಯಿಂದ ವಿವಿಧ ಸಂಸ್ಥೆಗಳಿಗೆ ರೂ. 1ಲಕ್ಷ ಸಹಾಯಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಮೈರೋಳ್ತಡ್ಕ: ಗುಂಡಿ ಬಿದ್ದ ರಸ್ತೆಗೆ ಪಂಚಾಯತ್ ವತಿಯಿಂದ ಸುಗಮ ಸಂಚಾರಕ್ಕೆ ವ್ಯವಸ್ಥೆ

Suddi Udaya

ಕೊಕ್ಕಡ : ಮಾಯಿಲಕೋಟೆ ಸೀಮೆ ದೈವಗಳ ಪ್ರಥಮ ವಾರ್ಷಿಕ ನೇಮೋತ್ಸವ

Suddi Udaya
error: Content is protected !!