22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಡ ಸ. ಪ.ಪೂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ನಡ: ಮನುಷ್ಯರಾದ ಮೇಲೆ ಎಲ್ಲವನ್ನೂ ಸಾಧಿಸುವ ಸಾಮರ್ಥ್ಯ, ಧೈರ್ಯ ಇರಬೇಕು. ಗಡಿಯಲ್ಲಿ ಚಳಿ, ಮಳೆಯನ್ನು ಲೆಕ್ಕಿಸದೆ ದೇಶ ಕಾಯುವ ಯೋಧರಿಂದಾಗಿ ನಾವು ನೆಮ್ಮದಿಯ ನಿದ್ರೆ ಮಾಡುತ್ತೇವೆ, ಸೈನಿಕರಾಗಿ ಸೇರಿ ದೇಶಸೇವೆ ಮಾಡಲು ಎಲ್ಲರೂ ಮನಸು ಮಾಡಬೇಕೆಂದು ಮಾಜಿ ವೀರ ಯೋಧ ವಿಕ್ಟರ್ ಕ್ರಾಸ್ಟಾ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಅವರು ನಡ ಸ. ಪ. ಪೂ. ಕಾಲೇಜಿನ ಕಲ್ಪನಾ ಚಾವ್ಲಾ ರೇಂಜರ್ಸ್ ಘಟಕದ ವತಿಯಿಂದ ನಡೆಸಿದ ಕಾರ್ಗಿಲ್ ವಿಜಯ ದಿನ-೨೬ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಹಿರಿಯ ಉಪನ್ಯಾಸಕಿ ಲಿಲ್ಲಿ ಪಿ.ವಿ. ಉಪಸ್ಥಿತರಿದ್ದರು.

ರೇಂಜರ್ ಶಶಿಕಲಾ ಗ್ರೆನೇಡಿಯರ್ ಯೋಗೇಂದ್ರ ಸಿಂಗ್ ಯಾದವ್ ಅವರ ಧೀರೋದಾತ್ತ ವ್ಯಕ್ತಿತ್ವವನ್ನು ವಿವರಿಸಿದರು. ರೇಂಜರ್ ಸುರಕ್ಷಿತಾ ಅತಿಥಿಗಳನ್ನು ಪರಿಚಯಿಸಿದರು. ರೇಂಜರ್ ಲೀಡರ್ ವಸಂತಿ ಪಿ. ಪ್ರಾಸ್ತಾವಿಸಿದರು. ರೇಂಜರ್ ಸುದಿಶಾ ಸ್ವಾಗತಿಸಿ, ರೇಂಜರ್ ಸಿಂಚನಾ ಕಾರ್ಯಕ್ರಮ ನಿರೂಪಿಸಿ, ರೇಂಜರ್ ಗಾಯತ್ರಿ ವಂದಿಸಿದರು.

Related posts

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ದ.ಕ ಜಿಲ್ಲಾ ಅಧಿಕಾರಿ ಜಿನೇಂದ್ರ ಕೋಟ್ಯಾನ್ ಬೆಳ್ತಂಗಡಿ ತಾಲೂಕಿನ ವಿವಿಧ ಬಸದಿಗಳಿಗೆ ಭೇಟಿ

Suddi Udaya

ಅಳದಂಗಡಿ: 22ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ: ಧಾರ್ಮಿಕ ಕಾರ್ಯಕ್ರಮ

Suddi Udaya

ಕುತ್ಲೂರು ಪ್ರಕರಣ ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಚಾರ್ಮಾಡಿ ಪರಿಸರದಲ್ಲಿ ಕಾಡಾನೆಗಳ ಹಾವಳಿ : ಕೃಷಿ ಹಾನಿ

Suddi Udaya

ವೇಣೂರು: ಮೂಡಕೋಡಿಯಲ್ಲಿ ಬಿಜೆಪಿ ಬೂತ್ ಮಟ್ಟದ ಸಭೆ

Suddi Udaya

ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ನೂತನ ಪ್ರವೇಶ ದ್ವಾರದ ಉದ್ಘಾಟನೆ ಹಾಗೂ ದ್ವಜಸ್ತಂಭದ ಲೋಕಾರ್ಪಣೆ

Suddi Udaya
error: Content is protected !!