September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಡ ಸ. ಪ.ಪೂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ನಡ: ಮನುಷ್ಯರಾದ ಮೇಲೆ ಎಲ್ಲವನ್ನೂ ಸಾಧಿಸುವ ಸಾಮರ್ಥ್ಯ, ಧೈರ್ಯ ಇರಬೇಕು. ಗಡಿಯಲ್ಲಿ ಚಳಿ, ಮಳೆಯನ್ನು ಲೆಕ್ಕಿಸದೆ ದೇಶ ಕಾಯುವ ಯೋಧರಿಂದಾಗಿ ನಾವು ನೆಮ್ಮದಿಯ ನಿದ್ರೆ ಮಾಡುತ್ತೇವೆ, ಸೈನಿಕರಾಗಿ ಸೇರಿ ದೇಶಸೇವೆ ಮಾಡಲು ಎಲ್ಲರೂ ಮನಸು ಮಾಡಬೇಕೆಂದು ಮಾಜಿ ವೀರ ಯೋಧ ವಿಕ್ಟರ್ ಕ್ರಾಸ್ಟಾ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಅವರು ನಡ ಸ. ಪ. ಪೂ. ಕಾಲೇಜಿನ ಕಲ್ಪನಾ ಚಾವ್ಲಾ ರೇಂಜರ್ಸ್ ಘಟಕದ ವತಿಯಿಂದ ನಡೆಸಿದ ಕಾರ್ಗಿಲ್ ವಿಜಯ ದಿನ-೨೬ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಹಿರಿಯ ಉಪನ್ಯಾಸಕಿ ಲಿಲ್ಲಿ ಪಿ.ವಿ. ಉಪಸ್ಥಿತರಿದ್ದರು.

ರೇಂಜರ್ ಶಶಿಕಲಾ ಗ್ರೆನೇಡಿಯರ್ ಯೋಗೇಂದ್ರ ಸಿಂಗ್ ಯಾದವ್ ಅವರ ಧೀರೋದಾತ್ತ ವ್ಯಕ್ತಿತ್ವವನ್ನು ವಿವರಿಸಿದರು. ರೇಂಜರ್ ಸುರಕ್ಷಿತಾ ಅತಿಥಿಗಳನ್ನು ಪರಿಚಯಿಸಿದರು. ರೇಂಜರ್ ಲೀಡರ್ ವಸಂತಿ ಪಿ. ಪ್ರಾಸ್ತಾವಿಸಿದರು. ರೇಂಜರ್ ಸುದಿಶಾ ಸ್ವಾಗತಿಸಿ, ರೇಂಜರ್ ಸಿಂಚನಾ ಕಾರ್ಯಕ್ರಮ ನಿರೂಪಿಸಿ, ರೇಂಜರ್ ಗಾಯತ್ರಿ ವಂದಿಸಿದರು.

Related posts

ಓಡಿಲ್ನಾಳ ಸ ಉ. ಪ್ರಾ ಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Suddi Udaya

ರೂ. 6 ಕೋಟಿ ವೆಚ್ಚದಲ್ಲಿ ಗುರುವಾಯನಕೆರೆ- ಉಪ್ಪಿನಂಗಡಿ ರಸ್ತೆ ಮರು ಡಾಮರೀಕರಣ ಕಾಮಗಾರಿ: ಶಾಸಕ ಹರೀಶ್‌ ಪೂಂಜ ಉಪಸ್ಥಿತಿಯಲ್ಲಿ ಸಂಸದ ಕ್ಯಾ| ಬ್ರಿಜೇಶ್ ಚೌಟರಿಂದ ಶಿಲಾನ್ಯಾಸ

Suddi Udaya

ಮುಂಡಾಜೆ ಜಮೀನಿನಲ್ಲಿ ಬೆಂಕಿ- ಆರಿಸಲು ನೆರವಾದ ರಾ.ಹೆ.ಕಾಮಗಾರಿಯ ನೀರಿನ ಟ್ಯಾಂಕರ್

Suddi Udaya

ಅಳದಂಗಡಿ: ರಕ್ಷಿತ್ ಶಿವರಾಂರವರ ಗೆಲುವಿಗಾಗಿ ಹಾನಿಂಜ ಮೂಲಮಹಮ್ಮಾಯಿ ಕ್ಷೇತ್ರ ಹಾಗೂ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಕಾಂಗ್ರೆಸ್ಸಿಗರಿಂದ ಪ್ರಾರ್ಥನೆ

Suddi Udaya

ಕಾಪಿನಡ್ಕ: ರಸ್ತೆ ಅಪಘಾತದಲ್ಲಿ ದೊಡ್ಡ ದುರಂತವನ್ನು ತಪ್ಪಿಸಿದ ಟಿಪ್ಪರ್ ಚಾಲಕ,

Suddi Udaya

ಮಾದಕ ದ್ರವ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ “ಒಂದು ಹೆಜ್ಜೆ” ಕನ್ನಡ ಚಲನಚಿತ್ರ ಪೋಸ್ಟರ್ ಬಿಡುಗಡೆ

Suddi Udaya
error: Content is protected !!