September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ಬೆಳ್ತಂಗಡಿ: ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸ್ಕೌಟ್ ಗೈಡ್ ವಿಶ್ವ ಸ್ಕಾರ್ಪ್ ದಿನಾಚರಣೆ ಹಾಗೂ ಸನ್ ರೈಸ್ ದಿನಾಚರಣೆ

ಬೆಳ್ತಂಗಡಿ: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ ಗೈಡ್ ವಿಶ್ವ ಸ್ಕಾರ್ಪ್ ದಿನಾಚರಣೆ ಹಾಗೂ ಸನ್ ರೈಸ್ ದಿನಾಚರಣೆಯನ್ನು ಆಚರಿಸಲಾಯಿತು.

ಮುಖ್ಯ ಅತಿಥಿ ಜಿಲ್ಲಾ ಸಹಾಯಕ ಆಯುಕ್ತ ಬಿ ಸೋಮಶೇಖರ್ ಶೆಟ್ಟಿ ಸ್ಕೌಟ್ ಗೈಡ್ ಸ್ಕಾರ್ಫ್ ತೊಡಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ, ಸ್ಕೌಟ್ ಗೈಡ್ ಸಮಾಜದಲ್ಲಿ ಮಕ್ಕಳ ಬೆಳವಣಿಗೆಗೆ ಸಹಕಾರಿಯಾಗಿದೆ ಶಿಸ್ತು, ಜವಾಬ್ದಾರಿಯುತ ಕಾರ್ಯ, ನಾಯಕತ್ವ ಗುಣ ಮಕ್ಕಳಲ್ಲಿ ಬೆಳೆಯಬೇಕು ಸಮಾಜದಲ್ಲಿ ವಿದ್ಯಾರ್ಥಿಗಳು ಯಾವ ರೀತಿ ಬಾಳಬೇಕು ಎಂಬುದನ್ನು ಸ್ಕೌಟ್ ಗೈಡ್ ನಿಂದ ಕಲಿಯಬಹುದು ಎಂದು ತಿಳಿಸಿದರು.

ಮಕ್ಕಳು ಸ್ಕೌಟ್ ಗೈಡ್ ನಿಂದ ಪಡೆದ ಅನುಭವ, ಸ್ಕೌಟ್ ಗೈಡ್‌ನೊಂದಿಗೆ ತನ್ನ ಪ್ರಯಾಣ ಇದರ ಬಗ್ಗೆ ತನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಸ್ಕೌಟ್ಸ್ ಗೈಡ್ಸ್ ಪ್ರತಿಜ್ಞೆಯನ್ನು ಪುನರ್ ಉಚ್ಚರಿಸಿದರು. ಕಿರು ನಾಟಕದ ಮೂಲಕ ಹಿರಿಯರಿಗೆ ಸಹಾಯ ಮಾಡುವ ಸಮುದಾಯ ಚಟುವಟಿಕೆಯ ಬಗ್ಗೆ ಮನವರಿಕೆ ಮಾಡಲಾಯಿತು.

ವೇದಿಕೆಯಲ್ಲಿ ಮುಖ್ಯ ಶಿಕ್ಷಕಿ ಹೇಮಲತಾ ಎಂ.ಆರ್. ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಕಾರ್ಯದರ್ಶಿ ಪ್ರಮೀಳಾ ಪೂಜಾರಿ ಉಪಸ್ಥಿತರಿದ್ದರು.

ಗೈಡ್ ವಿದ್ಯಾರ್ಥಿಗಳಾದ ಪ್ರಾಪ್ತಿ ವಿ. ಶೆಟ್ಟಿ ನಿರೂಪಿಸಿ, ಸಂಜನಾ ಸ್ವಾಗತಿಸಿ, ಪರಿಣಿತ ಧನ್ಯವಾದವಿತ್ತರು.
ಸ್ಕೌಟ್ ಗೈಡ್ ಶಿಕ್ಷಕರುಗಳಾದ ನೀತಾ ಕೆ.ಎಸ್.,ಕಾರುಣ್ಯ, ಗೀತ ಪಿ, ಜಯಲಕ್ಷ್ಮಿ, ಮಂಜುನಾಥ, ಜಯರಾಮ್, ರಮ್ಯಾ, ಪ್ರಮೀಳಾ ಎನ್ ಸಹಕರಿಸಿದರು.

Related posts

ನೈತಿಕ ಮೌಲ್ಯಾಧಾರಿತ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿನಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಕರ್ನೋಡಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ ಪ್ರಕರಣ: ವಾರೀಸುದಾರರ ಪತ್ತೆಗೆ ಮನವಿ

Suddi Udaya

ಪೆರಾಡಿ ಬಿಜೆಪಿ ಶಕ್ತಿಕೇಂದ್ರದ ಬೂತ್ ಸಮಿತಿಯ ನೂತನ ಅದ್ಯಕ್ಷರಾಗಿ ರವಿ ಕುಲಾಲ್ , ಕಾರ್ಯದರ್ಶಿಯಾಗಿ ವಿಶ್ವನಾಥ ಶೆಟ್ಟಿ

Suddi Udaya

ಉಜಿರೆ ಎಸ್.ಡಿ.ಎಂ ಮಹಿಳಾ ಐ.ಟಿ.ಐ ಕಾಲೇಜಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ಹಾಗೂ ಭಿತ್ತಿ ಪತ್ರಿಕೆ ಅನಾವರಣ

Suddi Udaya

ಅಂಡಿಂಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಮತ್ತು ಮಲೇರಿಯಾ ಜ್ವರದ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya
error: Content is protected !!