September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಜೀವ ವೈವಿಧ್ಯ ನಿರ್ವಹಣಾ ಸಮಿತಿಗಳ ತರಬೇತಿ

ಬೆಳ್ತಂಗಡಿ: ಕರ್ನಾಟಕ ಜೀವ ವೈವಿಧ್ಯ ಮಂಡಳಿ ಬೆಂಗಳೂರು, ತಾಲೂಕು ಪಂಚಾಯತ್ ಬೆಳ್ತಂಗಡಿ ಹಾಗೂ ಗ್ರಾಮ ಮಟ್ಟದ ಜೀವ ವೈವಿಧ್ಯ ನಿರ್ವಹಣಾ ಸಮಿತಿಗಳ ಸಹಯೋಗದೊಂದಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಮಟ್ಟದ ಜೀವ ವೈವಿಧ್ಯ ನಿರ್ವಹಣಾ ಸಮಿತಿಗಳ ಸದಸ್ಯರಿಗೆ ಹಾಗೂ ಇಲಾಖಾಧಿಕಾರಿಗಳಿಗೆ ಜೀವ ವೈವಿಧ್ಯ ಕಾಯಿದೆಯ ಕುರಿತು ಅರಿವು ಮೂಡಿಸುವ ತರಬೇತಿ ಕಾರ್ಯಕ್ರಮವು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜರುಗಿತು.

ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ತರಬೇತಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.

ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಉಪನಿರ್ದೇಶಕಿ ಶ್ರೀಮತಿ ಪವಿತ್ರ ಮತ್ತು ತಾಂತ್ರಿಕ ಕಾರ್ಯನಿರ್ವಾಹಕ ಪ್ರಸನ್ನ ಕೆ.ಆರ್. ಜೀವ ವೈವಿಧ್ಯ ಕಾಯಿದೆಯ ಕುರಿತು ಮಾಹಿತಿಯನ್ನು ನೀಡಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ ಸ್ವಾಗತಿಸಿ, ನಿರೂಪಿಸಿದರು.

Related posts

ಪಾಲೇದು : ನಂಜ ಸಂಕಪ್ಪ ರೈ ನಿಧನ

Suddi Udaya

ಉಜಿರೆ: ಮಲೆಬೆಟ್ಟುನಲ್ಲಿ ರೈತರಿಗೆ ಹೊರ ಆವರಣ ಕೃಷಿ ತರಬೇತಿ

Suddi Udaya

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಆರಂಭ: ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ನಡ ಪ್ರೌಢ ಶಾಲೆ ಹಾಗೂ ಕಾಲೇಜಿಗೆ ನುಗ್ಗಿದ ಕಳ್ಳರು: ಸಿಸಿ ಕ್ಯಾಮರ ಹಾಗೂ ದಾಖಲೆ ಪತ್ರಗಳಿಗೆ ಹಾನಿ

Suddi Udaya

ತಾಲೂಕಿನ ಪ್ರಸಿದ್ದ ದೈವಪಾತ್ರಿ ರಾಮಣ್ಣ ಪೂಜಾರಿ ಹುಂಬೆಜೆ ನಿಧನ

Suddi Udaya

ಕಕ್ಕಿಂಜೆಯ ವೃದ್ಧ ದಂಪತಿಗಳ ಕೊಲೆ ಪ್ರಕರಣ: ಆರೋಪಿ ಗದಗದ ರಾಜುಗೆ ಜೀವಾವಧಿ ಶಿಕ್ಷೆ ಪ್ರಕಟ

Suddi Udaya
error: Content is protected !!