23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನದಲ್ಲಿ 1250 ಬಿದಿರು ಗಿಡ ವಿತರಣಾ ಕಾರ್ಯಕ್ರಮ

ಮಚ್ಚಿನ: ಬ್ಯಾಂಬೂ ಸೊಸೈಟಿ ಆಪ್ ಇಂಡಿಯಾ ಬಿದಿರು ಗ್ರಾಮಗಳ ಕ್ಲಸ್ಟರ್ ಯೋಜನೆ ಹಾಗೂ ಬೆಳ್ತಂಗಡಿ ರಬ್ಬರ್ ಸೊಸೈಟಿ ಹಾಗೂ ಶ್ರೀ ಕ್ಷೇ ಧ. ಗ್ರಾ. ಯೋ ಬಿ.ಸಿ. ಟ್ರಸ್ಟ್ ಗುರುವಾಯನಕೆರೆ ಸಹಕಾರದೊಂದಿಗೆ 1250 ಬಿದಿರು ಗಿಡ ವಿತರಣೆ ಕಾರ್ಯಕ್ರಮ ನಡೆಯಿತು.

ಬಳ್ಳಮಂಜ ಅನಂತೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಹರ್ಷ ಸಂಪಿಗೆತ್ತಾಯ, ದೇವಸ್ಥಾನ ಗುಮಾಸ್ತ ಬಾಲಕೃಷ್ಣ ಭಟ್ ಹಾಗೂ ಸುಧೀರ್ ಕುಮಾರ್ ಶೆಟ್ಟಿ (ಕೋರ ಬಿಟ್ಟು ಮನೆ) ಅವರಿಗೆ ಬಿದಿರು ಗಿಡವನ್ನು ಕೃಷಿ ವಿಭಾಗದ ಯೋಜನಾಧಿಕಾರಿ ಬಾಲಕೃಷ್ಣ ರವರು ವಿತರಣೆ ಮಾಡಿದರು.

ಬಿದಿರು ಬ್ಯಾಂಬೂ ಸೊಸೈಟಿಯ ಮೇಲ್ವಿಚಾರಕ ಕುಮಾರನಾಥ್ ಬಿದಿರು ಕೃಷಿ ಬಗ್ಗೆ ಮಾತನಾಡಿ ಬಿದಿರು ವೇಗವಾಗಿ ಬೆಳೆಯುವ ಕೃಷಿಯಾಗಿದೆ ಬಿದಿರಿನ ಬಹುಮುಖ ಉಪಯೋಗಗಳು ನಿರ್ಮಾಣ ಕಟ್ಟಡದ ಒಳಾಂಗಣ ಅಲಂಕಾರಕ್ಕಾಗಿ, ಪೀಠೋಪಕರಣಗಳ ತಯಾರಿಕೆಗಾಗಿ ಅಗರಬತ್ತಿ ತಯಾರಿಕೆಗೆ ಕಾಗದ ತಯಾರಿಕೆಗೆ ಅತಿ ಹೆಚ್ಚು ಉಪಯೋಗವಾಗುತ್ತದೆ ಬಿದಿರು ಗಿಡ ನಾಟಿ ಮಾಡುವ ವಿಧಾನ ಬಳಸಬೇಕಾದ ಗೊಬ್ಬರದ ಬಗ್ಗೆ ಮಾಹಿತಿಯನ್ನು ನೀಡಲಾಯಿತು

ಕಾರ್ಯಕ್ರಮದಲ್ಲಿ ಮಡಂತ್ಯಾರ್ ವಲಯದ ಮೇಲ್ವಿಚಾರಕ ಕೇಶವ ನಾಯ್ಕ, ಒಕ್ಕೂಟದ ಅಧ್ಯಕ್ಷವಿಜಯ್ ಮಡಕ್ಕಿಲ, ಮಚ್ಚಿನ ಒಕ್ಕೂಟ ಅಧ್ಯಕ್ಷೆ ಶ್ರೀಮತಿ ಸುಧಾ, ಕೃಷಿ ಮೇಲ್ವಿಚಾರಕ ಕೃಷ್ಣ, ಮಚ್ಚಿನ ಸೇವಾ ಪ್ರತಿನಿಧಿ ಪರಮೇಶ್ವರ, ಕುದ್ರಡ್ಕ ಸೇವಾ ಪ್ರತಿನಿಧಿ ಶ್ರೀಮತಿ ನಂದಿನಿ, ಶೌರ್ಯ ಘಟಕದ ಪ್ರತಿನಿಧಿ ಪ್ರಭಾಕರ ಉಪಸ್ಥಿತರಿದ್ದರು.

Related posts

ಕೋರಂ ಕೊರತೆ ಹಾಗೂ ಅಧಿಕಾರಿಗಳು ಭಾಗವಹಿಸದ್ದರಿಂದ ಕೊಕ್ಕಡ ಗ್ರಾಮಸಭೆ ಮುಂದೂಡಿಕೆ

Suddi Udaya

ಕಾನರ್ಪ ಕೋಡಿಯಾಲ್ ಬೈಲ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಕಾನರ್ಪ ಪ್ರೀಮಿಯರ್ ಲೀಗ್ – 2024 ಕ್ರಿಕೇಟ್ ಪಂದ್ಯಾಟ

Suddi Udaya

ಗುರುವಾಯನಕೆರೆ ಶ್ರೀ ಶಾರದಾಂಭ ಭಜನಾ ಮಂಡಳಿಯ ವತಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ಡಾ. ಹೆಗ್ಗಡೆಯವರ ಬಗ್ಗೆ ಅಪಪ್ರಚಾರಕ್ಕೆ ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳಿಂದ ಖಂಡನೆ; ಹೆಗ್ಗಡೆಯವರ ಮತ್ತು ಅವರ ಕುಟುಂಬವರ್ಗದವರ ಬಗ್ಗೆಅವಮಾನಕರ ಮಾತುಗಳನ್ನಾಡುವವರ ಅನಪೇಕ್ಷಿತ‌ ಚಟುವಟಿಕೆಗಳನ್ನು ನಾವು ಬಲವಾಗಿ ವಿರೋಧಿಸುತ್ತೇವೆ; ಉಜಿರೆಯ ಎಸ್ ಡಿ ಎಮ್ ಶಿಕ್ಷಣ ಸಂಸ್ಥೆಗಳಕಾರ್ಯದರ್ಶಿಗಳು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಎಸ್‌ಡಿಎಂ ಶಾಲಾ ಕಾಲೇಜುಗಳ ಪ್ರಾಂಶುಪಾಲರು ಮತ್ತು ಸಿಬ್ಬಂದಿಗಳು ಪತ್ರಿಕಾ ಹೇಳಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಖಾಸಗಿ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಶಿವಾನಂದ ಪ್ರಭು ಅವರಿಗೆ ಶ್ರದ್ಧಾಂಜಲಿ

Suddi Udaya
error: Content is protected !!