September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡಾಜೆ: ವಿಶ್ವ ಸ್ಕಾರ್ಫ್ ದಿನಾಚರಣೆ

ಮುಂಡಾಜೆ: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧೀನಕ್ಕೊಳಪಟ್ಟ ಮುಂಡಾಜೆ ಪದವಿಪೂರ್ವ ಕಾಲೇಜು ಮುಂಡಾಜೆ ಹಾಗೂ ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿನ ಕಬ್ಸ್-ಬುಲ್ ಬುಲ್, ಸೌಟ್ಸ್-ಗೈಡ್ಸ್, ರೋವರ್ಸ್ ಮತ್ತು ರೇಂಜರ್ಸ್ ವಿಭಾಗಗಳ ಸಹಯೋಗದಲ್ಲಿ ವಿಶ್ವ ಸ್ಕಾರ್ಫ್ ದಿನಾಚರಣೆಯನ್ನು ಆಚರಿಸಲಾಯಿತು.

ರೋವರ್ ಸ್ಕೌಟ್ ಲೀಡರ್ ಕೃಷ್ಣ ಕಿರಣ್ ಕೆ. ಸ್ಕಾರ್ಫ್‌ನ ಮಹತ್ವ, ಉಪಯೋಗಳು ಹಾಗೂ ವಿಶ್ವ ಸ್ಕಾರ್ಫ್ ದಿನಾಚರಣೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು.

ರೇಂಜರ್ ಲೀಡರ್ ವಸಂತಿ ಅತಿಥಿಗಳಿಗೆ ಸ್ಕಾರ್ಫ್‌ನ್ನು ತೊಡಿಸುವ ಮೂಲಕ ವಿನೂತನ ರೀತಿಯಲ್ಲಿ ಕಾರ್ಯಕ್ರಮವನ್ನು ಆಚರಿಸಲಾಯಿತು ಹಾಗೂ ರೋವರ್ಸ್ ರೇಂಜರ್ಸ್ ವಿಭಾಗದ ನೂತನ ಸ್ಕಾರ್ಫ್‌ನ್ನು ಬಿಡುಗಡೆಗೊಳಿಸಲಾಯಿತು.

ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಚಂದ್ರಮತಿ ಅಧ್ಯಕ್ಷತೆಯನ್ನು ವಹಿಸಿದ್ದರು. ಸರಸ್ವತಿ ಪ್ರಾಥಮಿಕ ಶಾಲೆಯ ಹಿರಿಯ ಶಿಕ್ಷಕಿ ಶ್ರೀಜಾ ಉಪಸ್ಥಿತರಿದ್ದರು.

ರೇಂಜರ್ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಆರಂಭವಾದ ರೇಂಜರ್ ವಿದ್ಯಾರ್ಥಿಗಳಾದ ಮೋಕ್ಷಿತಾ ಕಾರ್ಯಕ್ರಮ ನಿರೂಪಿಸಿ, ಹೊಂಗಿರಣ ಸ್ವಾಗತಿಸಿ, ಜಲಜಾಕ್ಷಿ ಧನ್ಯವಾದಗೈದರು. ಗೈಡ್ ಕ್ಯಾಪ್ಟನ್ ರೇವತಿ, ಕಬ್ ಮಾಸ್ಟರ್ ಪ್ರೇಮಾ, ಫ್ಲಾಕ್ ಲೀಡರ್ ಭಾರತಿ ಸಹಕರಿಸಿದರು.

Related posts

ಧರ್ಮಸ್ಥಳ: ಮುಂಡ್ರುಪಾಡಿ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ರಾಜ್ಯಕ್ಕೆ 8ನೇ ರ‍್ಯಾಂಕ್ ಪಡೆದ ಸಂಜನಾ ಪೈ ಯವರಿಗೆ ಶಾಸಕ ಹರೀಶ್‌ ಪೂಂಜರಿಂದ ಸನ್ಮಾನ

Suddi Udaya

ಬುರುಡೆ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾದ ಪ್ರದೀಪ್ : ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ ಎಸ್.ಐ.ಟಿ

Suddi Udaya

ಬುರುಡೆ ಪ್ರಕರಣ: ಚಿನ್ನಯ್ಯನನ್ನು ಮಹಜರು ನಡೆಸಲು ಕರೆದುಕೊಂಡು ಹೋದ ಎಸ್.ಐ.ಟಿ

Suddi Udaya

ಕಬಡ್ಡಿ ಪಂದ್ಯಾಟ: ವೇಣೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ

Suddi Udaya

ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ನಗರ ಭಜನಾ ಸಪ್ತಾಹದ ಪ್ರಯುಕ್ತ ಪಿಲಿ- ನಲಿಕೆ

Suddi Udaya
error: Content is protected !!