July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆಟಿಡೊಂಜಿ ಕೆಸರ್ದ ಗೊಬ್ಬು ವತಿಯಿಂದ ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್‌ರಿಗೆ ಗೌರವಾರ್ಪಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ರೂರಲ್ ಡೆವಲಪ್ಮೆಂಟ್ ಪ್ರಾಜೆಕ್ಟ್ ಬಿ.ಸಿ ಟ್ರಸ್ಟ್, ಎಸ್.ಡಿ.ಎಂ ಭಜನಾ ಪರಿಷತ್ ಹಾಗೂ ಪ್ರಗತಿಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಗುರುವಾಯನಕೆರೆ ಜಂಟಿಯಾಗಿ ಜು.೨೦ರಂದು ಆಯೋಜಿಸಿದ್ದ ಆಟಿಡೊಂಜಿ ಕೆಸರ್ದ ಗೊಬ್ಬು 2025 ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ರೂರಲ್ ಡೆವಲಪ್ಮೆಂಟ್ ಪ್ರಾಜೆಕ್ಟ್ ಬಿ.ಸಿ ಟ್ರಸ್ಟ್, ಇದರ ನಿರ್ದೇಶಕ ದಿನೇಶ್ ಕುಮಾರ್ ರವರ ಸೂಚನೆಯಂತೆ ಎಕ್ಸೆಲ್ ಶಿಕ್ಷಣ ಸಂಸ್ಥೆಗೆ ಭೇಟಿ ನೀಡಿ ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರನ್ನು ಭೇಟಿ ಮಾಡಿ ಅವರಿಗೆ ಶಿಕ್ಷಣ ಕ್ಷೇತ್ರದ ಸಾಧನೆಗಾಗಿ ಲಭಿಸಿದ ವಿಜಯ ರತ್ನ ಪ್ರಶಸ್ತಿಯನ್ನು ಪಡೆದುದಕ್ಕಾಗಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಗುರುವಾಯನಕೆರೆ ವಲಯದ ಯೋಜನಾಧಿಕಾರಿ ಅಶೋಕ್ ಕುಮಾರ್, ಎಸ್.ಡಿ.ಎಂ ಭಜನಾ ಪರಿಷತ್ ಗುರುವಾಯನಕೆರೆ ವಲಯದ ಕಾರ್ಯದರ್ಶಿ ಸಂದೇಶ್ ಮದ್ದಡ್ಕ, ಪ್ರಗತಿಬಂಧು ಸ್ವ ಸಹಾಯ ಸಂಘಗಳ ಒಕ್ಕೂಟದ ಸದಸ್ಯರು ಎಸ್.ಡಿ.ಎಂ ಐ.ಟಿ.ಐ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಮತ್ತು ಎಸ್.ಡಿ.ಎಂ ಭಜನಾ ಪರಿಷತ್‌ನ ಗುರುಗಳು ಹಾಗೂ ಶೌರ್ಯ ತಂಡದ ನಾಗೇಶ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಕೋಳಿ ಸಾಕಾಣಿಕೆದಾರರ ಸಮಾಲೋಚನಾ ಸಭೆ

Suddi Udaya

ಉಜಿರೆಯಲ್ಲಿ ಅರೆಭಾಷೆ ಅಭಿಮಾನಿ ಬಳಗದಿಂದ “ಆಟಿನ ನೆಂಪುಗ ” ಕಾರ್ಯಕ್ರಮ

Suddi Udaya

ಗರ್ಡಾಡಿ: ಕುಂಡದಬೆಟ್ಟು ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

Suddi Udaya

ಡಿ.6-8 ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ, ಶ್ರೀ ದುರ್ಗಾಗಣೇಶ ಸಭಾಭವನ ಲೋಕಾರ್ಪಣೆ

Suddi Udaya

ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ ಯೋಗೀಶ್ ಕುಮಾರ್ ನಡಕ್ಕರ

Suddi Udaya

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಕಾಡಾನೆ ನಿರಂತರ

Suddi Udaya
error: Content is protected !!