22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಓಬಿಸಿ ಮೋರ್ಚಾದ ಸಭೆ

ಬೆಳ್ತಂಗಡಿ: ಓಬಿಸಿ ಮೋರ್ಚಾದ ಸಭೆ ತಾಲೂಕು ಓಬಿಸಿ ಮೋರ್ಚಾದ ಅಧ್ಯಕ್ಷ ರತ್ನಾಕರ ಬುಣ್ಣನ್ ಅಧ್ಯಕ್ಷತೆಯಲ್ಲಿ ಆ.೧ರಂದು ನಡೆಯಿತು.

ಓಬಿಸಿ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬೆಳ್ತಂಗಡಿ ಓಬಿಸಿ ಮೋರ್ಚಾದ ವೀಕ್ಷಕ ಮೋನಪ್ಪ ದೇವಸ್ಯ ಓಬಿಸಿ ಮೋರ್ಚಾದ ಕಾರ್ಯ ಚಟುವಟಿಕೆ ಬಗ್ಗೆ ಹಾಗೂ ಓಬಿಸಿ ಮೋರ್ಚಾದ ಸಂಘಟನೆಯ ಬಗ್ಗೆ ಮಾಹಿತಿ ನೀಡಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಶಿಧರ್ ಕಲ್ಮಂಜ ತಾಲೂಕು ಓಬಿಸಿ ಮೋರ್ಚಾದ ಪದಾಧಿಕಾರಿಗಳ ಸಭೆಗಳ ಬಗ್ಗೆ ಮಾಹಿತಿ ನೀಡಿದರು.

ತಾಲೂಕು ಒಬಿಸಿ ಮೋರ್ಚಾದ ಪ್ರಭಾರಿ ಚಂದ್ರಶೇಖರ್ ಪೆನ್ನೆ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಶಕ್ತಿಕೇಂದ್ರಗಳಿಂದ ಒಬ್ಬೊಬ್ಬರನ್ನು ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರನ್ನು ಓಬಿಸಿ ಮೋರ್ಚಾಕ್ಕೆ ಸಂಘಟನೆಯ ದೃಷ್ಟಿಯಿಂದ ಸೇರಿಸಿಕೊಳ್ಳುವಂತೆ ಮಾಹಿತಿ ನೀಡಿದರು.

ಮಂಡಲದ ಪ್ರಭಾರಿಗಳಾದ ಶ್ರೀಮತಿ ಅಶ್ವಿನಿ ನಾಯಕ್ ಸಂಘಟನೆ ದೃಷ್ಟಿಯಿಂದ ಮುಂದಿನ ಯೋಜನೆಯ ಬಗ್ಗೆ ಮಾಹಿತಿ ನೀಡಿದರು.

ಸಭೆಯಲ್ಲಿ ತಾಲೂಕು ಓಬಿಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸುಧೀರ್ ಭಂಡಾರಿ ವೇಣೂರು, ವಿಠಲ ಆಚಾರ್ಯ ಗುರುವಾಯನಕೆರೆ ಹಾಗೂ ಓಬಿಸಿ ಮೋರ್ಚಾದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು

ಪ್ರಧಾನ ಕಾರ್ಯದರ್ಶಿ ಸುಧೀರ್ ಭಂಡಾರಿ ಸ್ವಾಗತಿಸಿ, ಉಪಾಧ್ಯಕ್ಷ ರಾಜೇಶ್ ಮೂಡುಕೋಡಿ ವಂದಿಸಿದರು.

Related posts

ಗೇರುಕಟ್ಟೆ ಹಿರಿಯರಾದ ಹಾಮದ್ ಕುಂಇೆ ನಿಧನ

Suddi Udaya

ಬಸದಿಗಳಿಗೆ ಅನುದಾನ : ಸವಣಾಲು ಕ್ಷೇತ್ರದ ಬಸದಿಯ ಅಭಿವೃದ್ಧಿಗೆ ರೂ.9 ಲಕ್ಷ, ಪುದುವೆಟ್ಟು ಬಸದಿಗೆ ರೂ.50 ಲಕ್ಷ ಬಿಡುಗಡೆ

Suddi Udaya

ಸುವರ್ಣ ನ್ಯೂಸ್ ಮತ್ತು ಕನ್ನಡ ಪ್ರಭ ವತಿಯಿಂದ ಖ್ಯಾತ ಮೂತ್ರರೋಗ ತಜ್ಞ ಡಾ| ಸದಾನಂದ ಪೂಜಾರಿರವರಿಗೆ ಆರೋಗ್ಯ ಸೇವಾ ಶ್ರೇಷ್ಠತೆ ಪ್ರಶಸ್ತಿ

Suddi Udaya

ಧರ್ಮಸ್ಥಳ: ಗಾಳಿ ಮಳೆಗೆ ವಿದ್ಯುತ್ ಲೈನ್ ಮೇಲೆ ಬಿದ್ದ ಮರ

Suddi Udaya

ಉರುವಾಲು ಗ್ರಾಮದ ಬನಾರಿಯಲ್ಲಿ ರಸ್ತೆಗೆ ಉರುಳಿದ ಬೃಹತ್ ಮರ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya
error: Content is protected !!